'ರಾಹುಲ್ ಗಾಂಧಿ ಗೋತ್ರ ಯಾವುದು? ಅವರು ತೊಡುವ ಜನಿವಾರ ಯಾವುದು?'
ಇಂದೋರ್, ಅಕ್ಟೋಬರ್ 29: "ರಾಹುಲ್ ಗಾಂಧಿ ಅವರು ಜನಿವಾರ ಧರಿಸುವುದಾದರೆ, ಅವರು ಯಾವರೀತಿಯ ಜನಿವಾರ(ಯಜ್ಞೋಪವಿತ) ಧರಿಸುತ್ತಾರೆ? ಅವರ ಗೋತ್ರ ಯಾವುದು?" ಎಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಪ್ರಶ್ನಿಸಿದ್ದಾರೆ.
ಮಧ್ಯಪ್ರದೇಶದ ಉಜ್ಜೈನಿಯ ಮಹಾಕಾಳೇಶ್ವರ ದೇವಾಲಯಕ್ಕೆ ಪ್ರಾರ್ಥನೆ ಸಲ್ಲಿಸಲು ತೆರಳಿದ ರಾಹುಲ್ ಗಾಂಧಿ ಅವರನ್ನು ಪಾತ್ರ ಅಣಕಿಸಿದರು.
ಚುನಾವಣೆಯ ಸಮಯದಲ್ಲಿ ಮಾತ್ರವೇ ರಾಹುಲ್ ಗಾಂಧಿ ಅವರ ಟೆಂಪಲ್ ರನ್ ಆರಂಭವಾಗುತ್ತದೆ. ಆದ್ದರಿಂದ ಅವರ ಗೋತ್ರ ಯಾವುದು ಮತ್ತು ಯಾವ ರೀತಿಯ ಜನಿವಾರ ಧರಿಸುತ್ತಾರೆ ಎಂಬುದನ್ನು ತಿಳಿಯಬೇಕಿದೆ ಎಂದು ಅವರು ಅಣಕವಾಡಿದ್ದಾರೆ.

ಯಾವ ಗೋತ್ರದವರು ರಾಹುಲ್?
ಜನಿವಾರ ಎಂಬುದು ಪವಿತ್ರ ದಾರ. ಅದನ್ನು ಆಸ್ತಿಕ, ಭಕ್ತ ಹಿಂದು ಧರಿಸುತ್ತಾನೆ. ಗೋತ್ರ ಎಂದರೆ ಯಾವ ಋಷಿ ಪರಂಪರೆಯ ಮೂಲದಿಂದ ಬಂದವರು ಎಂಬುದನ್ನು ತಿಳಿದುಕೊಳ್ಳುವುದಕ್ಕಿರುವ ಸಂಗತಿ. ಆದ್ದರಿಂದ ರಾಹುಲ್ ಗಾಂಧಿ ಅವರು ಯಾವ ಗೋತ್ರದವರು ಎಂಬುದನ್ನು ಹೇಳಲಿ, ಅವರು ಯಾವ ರೀತಿಯ ಜನಿವಾರ ಧರಿಸುತ್ತಾರೆ ಎಂಬುದನ್ನೂ ತಿಳಿಸಲಿ ಎಂದು ಪಾತ್ರ ಆಗ್ರಹಿಸಿದರು.

ಪ್ರಧಾನಿಯನ್ನು ಚೇಳಿಗೆ ಹೋಲಿಸಿದ್ದ ಕಾಂಗ್ರೆಸ್!
ಪ್ರಧಾನಿ ನರೇಂದ್ರ ಮೋದಿಯವರು ಶಿವಲಿಂಗದ ಮೇಲಿರುವ ಚೇಳಿನ ಹಾಗೆ. ಅದನ್ನು ಬರೀ ಕೈಯಲ್ಲಿ ಮುಟ್ಟುವುದೂ ಅಪಾಯ, ಚಪ್ಪಲಿಯಿಂದ ಹೊಡೆದು ಹಾಕುವುದಕ್ಕೂ ಸಾಧ್ಯವಿಲ್ಲ! ಎಂದು ಕಾಂಗ್ರೆಸ್ ಮುಖಂಡ ಶಶಿ ತರೂರ್ ಅವರು ನೀಡಿದ ಹೇಳಿಕೆ ಸಾಕಷ್ಟ ವಿವಾದ ಸೃಷ್ಟಿಸಿತ್ತು. ಕಾಂಗ್ರೆಸ್ ನ ಈ ಹೇಳಿಕೆಯ ನಂತರ ಒಂದೇ ದಿನದಲ್ಲಿ ಬಿಜೆಪಿ ರಾಹುಲ್ ಗಾಂಧಿಯವರ ಗೋತ್ರದ ಬಗ್ಗೆ ತಲೆಕೆಡಿಸಿಕೊಳ್ಳುತ್ತಿದೆ!

ಶಶಿ ತರೂರ್ ಉಚ್ಚಾಟನೆಗೆ ಆಗ್ರಹ
ಪ್ರಧಾನಿ ನರೇಂದ್ರ ಮೋದಿ ಅವರನ್ನು ಚೇಳಿಗೆ ಹೋಲಿಸಿದ್ದಲ್ಲದೆ, ಶಿವಲಿಂಗಕ್ಕೂ ಅವಮಾನ ಮಾಡಿದ ಶಶಿ ತರೂರ್ ಅವರನ್ನು ಪಕ್ಷದಿಂದ ಕಿತ್ತೆಸೆಯುವಂತೆಯೂ ಸಂಬಿತ್ ಪಾತ್ರ ಒತ್ತಾಯಿಸಿದರು. ಆರೆಸ್ಸೆಸ್ ನ ಕೆಲ ಮುಖಂಡರಿಗೇ ಪ್ರಧಾನಿ ಮೋದಿಯವರ ನಡೆ ಇಷ್ಟವಾಗುತ್ತಿಲ್ಲ, ಅವರನ್ನು ನಿಯಂತ್ರಿಸುವುದಕ್ಕೆ ಸಾಧ್ಯವಾಗುತ್ತಿಲ್ಲ ಎಂದ ಶಶಿ ತರೂರ್, ನಂತರ ಮೋದಿ ಅವರನ್ನು ಚೇಳಿಗೆ ಹೋಲಿಸಿದ್ದರು.

ಚುನಾವಣೆ ನೆಲದಲ್ಲಿ ಕೆಸರೆರಚಾಟ ಜೋರು!
ಮಧ್ಯಪ್ರದೇಶದಲ್ಲಿ ನವೆಂಬರ್ 28 ರಂದು ಚುನಾವಣೆ ನಡೆಯಲಿದ್ದು, ಡಿ.11 ರಂದು ಫಲಿತಾಂಶ ಹೊರಬೀಳಲಿದೆ. ಒಟ್ಟು ವಿಧಾನಸಭಾ ಕ್ಷೇತ್ರಗಳು 230. ಪ್ರಸ್ತುತ ಬಿಜೆಪಿ ಸರ್ಕಾರ ಆಡಳಿತ ನಡೆಸುತ್ತಿದೆ. ಅಧಿಕಾರ ಪಡೆಯಲು ಬೇಕಾದ ಮ್ಯಾಜಿಕ್ ನಂಬರ್ 116. ಚುನಾವಣೆಯ ಹಿನ್ನೆಲೆಯಲ್ಲಿ ಪರಸ್ಪರ ರಾಜಕೀಯ ಪಕ್ಷಗಳು ಕೆಸರೆರಚಾಟ ಆರಂಭಿಸಿವೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications