ಮಧ್ಯಪ್ರದೇಶದಲ್ಲಿ ಕಮಲ್ ನಾಥ್ ಮಾಡಲಾಗದಿದ್ದನ್ನು ರಾಜಸ್ಥಾನದಲ್ಲಿ ಗೆಹ್ಲೋಟ್ ಮಾಡಿ ತೋರಿಸಿದರು
ರಾಜಸ್ಥಾನದಲ್ಲಿ ಉಪಮುಖ್ಯಮಂತ್ರಿ ಮತ್ತು ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷ ಸ್ಥಾನದಿಂದ ಸಚಿನ್ ಪೈಲಟ್ ಅವರನ್ನು ವಜಾಗೊಳಿಸಿದ ನಂತರ, ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸದ್ಯದ ಮಟ್ಟಿಗೆ ಮೇಲುಗೈ ಸಾಧಿಸಿದ್ದಾರೆ.
Recommended Video
ರಾಹುಲ್ ಗಾಂಧಿಯವರ ಆಪ್ತ ವಲಯದಲ್ಲಿ ಪೈಲಟ್ ಗುರುಸಿಕೊಂಡಿದ್ದರೂ, ರಾಜಸ್ಥಾನದ ಸಿಎಲ್ಪಿ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರವಾಗಿದ್ದರಿಂದ, ಪೈಲಟ್ ಅವರ ತಲೆದಂಡಕ್ಕೆ ಹೈಕಮಾಂಡ್ ಒಪ್ಪಿಗೆ ಸೂಚಿಸಲೇ ಬೇಕಾಯಿತು.
ರಾಜಸ್ಥಾನದಲ್ಲಿ ಒಂದು ವೇಳೆ ವಿಶ್ವಾಸಮತ ಸಾಬೀತು ಪಡಿಸಬೇಕಾದ ಪರಿಸ್ಥಿತಿ ಎದುರಾದಲ್ಲಿ, ಅದು ಸಿಎಂ ಗೆಹ್ಲೋಟ್ ಗೆ ಸುಲಭದ ತುತ್ತೇನೂ ಅಲ್ಲ. ಪೈಲಟ್ ಬಣದ ಶಾಸಕರ ಲೆಕ್ಕ ತೆಗೆದುಕೊಳ್ಲದಿದ್ದರೂ, ಗೆಹ್ಲೋಟ್ ಗೆ ಬಹುಮತವಿದೆ ಎನ್ನುವುದು ಈಗಿನ ಲೆಕ್ಕಾಚಾರ.
ರಾಜಸ್ಥಾನದ ಕಾಂಗ್ರೆಸ್ ಸಿಎಲ್ಪಿ ಸಭೆಯಲ್ಲಿ, ವಜಾಗೊಳಿಸುವಂತಹ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಬಹುಷಃ ಸಚಿನ್ ಪೈಲಟ್ ನಿರೀಕ್ಷಿಸಿರಲಿಕ್ಕಿಲ್ಲ. ಅಶೋಕ್ ಗೆಹ್ಲೋಟ್ ತೆಗೆದುಕೊಂಡಂತಹ ನಿರ್ಧಾರವನ್ನು ಮಧ್ಯಪ್ರದೇಶದಲ್ಲಿ ಕಮಲ್ ನಾಥ್ ತೆಗೆದುಕೊಳ್ಳಲು ವಿಫಲರಾಗಿದ್ದರು.

ಕಮಲ್ ನಾಥ್ ವಿಫಲ
ಕೆಲವು ತಿಂಗಳ ಹಿಂದೆ ಮಧ್ಯಪ್ರದೇಶದಲ್ಲೂ ಕಾಂಗ್ರೆಸ್ ಇದೇ ರೀತಿಯ ಪರಿಸ್ಥಿತಿಯನ್ನು ಎದುರಿಸಿತ್ತು. ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಬಿಜೆಪಿ-ಕಾಂಗ್ರೆಸ್ ಬಲಾಬಲ ಒಂದೇ ರೀತಿಯಲ್ಲಿ ಇಲ್ಲದಿದ್ದರೂ, ಅಶೋಕ್ ಗೆಹ್ಲೋಟ್ ತೆಗೆದುಕೊಂಡಂತಹ ಗಟ್ಟಿ ನಿರ್ಧಾರವನ್ನು ಕಮಲ್ ನಾಥ್ ತೆಗೆದುಕೊಳ್ಳಲು ವಿಫಲರಾದರು.

ಸಚಿನ್ ಪೈಲಟ್ ಅವರ ಜೊತೆಗಿನ ಭಿನ್ನಾಭಿಪ್ರಾಯ
ಮಧ್ಯಪ್ರದೇಶದಲ್ಲಿ ಇದ್ದಂತಹ ಪರಿಸ್ಥಿತಿ ರಾಜಸ್ಥಾನದಲ್ಲೂ ಇತ್ತು. ಗೆಹ್ಲೋಟ್ ಸರಕಾರ ಅಧಿಕಾರಕ್ಕೆ ಬಂದ ದಿನದಿಂದ, ಸಚಿನ್ ಪೈಲಟ್ ಅವರ ಜೊತೆಗಿನ ಭಿನ್ನಾಭಿಪ್ರಾಯ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇತ್ತು. ಇದರ ಮುನ್ಸೂಚನೆಯನ್ನು ಅರಿತ ಗೆಹ್ಲೋಟ್ ತನ್ನ ಬಣದ ಜೊತೆಗೆ ಗುರುತಿಸಿಕೊಂಡಿರುವ ಶಾಸಕರನ್ನು ಹಿಡಿದಿಟ್ಟುಕೊಳ್ಳುವಲ್ಲಿ ಯಶಸ್ವಿಯಾದರು.

ಬಿಜೆಪಿಯ ಸರಕಾರ ಉರುಳಿಸುವ ಕಾರ್ಯತಂತ್ರ
ಆದರೆ, ಮಧ್ಯಪ್ರದೇಶದಲ್ಲಿ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸಕ್ಕೆ ಕಮಲ್ ನಾಥ್ ಮುಂದಾಗಿರಲಿಲ್ಲ. ಈ ಆಪಾದನೆ ಅವರ ಮೇಲೆ ಬರುತ್ತಲೇ ಇತ್ತು. ಇನ್ನು, ಬಿಜೆಪಿಯವರು ಸರಕಾರ ಉರುಳಿಸಲು ಕಾರ್ಯತಂತ್ರ ರೂಪಿಸುತ್ತಿದ್ದಾರೆ ಎನ್ನುವ ಖಚಿತ ಮಾಹಿತಿಯಿದ್ದರೂ, ಅವರು ತಡವಾಗಿ ಸ್ಪಂದಿಸಿದರು.

ಕಮಲ್ ನಾಥ್ ಮಾಡಲಾಗದಿದ್ದನ್ನು ರಾಜಸ್ಥಾನದಲ್ಲಿ ಗೆಹ್ಲೋಟ್ ಮಾಡಿ ತೋರಿಸಿದರು
ಇನ್ನು, ಪೈಲಟ್ ರೀತಿಯಲ್ಲಿ ಮಧ್ಯಪ್ರದೇಶದಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ ಕೂಡಾ ಪ್ರಭಾವಿ ಮುಖಂಡ. ಅವರು ಬಿಜೆಪಿಯ ಕೇಂದ್ರ ನಾಯಕರ ಜೊತೆ ಸಂಪರ್ಕದಲ್ಲಿದ್ದಾರೆ ಎನ್ನುವ ಮಾಹಿತಿಯಿದ್ದರೂ, ಕಮಲ್ ನಾಥ್, ಯಾವುದೇ ಕಠಿಣ ಕ್ರಮಕ್ಕೆ ಮುಂದಾಗಲಿಲ್ಲ. ಹಾಗಾಗಿ, ಮಧ್ಯಪ್ರದೇಶದಲ್ಲಿ ಕಮಲ್ ನಾಥ್ ಮಾಡಲಾಗದಿದ್ದನ್ನು ರಾಜಸ್ಥಾನದಲ್ಲಿ ಗೆಹ್ಲೋಟ್ ಮಾಡಿ ತೋರಿಸಿದರು ಎಂದು ಸದ್ಯದ ರಾಜಕೀಯ ಪರಿಸ್ಥಿತಿ ನೋಡಿದಾಗ ಅವಲೋಕಿಸಬಹುದು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications