ಉತ್ತರಾಖಂಡ ಹಿಮ ಪ್ರವಾಹ; ಅಷ್ಟಕ್ಕೂ ಘಟನೆ ಹಿಂದಿನ ಕಾರಣವೇನು?
ಡೆಹ್ರಾಡೂನ್, ಫೆಬ್ರುವರಿ 09: ಉತ್ತರಾಖಂಡದಲ್ಲಿ ಭಾನುವಾರ ಸಂಭವಿಸಿದ ಹಿಮಪ್ರವಾಹದಲ್ಲಿ ನೂರಾರು ಮನೆಗಳು ಕೊಚ್ಚಿಹೋಗಿ, ಎರಡು ಬೃಹತ್ ಅಣೆಕಟ್ಟುಗಳು ಹೇಳಹೆಸರಿಲ್ಲದಂತಾಗಿವೆ. ಹದಿಮೂರು ಹಳ್ಳಿಗಳು ಜಲಾವೃತವಾಗಿದ್ದು, ರಸ್ತೆ ಸಂಪರ್ಕ, ಸೇತುವೆಗಳೂ ಕುಸಿದುಹೋಗಿವೆ. ರಕ್ಷಣಾ ಕಾರ್ಯ ಮುಂದುವರೆದಿದೆ.
ಇದುವರೆಗೂ 26 ಮಂದಿ ಮೃತದೇಹಗಳು ದೊರೆತಿವೆ. ನಾಪತ್ತೆಯಾದ 171 ಜನರ ಸುಳಿವಿನ್ನೂ ಸಿಕ್ಕಿಲ್ಲ. ಆದರೆ ಘಟನೆಯ ಹಿಂದಿನ ಕಾರಣ ಮಾತ್ರ ಇನ್ನೂ ಅಸ್ಪಷ್ಟವಾಗಿದೆ. ಈ ಹಿಮ ಪ್ರವಾಹದ ಹಿಂದಿನ ಕಾರಣವೇನು? ಯಾವ ಅಂಶ ಈ ಪ್ರಾಕೃತಿಕ ವಿಕೋಪಕ್ಕೆ ಎಡೆ ಮಾಡಿಕೊಟ್ಟಿತು ಎನ್ನುವ ಕುರಿತು ವಿಜ್ಞಾನಿಗಳು ಪರಿಶೀಲನೆ ಕೈಗೊಂಡಿದ್ದಾರೆ. ಹಲವು ಸಂಸ್ಥೆಗಳು ಉಪಗ್ರಹ ಚಿತ್ರಗಳನ್ನಾಧರಿಸಿ ವಿಶ್ಲೇಷಣೆ ಮಾಡಿವೆ. ಅವುಗಳಲ್ಲಿ ಕೆಲವು ಇಲ್ಲಿವೆ. ಮುಂದೆ ಓದಿ...

ಪರ್ವತದಡಿಯ ನದಿಯಲ್ಲಿನ ಒತ್ತಡದಿಂದ ಪ್ರವಾಹ ಸಂಭವಿಸಿತೇ?
ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ದಿವೇಚಾ ಸೆಂಟರ್ ಫಾರ್ ಕ್ಲೈಮೇಟ್ ಚೇಂಜ್ ಈ ಘಟನೆ ಕುರಿತು ವಿಶ್ಲೇಷಣೆ ನಡೆಸಿದೆ. ಪರ್ವತಗಳ ಅಡಿಯಲ್ಲಿನ ಹಿಮ ನದಿ ಮೇಲಿನ ಒತ್ತಡ ಈ ಘಟನೆಗೆ ಕಾರಣವಿರಬಹುದು ಎಂದು ವಿಶ್ಲೇಷಿಸಿದೆ. ಈ ಅಂತರ ನದಿಯು ಸುಮಾರು 4.5 ಮಿಲಿಯನ್ ಕ್ಯೂಬಿಕ್ ಮೀಟರ್ ನಷ್ಟು ನೀರನ್ನು ಸಂಗ್ರಹಿಸಿಟ್ಟುಕೊಳ್ಳಬಹುದಾಗಿದ್ದು, ಇದರ ಮೇಲಿನ ಒತ್ತಡವೂ ಹಿಮಪ್ರವಾಹ ಸಂಭವಿಸಲು ಕಾರಣ ಎಂದು ಅಂದಾಜು ಮಾಡಿದೆ. ಹೆಚ್ಚಿನ ಮಟ್ಟದ ಅಂತರ ಜಲ ಶೇಖರಣೆಯಾಗಿ, ಮತ್ತೊಂದು ಕಡೆಯಿಂದ ನೀರು ಅಧಿಕ ಮಟ್ಟದಲ್ಲಿ ಹರಿದುಬಂದಿದ್ದು ಹಿಮಪ್ರವಾಹಕ್ಕೆ ಕಾರಣವಾಗಿದೆ ಹಾಗೂ ಕಣಿವೆಯಲ್ಲಿ ರಭಸದಿಂದ ಮುನ್ನುಗ್ಗಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

ಹಿಮ ಕುಸಿತದಿಂದ ಪ್ರವಾಹ
ಉತ್ತರ ನಂದಾದೇವಿ ಸಮೀಪ ಪರ್ವತದಡಿಯಲ್ಲಿ ಒತ್ತಡ ಹೆಚ್ಚಾಗಿ ನೀರು ರಭಸವಾಗಿ ಸ್ಫೋಟಗೊಂಡಿದ್ದು, ಇದರಿಂದ ಹಿಮ ಕುಸಿದಿದೆ. ಈ ಎಲ್ಲಾ ಅಂಶಗಳು ಒಟ್ಟಾಗಿ ಹಿಮಪ್ರವಾಹ ಸಂಭವಿಸಿದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ. ಹಿಮಾಲಯನ್ ಗ್ಲೇಸಿಯರ್ ಥಿಕ್ನೆಸ್ ಮ್ಯಾಪರ್ ಸಾಧನದೊಂದಿಗೆ ಈ ಅಂದಾಜು ಮಾಡಲಾಗಿದೆ.

ಹಠಾತ್ತನೆ ಹಿಮ ಕುಸಿದ ಪರಿಣಾಮ ಹಿಮಪ್ರವಾಹ?
ಉತ್ತರಾಖಂಡದ ಘಟನೆ ಕುರಿತು ಪರಿಶೀಲನೆಗೆ ಉತ್ತರಾಖಂಡ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ಸೋಮವಾರ ಸಭೆ ನಡೆಸಿದ್ದು, "ಮಿಲಿಯನ್ ಮೆಟ್ರಿಕ್ ಟನ್ ಗಟ್ಟಲೆ ಹಿಮಪರ್ವತಗಳಿಂದ ಹಿಮಗಡ್ಡೆಗಳು ಹಠಾತ್ತನೆ ಕುಸಿದಿರುವುದರಿಂದ ಈ ಅವಘಡ ಸಂಭವಿಸಿದೆ. ಇದನ್ನು ಹಿಮನದಿ ಸ್ಫೋಟ ಎಂದು ಕರೆಯಲು ಸಾಧ್ಯವಿಲ್ಲ ಎಂದು ವಿಜ್ಞಾನಿಗಳು ಹೇಳಿಕೆ ನೀಡಿರುವುದಾಗಿ ತಿಳಿಸಿದ್ದರು. ಜೊತೆಗೆ ಇದನ್ನು "ಅಭಿವೃದ್ಧಿ ವಿರೋಧಿ" ಎಂಬಂತೆ ಬಿಂಬಿಸದಂತೆಯೂ ಜನರಲ್ಲಿ ಮನವಿ ಮಾಡಿದ್ದರು. ಇಸ್ರೋ ವಿಜ್ಞಾನಿಗಳು ಕೆಲವು ಚಿತ್ರಗಳನ್ನು ತೋರಿಸಿದ್ದು, ಅದರಲ್ಲಿ ಹಿಮನದಿ ಸ್ಫೋಟಗೊಂಡ ಕುರಿತು ಸುಳಿವಿಲ್ಲ. ಆದರೆ ಬರಿದಾದ ಪರ್ವತಗಳು ಗೋಚರಿಸಿವೆ ಎಂದು ಹೇಳಿದ್ದರು. ಬೃಹತ್ ಪ್ರಮಾಣದಲ್ಲಿ ಹಿಮಗಡ್ಡೆಗಳು ಕುಸಿದ ಮೂಲ ಗೋಚರಿಸಿದೆ ಎಂದು ತಿಳಿಸಿದ್ದರು.

ಭೂಕುಸಿತ ಕಾರಣ ಎಂದಿದ್ದ ಅಮೆರಿಕ ವಿಜ್ಞಾನಿಗಳು
ಅಮೆರಿಕಾ ಮೂಲದ ವಿಜ್ಞಾನಿಗಳು ಈ ಘಟನೆ ಕುರಿತು ವಿಶ್ಲೇಷಣೆ ನೀಡಿದ್ದು, ಇದಕ್ಕೆ ಭೂಕುಸಿತ ಕಾರಣ ಎಂದು ಹೇಳಿದ್ದರು. ಭೂಕುಸಿತದಿಂದ ಅಪಾರ ಪ್ರಮಾಣದಲ್ಲಿ ಹಿಮ ಕುಸಿದು ಹಿಮ ಪ್ರವಾಹ ಸಂಭವಿಸಿದೆ. ಲಭ್ಯವಿರುವ ಉಪಗ್ರಹ ಚಿತ್ರಗಳಿಂದ ಇದನ್ನು ಕಂಡುಕೊಳ್ಳಲಾಗಿದೆ. ನಂದಾದೇವಿ ಹಿಮ ಬೆಟ್ಟಗಳ ಕುಸಿತದಿಂದ ಈ ಪ್ರವಾಹ ಸಂಭವಿಸಿದೆ ಎಂದು ಅಂದಾಜು ಮಾಡಿದ್ದರು. ಈ ಪ್ರದೇಶದಲ್ಲಿ ಕೆಲವು ದಿನಗಳಿಂದ ಹಿಮ ಸುರಿಯುತ್ತಿದ್ದು, ಈ ಎಲ್ಲಾ ಅಂಶವೂ ಭಾನುವಾರ ನಡೆದ ಘಟನೆಗೆ ಕಾರಣವಾಗಿರಬಹುದು ಎಂದಿದ್ದರು.
-
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ -
ಬೆಂಗಳೂರು ಏರ್ಪೋರ್ಟ್ಗೆ ಸತತ 4ನೇ ಬಾರಿಯೂ ವಿಶ್ವದ 'ಅತ್ಯುತ್ತಮ ಏರ್ಪೋರ್ಟ್'ಪ್ರಶಸ್ತಿ -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ












Click it and Unblock the Notifications