ಚಂದ್ರಯಾನ-3 ಮಿಷನ್ ಯಶಸ್ಸಿನ ಬಳಿಕ ಮುಂದೇನು? ಕುತೂಹಲ ಹುಟ್ಟಿಸಿದ ಸೋಮನಾಥ್ ಹೇಳಿಕೆ...
ದೆಹಲಿ ಅಕ್ಟೋಬರ್ 6: ಚಂದ್ರಯಾನ-3 ಮಿಷನ್ ಯಶಸ್ವಿಯಾಗಿ ಪೂರ್ಣಗೊಂಡಿದೆ. ಮುಂದೇನು ಎನ್ನುವ ಪ್ರಶ್ನೆ ಎಲ್ಲರಿಗೂ ಕಾಡುತ್ತಿರಬಹುದು. ಇದಕ್ಕೆ ಉತ್ತರ ಇಸ್ರೋ ಅಧ್ಯಕ್ಷ ಎಸ್. ಸೋಮನಾಥ್ ಅವರು ನೀಡಿದ್ದಾರೆ. ಚಂದ್ರಯಾನ-3 ಯಶಸ್ಸಿನ ಬಳಿಕ ಇಸ್ರೋ ಬಾಹ್ಯಾಕಾಶ ನಿಲ್ದಾಣವನ್ನು ನಿರ್ಮಿಸಲು ಯೋಜನೆ ಮಾಡುತ್ತಿದೆ. ಈ ಮೂಲಕ ಗಗನಯಾತ್ರಿಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸುವ ಗುರಿಯನ್ನು ಇಸ್ರೋ ಹೊಂದಿದೆ. ಇದರೊಂದಿಗೆ ಮಾನವ ಬಾಹ್ಯಾಕಾಶ ಹಾರಾಟದ ಸಾಮರ್ಥ್ಯವನ್ನು ಅಭಿವೃದ್ಧಿಪಡಿಸಲು ಇಸ್ರೋ ನಿರ್ಧರಿಸಿದೆ.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಚಂದ್ರಯಾನ-3 ಮಿಷನ್ ಯಶಸ್ವಿಯಾಗಿ ಪೂರ್ಣಗೊಳಿಸಿದ ನಂತರ ಇನ್ನಿತರ ಬಾಹ್ಯಾಕಾಶ ಪರಿಶೋಧನಾ ಯೋಜನೆಗಳ ಮೇಲೆ ತನ್ನ ದೃಷ್ಟಿಯನ್ನು ನೆಟ್ಟಿದೆ. ಈ ನಿಟ್ಟಿನಲ್ಲಿ ಇಸ್ರೋ ಭಾರತ ಬಾಹ್ಯಾಕಾಶ ನಿಲ್ದಾಣವನ್ನು ನಿರ್ಮಿಸಲು ಯೋಜನೆಯನ್ನು ಹಾಕಿಕೊಂಡಿರುವುದಾಗಿ ಹೇಳಿಕೊಂಡಿದೆ.

ಬಾಹ್ಯಾಕಾಶ ಸಂಸ್ಥೆ ಇಸ್ರೋ ಸದ್ಯ ಬಾಹ್ಯಾಕಾಶ ನಿಲ್ದಾಣದ ನಿರ್ಮಾಣ ಮತ್ತು ದೀರ್ಘಾವಧಿಯ ಮಾನವ ಬಾಹ್ಯಾಕಾಶ ಯಾನ ಸೇರಿದಂತೆ ಭವಿಷ್ಯದ ಕಾರ್ಯಾಚರಣೆಗಳಿಗಾಗಿ ವಿವಿಧ ಅನ್ವೇಷಣೆಗಳನ್ನು ಮಾಡುತ್ತಿದೆ ಎಂದು ಇಸ್ರೋ ಅಧ್ಯಕ್ಷ ಎಸ್. ಸೋಮನಾಥ್ ಅವರು ಸಿಜಿಟಿಎನ್ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.
ಚಂದ್ರಯಾನದ ಯಶಸ್ಸಿನ ನಂತರ ನಾವು ಸಾಧ್ಯತೆಗಳಿರುವ ಎಲ್ಲಾ ಕಾರ್ಯಗಳನ್ನು ಮಾಡಲು ಯೋಚನೆ ಮಾಡುತ್ತಿದ್ದೇವೆ. ಬಾಹ್ಯಾಕಾಶ ನಿಲ್ದಾಣವು ಭಾರತೀಯ ಬಾಹ್ಯಾಕಾಶ ಆರ್ಥಿಕತೆಗೆ ಹೇಗೆ ಪ್ರಯೋಜನಕಾರಿಯಾಗಬಹುದು ಎಂಬುದನ್ನು ನಾವು ಯೋಚಿಸುತ್ತಿದ್ದೇವೆ ಎಂದು ಅವರು ಹೇಳಿದರು.
ವಿಕ್ರಮ್ ಲ್ಯಾಂಡರ್ ಮತ್ತು ಪ್ರಗ್ಯಾನ್ ರೋವರ್ ಚಂದ್ರನ ಮೇಲೆ ತಮ್ಮ ಗುರಿಗಳನ್ನು ಯಶಸ್ವಿಯಾಗಿ ಸಾಧಿಸಿದ ಚಂದ್ರಯಾನ-3 ಮಿಷನ್ ಭಾರತದ ಬಾಹ್ಯಾಕಾಶ ಮಹತ್ವಾಕಾಂಕ್ಷೆಗಳನ್ನು ಹೆಚ್ಚಿಸಿದೆ. ಜುಲೈ 14 ರಂದು ಈ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಮತ್ತು ಆಗಸ್ಟ್ 23 ರಂದು ಚಂದ್ರನ ಮೇಲ್ಮೈಯಲ್ಲಿ ಮೃದುವಾದ ಲ್ಯಾಂಡಿಂಗ್ ಅನ್ನು ನಿರ್ವಹಿಸಲಾಯಿತು.
ಈ ಸಾಧನೆಯ ನಂತರ ಇಸ್ರೋ ಈಗ ಗಗನ್ಯಾನ್ ಕಾರ್ಯಕ್ರಮದ ಮೂಲಕ ತನ್ನ ಮಾನವ ಬಾಹ್ಯಾಕಾಶ ಹಾರಾಟದ ಸಾಮರ್ಥ್ಯವನ್ನು ಅಭಿವೃದ್ಧಿಪಡಿಸುವತ್ತ ಗಮನಹರಿಸುತ್ತಿದೆ. ಈ ಉಪಕ್ರಮವು ಗಗನಯಾತ್ರಿಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸುವ ಗುರಿಯನ್ನು ಹೊಂದಿದೆ, ಇದು ಬಾಹ್ಯಾಕಾಶ ನಿಲ್ದಾಣದ ನಿರ್ಮಾಣದ ಕಡೆಗೆ ಮಹತ್ವದ ಹೆಜ್ಜೆಯನ್ನು ಗುರುತಿಸುತ್ತದೆ.
ಆದಷ್ಟು ಬೇಗ ನಾವು ಬಾಹ್ಯಾಕಾಶ ನಿಲ್ದಾಣವನ್ನು ನಿರ್ಮಿಸಲು ಪ್ರಾರಂಭಿಸಬೇಕು. ಇದನ್ನು ರೋಬೋಟಿಕ್ ಕಾರ್ಯಾಚರಣೆಯೊಂದಿಗೆ ಪ್ರಾರಂಭಿಸಬೇಕು ಎಂಬ ಯೋಜನೆಯನ್ನು ನಾವು ಹೊಂದಿದ್ದೇವೆ ಎಂದು ಸೋಮನಾಥ್ ವಿವರಿಸಿದರು.
ಜೊತೆಗೆ ನಾವು ಇನ್ನೂ ಮಾನವಸಹಿತ ಹಾರಾಟದ ಸಾಮರ್ಥ್ಯವನ್ನು ಹೊಂದಿಲ್ಲ. ನಾವು ಅದರ ಮೇಲೆ ಕೆಲಸ ಮಾಡುತ್ತಿದ್ದೇವೆ. ಗಗನ್ಯಾನ್ ಕಾರ್ಯಕ್ರಮವು ಮಾನವ ಬಾಹ್ಯಾಕಾಶ ಯಾನದ ಸಾಮರ್ಥ್ಯವನ್ನು ಹೊಂದಿದೆ ಮತ್ತು ಒಮ್ಮೆ ಅದು ಸಂಭವಿಸಿದಲ್ಲಿ, ನಾವು ಮುಂದಿನ 20-25 ವರ್ಷಗಳಲ್ಲಿ ಬಾಹ್ಯಾಕಾಶದಲ್ಲಿ ನಿಲ್ದಾಣದ ಕಟ್ಟಡವನ್ನು ನೋಡಲು ಸಾಧ್ಯವಾಗುತ್ತದೆ ಎಂದು ಸೋಮನಾಥ್ ಹೇಳಿದರು.
ಈ ನಿಟ್ಟಿನಲ್ಲಿ ಇಸ್ರೋ ತನ್ನ ಭವಿಷ್ಯದ ಕಾರ್ಯಸೂಚಿಯ ಭಾಗವಾಗಿ ಮಾನವ ಸಹಿತ ಪರಿಶೋಧನೆ ಮತ್ತು ದೀರ್ಘಾವಧಿಯ ಮಾನವ ಬಾಹ್ಯಾಕಾಶ ಯಾನವನ್ನು ಪರಿಗಣಿಸುತ್ತಿದೆ. ಇದು ಯಶಸ್ವಿಯಾದರೆ ಮಾನವ ಬಾಹ್ಯಾಕಾಶ ಯಾನದಲ್ಲಿ ಈಗಾಗಲೇ ತಮ್ಮ ಅಸ್ತಿತ್ವವನ್ನು ಸ್ಥಾಪಿಸಿರುವ ಯುನೈಟೆಡ್ ಸ್ಟೇಟ್ಸ್, ರಷ್ಯಾ ಮತ್ತು ಚೀನಾದಂತಹ ದೇಶಗಳ ಸಾಲಿಗೆ ಭಾರತವು ಸೇರುತ್ತದೆ.
ಚಂದ್ರಯಾನ-3 ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸುವುದರೊಂದಿಗೆ ಸಂಸ್ಥೆಯು ಸಂಕೀರ್ಣ ಕಾರ್ಯಾಚರಣೆಗಳನ್ನು ಕಾರ್ಯಗತಗೊಳಿಸುವ ಸಾಮರ್ಥ್ಯವನ್ನು ಸಾಬೀತುಪಡಿಸಿದೆ. ಇದು ಭವಿಷ್ಯದಲ್ಲಿ ಹೆಚ್ಚು ಮಹತ್ವಾಕಾಂಕ್ಷೆಯ ಯೋಜನೆಗಳಿಗೆ ದಾರಿ ಮಾಡಿಕೊಡುತ್ತದೆ.
-
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ









Click it and Unblock the Notifications