ಪಿಎಫ್ಐ ಕಾರ್ಯಕ್ರಮದಲ್ಲಿ ಅನ್ಸಾರಿ, ಹಿಂದೂಗಳಿಗೆ ಉರಿ
ಬೆಂಗಳೂರು, ಸೆ. 25: ಕರ್ನಾಟಕದಲ್ಲಿ ಆರೆಸ್ಸೆಸ್ ಹಾಗೂ ಹಿಂದೂ ಪರ ಸಂಘಟನೆ ಮುಖಂಡರ ಹತ್ಯೆಯಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಕಾರ್ಯಕ್ರಮವೊಂದರಲ್ಲಿ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಅವರು ಪಾಲ್ಗೊಂಡಿರುವುದನ್ನು ಹಿಂದೂ ಪರ ಸಂಘಟನೆಗಳು ಖಂಡಿಸಿವೆ.
ಕೇರಳದ ಕೋಯಿಕ್ಕೊಡ್ ನಲ್ಲಿ ಪಿಎಫ್ ಐ ಆಯೋಜನೆಯ ಎರಡು ದಿನಗಳ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಹಮೀದ್ ಅನ್ಸಾರಿ ಅವರು ಪಾಲ್ಗೊಂಡಿದ್ದರು.

ನ್ಯಾಷನಲ್ ವುಮೆನ್ಸ್ ಫ್ರಂಟ್ ಸಹ ಆಯೋಜನೆಯ ಈ ಕಾರ್ಯಕ್ರಮ ಇದಾಗಿದ್ದು, ಉಗ್ರರ ಜತೆ ಸಂಪರ್ಕವುಳ್ಳ ಸಂಘಟನೆಯ ಕಾರ್ಯಕ್ರಮದಲ್ಲಿ ಅನ್ಸಾರಿ ಅವರು ಪಾಲ್ಗೊಂಡಿದ್ದು ಮುಸ್ಲಿಂ ಸಮುದಾಯಕ್ಕೆ ತಪ್ಪು ಸಂದೇಶ ನೀಡಲಿದೆ. ಸಿಮಿ ಉಗ್ರಸಂಘಟನೆಯ ವಿಸ್ತೃತ ರೂಪವಾಗಿರುವ ಪಿಎಫ್ಐ ನಿಂದ ಕೇರಳದಲ್ಲಿ ದೇಶಭಕ್ತ ಹತ್ಯೆಗಳಾಗಿವೆ. ಎಂದು ವಿಶ್ವ ಹಿಂದೂ ಪರಿಷತ್ ನ ಜಂಟಿ ಕಾರ್ಯದರ್ಶಿ ಸುರೇಂದ್ರ ಜೈನ್ ಪ್ರತಿಕ್ರಿಯಿಸಿದ್ದಾರೆ.
ಪಿಎಫ್ಐ ಉಗ್ರ ಚಟುವಟಿಕೆಗಳಲ್ಲಿ ತೊಡಗಿರುವ ಬಗ್ಗೆ ರಾಷ್ಟ್ರೀಯ ತನಿಖಾ ತಂಡ(ಎನ್ಐಎ) ಕೂಡಾ ತನ್ನ ವರದಿಯನ್ನು ಕೇಂದ್ರ ಗೃಹ ಸಚಿವಾಲಯಕ್ಕೆ ನೀಡಿದೆ. ಸಿಮಿಯಂತೆ ಪಿಎಫ್ಐ ಸಂಘಟನೆ ನಿಷೇಧಕ್ಕಾಗಿ ಬಹುಕಾಲದಿಂದ ಆಗ್ರಹ ಕೇಳಿ ಬಂದಿದೆ. ಆದರೆ, ಆರೋಪಗಳನ್ನು ಅಲ್ಲಗೆಳೆಯುತ್ತಾ ಬಂದಿರುವ ಪಿಎಫ್ಐ, ಈ ಕಾರ್ಯಕ್ರಮವನ್ನು ಆಯೋಜಿಸಿಲ್ಲ, ದೆಹಲಿ ಮೂಲದ ವಿದ್ಯಾಸಂಸ್ಥೆ ಆಯೋಜಿಸಿದ್ದು ಎಂದು ಸ್ಪಷ್ಟನೆ ನೀಡಿದೆ.
More From
-
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ












Click it and Unblock the Notifications