ಸಾಯಿಬಾಬಾ ಮೇಲೆ ಕಣ್ಣಿಟ್ಟಿದ್ದ ಅಮೆರಿಕದ ಬೇಹುಗಾರಿಕಾ ಸಂಸ್ಥೆ
ಅಮೆರಿಕದ ಬೇಹುಗಾರಿಕಾ ಸಂಸ್ಥೆ ಸರಿ ಸುಮಾರು 13 ಮಿಲಿಯನ್ ಕಡತಗಳನ್ನು ಬಹಿರಂಗ ಪಡಿಸಿದ್ದು, ಇದರಲ್ಲಿ ಪುಟ್ಟಪರ್ತಿ ಸಾಯಿಬಾಬಾ ಅವರಿಗೆ ಸಂಬಂಧಿಸಿದ ಅಧ್ಯಾಯ ಕೂಡಾ ಇದೆ ಎಂದು ತಿಳಿದು ಬಂದಿದೆ.
ಬೆಂಗಳೂರು, ಜನವರಿ 24: ಅಮೆರಿಕದ ಬೇಹುಗಾರಿಕಾ ಸಂಸ್ಥೆ ಸರಿ ಸುಮಾರು 13 ಮಿಲಿಯನ್ ಕಡತಗಳನ್ನು ಬಹಿರಂಗ ಪಡಿಸಿದ್ದು, ಇದರಲ್ಲಿ ಪುಟ್ಟಪರ್ತಿ ಸಾಯಿಬಾಬಾ ಅವರಿಗೆ ಸಂಬಂಧಿಸಿದ ಅಧ್ಯಾಯ ಕೂಡಾ ಇದೆ ಎಂದು ತಿಳಿದು ಬಂದಿದೆ.
ಪುಟಪರ್ತಿಯ ಸತ್ಯ ಸಾಯಿಬಾಬಾ ಕುರಿತು ಅಮೆರಿಕದ ಗುಪ್ತಚರ ಸಂಸ್ಥೆ ಸೆಂಟ್ರಲ್ ಇಂಟಲಿಜೆನ್ಸ್ ಏಜೆನ್ಸಿ(ಸಿಐಎ) 1990ರಲ್ಲಿ ವಿಶೇಷ ತನಿಖಾ ವರದಿ ತಯಾರಿಸಿತ್ತು. ಈಗ ಈ ವರದಿ ಸಾರ್ವಜನಿಕರ ಮುಂದಿಡಲಾಗಿದೆ.
ಧಾರ್ವಿುಕ ಗುರು ಸಾಯಿಬಾಬಾರ ನೀತಿ, ಚಿಂತನೆಗಳು ಹೇಗೆ ಜಾಗತಿಕ ಮಟ್ಟದಲ್ಲಿ ಪ್ರತ್ಯೇಕ ಧರ್ಮ ಸ್ಥಾಪಿಸುವ ಶಕ್ತಿ ಹೊಂದಿತ್ತು ಎಂಬುದನ್ನು ವಿವರಿಸಲಾಗಿದೆ.

ಸಾಯಿಬಾಬಾರ ತತ್ವವನ್ನು ಜಾಗತಿಕವಾಗಿ ಬಹಳಷ್ಟು ಜನರು ಅನುಸರಿಸುತ್ತಿದ್ದರು. ಒಂದು ಧರ್ಮ ಸ್ಥಾಪನೆಗೆ ಅಗತ್ಯವಾದಷ್ಟು ಸರಕನ್ನು ಸಾಯಿಬಾಬಾರ ಚಿಂತನೆ ಮತ್ತು ತತ್ವ ಹೊಂದಿದ್ದು, ವಿಶ್ವಾದ್ಯಂತ ಸಾಕಷ್ಟು ಸಂಖ್ಯೆಯಲ್ಲಿ ಸಾಯಿಬಾಬಾರ ಬೆಂಬಲಿಗರು ಮತ್ತು ಅನುಯಾಯಿಗಳಿದ್ದರು ಎಂದು ಸಿಐಎ ಹೇಳಿದೆ.
ಸಿಐಎ 1940ರಿಂದ ಈಚೆಗಿನ 9,30,000 ಪುಟಗಳ ದಾಖಲೆ ಮತ್ತು ತನಿಖಾ ವರದಿಯನ್ನು ತನ್ನ ವೆಬ್ಸೈಟ್ನಲ್ಲಿ ಬಿಡುಗಡೆ ಮಾಡಿದೆ. ಅದರಲ್ಲಿ ಭಾರತಕ್ಕೆ ಸಂಬಂಧಿಸಿದ ದಾಖಲೆಗಳಲ್ಲಿ ಸಾಯಿಬಾಬಾರ ಕುರಿತ 16 ಪುಟಗಳ ಗುಪ್ತಚರ ವರದಿಯಲ್ಲಿಯೂ ಇದೆ.
ಸಾಯಿಬಾಬಾ ಪ್ರಭಾವಿಯಾಗಿದ್ದರು. ವಿವಿಧ ಪವಾಡ ಮತ್ತು ಚಮತ್ಕಾರ ನಡೆಸುವ ಮೂಲಕ ಅಪಾರ ಭಕ್ತರನ್ನು ಹೊಂದಿದ್ದರು ಎಂದು ವರದಿ ಹೇಳಿದ್ದು, ಅವರ ಕುರಿತು ಸಿಐಎ ವಿಶೇಷವಾಗಿ ಗಮನಹರಿಸಿತ್ತು ಎಂದಿದೆ. ಹಲವು ಧಾರ್ವಿುಕ ಮುಖಂಡರು ಹಾಗೂ ನಾಯಕರ ಮೇಲೂ ಸಿಐಎ ಕಣ್ಣಿತ್ತು ಎನ್ನಲಾಗಿದೆ. ಈ ವರದಿಯನ್ನು ಸಂಪೂರ್ಣವಾಗಿ ಇಲ್ಲಿ ಓದಬಹುದು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ
Download











Click it and Unblock the Notifications