ಲಡಾಖ್ ಸಂಘರ್ಷ: ಹಂಚಿಕೊಳ್ಳುವ ವಿಷಯ ಇದ್ದಾಗ ಹೇಳುತ್ತೇವೆ ಎಂದ ವಿದೇಶಾಂಗ ಇಲಾಖೆ
ನವದೆಹಲಿ, ನವೆಂಬರ್ 13: ಪೂರ್ವ ಲಡಾಖ್ನಲ್ಲಿ ಸ್ಥಿತಿ ಗಂಭೀರವಾಗಿದೆ. ಇದೀಗ ಚೀನಾ ಸೇನೆ ಗಡಿಯಿಂದ ಹಿಂದೆ ಸರಿಯಲು ಒಪ್ಪಿಕೊಂಡಿದೆ ಎನ್ನುವ ಮಾತುಗಳು ಕೇಳಿಬರುತ್ತಿದೆ.
ಆದರೆ ವಿದೇಶಾಂಗ ಇಲಾಖೆ ಮಾತ್ರ ಮಾತುಕತೆ ಮುಂದುವರೆದಿದೆ, ಹಂಚಿಕೊಳ್ಳುವ ವಿಷಯ ಇದ್ದಾಗ ಹೇಳುತ್ತೇವೆ ಎಂದು ಹೇಳಿ ಸುಮ್ಮನಾಗಿದೆ.
ಪೂರ್ವ ಲಡಾಕ್ ನಲ್ಲಿ ಗಡಿ ವಾಸ್ತವ ರೇಖೆಯ ಘರ್ಷಣೆ ಪೀಡಿತ ಪ್ರದೇಶದಿಂದ ಸೇನೆಯನ್ನು ಹಿಂಪಡೆಯಲು ಭಾರತ ಮತ್ತು ಚೀನಾ ಸರ್ಕಾರಗಳು ಒಪ್ಪಿಕೊಂಡಿವೆ ಎಂಬ ಸುದ್ದಿ ಹರಿದಾಡುತ್ತಿರುವುದರ ಮಧ್ಯೆ ಮಾತುಕತೆ ಮುಂದುವರಿದಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.
ಲಡಾಖ್ ಸಂಘರ್ಷದ ಬಗ್ಗೆ, ಬೆಳವಣಿಗೆಗಳ ಬಗ್ಗೆ ಏನಾದರೂ ಹಂಚಿಕೊಳ್ಳಬೇಕು ಎನಿಸಿದರೆ ನಾವು ಹೇಳುತ್ತೇವೆ. ಮಾತುಕತೆ, ಚರ್ಚೆ ಮುಂದುವರಿದಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ವಕ್ತಾರ ಅನುರಾಗ್ ಶ್ರೀವಾಸ್ತವ ತಿಳಿಸಿದ್ದಾರೆ.

ಭಾರತ-ಚೀನಾ ಮೂರು ಹಂತದ ಪ್ರಕ್ರಿಯೆ
ಸರ್ಕಾರದ ಮೂಲಗಳಿಂದ ಬಂದಿರುವ ಮಾಹಿತಿ ಪ್ರಕಾರ, ಸೇನಾಪಡೆಯನ್ನು ಹಿಂಪಡೆಯಲು ಭಾರತ ಮತ್ತು ಚೀನಾ ವಿಸ್ತಾರವಾಗಿ ಮೂರು ಹಂತಗಳ ಪ್ರಕ್ರಿಯೆಗೆ ಒಪ್ಪಿಕೊಂಡಿದ್ದು, ಕಾಲಾನುಕ್ರಮದಲ್ಲಿ ಘರ್ಷಣೆಪೀಡಿತ ಪ್ರದೇಶದಿಂದ ಸಂಪೂರ್ಣವಾಗಿ ಸೇನೆ ಮತ್ತು ಶಸ್ತ್ರಾಸ್ತ್ರಗಳನ್ನು ಹಿಂಪಡೆಯಲು ಮುಂದಾಗಿವೆ.

ಶೂನ್ಯ ಮಟ್ಟದ ತಾಪಮಾನ
ಪೂರ್ವ ಲಡಾಖ್ನ ವಿವಿಧ ಪರ್ವತ ಪ್ರದೇಶಗಳಲ್ಲಿ ಶೂನ್ಯ ಮಟ್ಟದ ತಾಪಮಾನ ಪರಿಸ್ಥಿತಿಗಳಲ್ಲಿ ಸುಮಾರು 50,000 ಭಾರತೀಯ ಸೇನಾ ಪಡೆಗಳನ್ನು ಪ್ರಸ್ತುತ ಉನ್ನತ ಮಟ್ಟದ ಯುದ್ಧ ಸನ್ನದ್ಧತೆಯಲ್ಲಿ ನಿಯೋಜಿಸಲಾಗಿದೆ. ಚೀನಾ ಕೂಡ ಸಮಾನ ಸಂಖ್ಯೆಯ ಸೈನಿಕರನ್ನು ನಿಯೋಜಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎರಡೂ ದೇಶಗಳ ಸೇನೆಗಳು ಈ ಗಡಿಭಾಗದಲ್ಲಿ ಕಳೆದ ಮೇ ತಿಂಗಳಿನಿಂದ ನಿಯೋಜನೆಗೊಂಡಿವೆ.

ಕಮಾಂಡರ್ ಮಧ್ಯೆ ಮಾತುಕತೆ
ನವೆಂಬರ್ 6ರಂದು ನಡೆದ ಭಾರತ-ಚೀನಾ ಮಧ್ಯೆ 8ನೇ ಸುತ್ತಿನ ಉನ್ನತ ಮಟ್ಟದ ಕಮಾಂಡರ್ ಮಾತುಕತೆಯ ವೇಳೆ ಪ್ರಸ್ತಾವನೆಯನ್ನು ತೀವ್ರವಾಗಿ ಚರ್ಚಿಸಲಾಗಿತ್ತು. ಮೊನ್ನೆಯ ಮಾತುಕತೆ ಚುಶುಲ್ ನಲ್ಲಿ ಗಡಿ ವಾಸ್ತವ ರೇಖೆಯ ಭಾರತದ ಕಡೆಯಲ್ಲಿ ನಡೆದಿತ್ತು.

ಸಹಜ ಮಾತುಕತೆ
ಮೊನ್ನೆ ನಡೆದ ಮಾತುಕತೆ ಸಹಜವಾಗಿ ಸಾಗಿತು. ಎರಡೂ ಕಡೆಯಿಂದ ಭಾರತ-ಚೀನಾ ಗಡಿ ಪ್ರದೇಶಗಳ ಪಶ್ಚಿಮ ವಲಯದಲ್ಲಿ ಸೇನೆಯನ್ನು ಹಿಂಪಡೆಯುವ ಬಗ್ಗೆ ಅಭಿಪ್ರಾಯಗಳನ್ನು ಆಳವಾಗಿ ಮತ್ತು ರಚನಾತ್ಮಕವಾಗಿ ಚರ್ಚೆ ನಡೆಸಲಾಯಿತು ಎಂದು ಹೇಳಿದ್ದಾರೆ.
-
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
ಇಸ್ರೇಲ್-ಯುಎಸ್ ಜಂಟಿ ದಾಳಿ ಅಬ್ಬರ: ಇರಾನ್ಗೆ ಉತ್ತರಾಧಿಕಾರಿ ನೇಮಕ, ಇಂದಿನ ಪ್ರಮುಖಾಂಶಗಳು ಇಲ್ಲಿವೆ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ












Click it and Unblock the Notifications