ಲಡಾಖ್ ಸಂಘರ್ಷ: ಹಂಚಿಕೊಳ್ಳುವ ವಿಷಯ ಇದ್ದಾಗ ಹೇಳುತ್ತೇವೆ ಎಂದ ವಿದೇಶಾಂಗ ಇಲಾಖೆ
ನವದೆಹಲಿ, ನವೆಂಬರ್ 13: ಪೂರ್ವ ಲಡಾಖ್ನಲ್ಲಿ ಸ್ಥಿತಿ ಗಂಭೀರವಾಗಿದೆ. ಇದೀಗ ಚೀನಾ ಸೇನೆ ಗಡಿಯಿಂದ ಹಿಂದೆ ಸರಿಯಲು ಒಪ್ಪಿಕೊಂಡಿದೆ ಎನ್ನುವ ಮಾತುಗಳು ಕೇಳಿಬರುತ್ತಿದೆ.
ಆದರೆ ವಿದೇಶಾಂಗ ಇಲಾಖೆ ಮಾತ್ರ ಮಾತುಕತೆ ಮುಂದುವರೆದಿದೆ, ಹಂಚಿಕೊಳ್ಳುವ ವಿಷಯ ಇದ್ದಾಗ ಹೇಳುತ್ತೇವೆ ಎಂದು ಹೇಳಿ ಸುಮ್ಮನಾಗಿದೆ.
ಪೂರ್ವ ಲಡಾಕ್ ನಲ್ಲಿ ಗಡಿ ವಾಸ್ತವ ರೇಖೆಯ ಘರ್ಷಣೆ ಪೀಡಿತ ಪ್ರದೇಶದಿಂದ ಸೇನೆಯನ್ನು ಹಿಂಪಡೆಯಲು ಭಾರತ ಮತ್ತು ಚೀನಾ ಸರ್ಕಾರಗಳು ಒಪ್ಪಿಕೊಂಡಿವೆ ಎಂಬ ಸುದ್ದಿ ಹರಿದಾಡುತ್ತಿರುವುದರ ಮಧ್ಯೆ ಮಾತುಕತೆ ಮುಂದುವರಿದಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.
ಲಡಾಖ್ ಸಂಘರ್ಷದ ಬಗ್ಗೆ, ಬೆಳವಣಿಗೆಗಳ ಬಗ್ಗೆ ಏನಾದರೂ ಹಂಚಿಕೊಳ್ಳಬೇಕು ಎನಿಸಿದರೆ ನಾವು ಹೇಳುತ್ತೇವೆ. ಮಾತುಕತೆ, ಚರ್ಚೆ ಮುಂದುವರಿದಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ವಕ್ತಾರ ಅನುರಾಗ್ ಶ್ರೀವಾಸ್ತವ ತಿಳಿಸಿದ್ದಾರೆ.

ಭಾರತ-ಚೀನಾ ಮೂರು ಹಂತದ ಪ್ರಕ್ರಿಯೆ
ಸರ್ಕಾರದ ಮೂಲಗಳಿಂದ ಬಂದಿರುವ ಮಾಹಿತಿ ಪ್ರಕಾರ, ಸೇನಾಪಡೆಯನ್ನು ಹಿಂಪಡೆಯಲು ಭಾರತ ಮತ್ತು ಚೀನಾ ವಿಸ್ತಾರವಾಗಿ ಮೂರು ಹಂತಗಳ ಪ್ರಕ್ರಿಯೆಗೆ ಒಪ್ಪಿಕೊಂಡಿದ್ದು, ಕಾಲಾನುಕ್ರಮದಲ್ಲಿ ಘರ್ಷಣೆಪೀಡಿತ ಪ್ರದೇಶದಿಂದ ಸಂಪೂರ್ಣವಾಗಿ ಸೇನೆ ಮತ್ತು ಶಸ್ತ್ರಾಸ್ತ್ರಗಳನ್ನು ಹಿಂಪಡೆಯಲು ಮುಂದಾಗಿವೆ.

ಶೂನ್ಯ ಮಟ್ಟದ ತಾಪಮಾನ
ಪೂರ್ವ ಲಡಾಖ್ನ ವಿವಿಧ ಪರ್ವತ ಪ್ರದೇಶಗಳಲ್ಲಿ ಶೂನ್ಯ ಮಟ್ಟದ ತಾಪಮಾನ ಪರಿಸ್ಥಿತಿಗಳಲ್ಲಿ ಸುಮಾರು 50,000 ಭಾರತೀಯ ಸೇನಾ ಪಡೆಗಳನ್ನು ಪ್ರಸ್ತುತ ಉನ್ನತ ಮಟ್ಟದ ಯುದ್ಧ ಸನ್ನದ್ಧತೆಯಲ್ಲಿ ನಿಯೋಜಿಸಲಾಗಿದೆ. ಚೀನಾ ಕೂಡ ಸಮಾನ ಸಂಖ್ಯೆಯ ಸೈನಿಕರನ್ನು ನಿಯೋಜಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎರಡೂ ದೇಶಗಳ ಸೇನೆಗಳು ಈ ಗಡಿಭಾಗದಲ್ಲಿ ಕಳೆದ ಮೇ ತಿಂಗಳಿನಿಂದ ನಿಯೋಜನೆಗೊಂಡಿವೆ.

ಕಮಾಂಡರ್ ಮಧ್ಯೆ ಮಾತುಕತೆ
ನವೆಂಬರ್ 6ರಂದು ನಡೆದ ಭಾರತ-ಚೀನಾ ಮಧ್ಯೆ 8ನೇ ಸುತ್ತಿನ ಉನ್ನತ ಮಟ್ಟದ ಕಮಾಂಡರ್ ಮಾತುಕತೆಯ ವೇಳೆ ಪ್ರಸ್ತಾವನೆಯನ್ನು ತೀವ್ರವಾಗಿ ಚರ್ಚಿಸಲಾಗಿತ್ತು. ಮೊನ್ನೆಯ ಮಾತುಕತೆ ಚುಶುಲ್ ನಲ್ಲಿ ಗಡಿ ವಾಸ್ತವ ರೇಖೆಯ ಭಾರತದ ಕಡೆಯಲ್ಲಿ ನಡೆದಿತ್ತು.

ಸಹಜ ಮಾತುಕತೆ
ಮೊನ್ನೆ ನಡೆದ ಮಾತುಕತೆ ಸಹಜವಾಗಿ ಸಾಗಿತು. ಎರಡೂ ಕಡೆಯಿಂದ ಭಾರತ-ಚೀನಾ ಗಡಿ ಪ್ರದೇಶಗಳ ಪಶ್ಚಿಮ ವಲಯದಲ್ಲಿ ಸೇನೆಯನ್ನು ಹಿಂಪಡೆಯುವ ಬಗ್ಗೆ ಅಭಿಪ್ರಾಯಗಳನ್ನು ಆಳವಾಗಿ ಮತ್ತು ರಚನಾತ್ಮಕವಾಗಿ ಚರ್ಚೆ ನಡೆಸಲಾಯಿತು ಎಂದು ಹೇಳಿದ್ದಾರೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications