1947ರ ಆಗಸ್ಟ್ 15 ರಂದು ಮಹಾತ್ಮಾ ಗಾಂಧೀಜಿ ಎಲ್ಲಿದ್ದರು?
ಸ್ವಾತಂತ್ರ್ಯ ಸಿಕ್ಕು ಇಡೀ ದೇಶವೇ ಖುಷಿಯಿಂದ ಸಂಭ್ರಮಿಸುತ್ತಿರುವಾಗ ಮಹಾತ್ಮ ಗಾಂಧೀಜಿ ಮಾತ್ರ ಕೋಲ್ಕತ್ತದಲ್ಲಿ ಉಪವಾಸ ಆಚರಿಸುತ್ತಿದ್ದರಂತೆ.
ಈ ಕುರಿತು ಜನರು ಗಾಂಧೀಜಿಯವರ ಮುಂದೆ ಪ್ರಶ್ನೆಯನ್ನಿಟ್ಟಾಗ ಇದು ಸಂಭ್ರಮ ಎಂದು ನನಗೆ ಅನ್ನಿಸುತ್ತಿಲ್ಲ, ಸಂಭ್ರಮಿಸುವ ಮನಸೂ ಇಲ್ಲ ಎಂದಿದ್ದರಂತೆ.
ಹಾಗಾದರೆ ಆ ಸಂದರ್ಭದಲ್ಲಿ ಏನು ನಡೆದಿತ್ತು, ಗಾಂಧೀಜಿ ಯಾಕಾಗಿ ಹಾಗೆ ಹೇಳಿದ್ದರು ಎನ್ನುವ ಕುರಿತು ಮಾಹಿತಿ ಇಲ್ಲಿದೆ.ದೇಶವಿಭಜನೆಯ ಕಾವು ಹೆಚ್ಚಾಗಿತ್ತು, ಪಶ್ಚಿಮ ಬಂಗಾಳದಲ್ಲಿ ಮುಸ್ಲಿಂ ಮತ್ತು ಹಿಂದೂಗಳ ನಡುವೆ ಕೋಮುಗಲಭೆಯೂ ಶುರುವಾಗಿತ್ತು. ಹಿಂಸೆಯನ್ನು ನಿಯಂತ್ರಿಸುವ ದೃಷ್ಟಿಯಿಂದ ಮುಸ್ಲಮರೇ ಹೆಚ್ಚಿನ ಸಂಖ್ಯೆಯಲ್ಲಿರುವ ಹೈದೇರಿ ಮಂಜಿಲ್ ಎಂಬಲ್ಲಿ ಕೆಲವು ದಿನಗಳ ಕಾಲ ಗಾಂಧೀಜಿ ಉಳಿದುಕೊಂಡಿದ್ದರು.

ಈ ಸ್ವಾತಂತ್ರ್ಯ ದಿನ ಎಂಬುವುದು ಭಾರತ ಹಾಗೂ ಪಾಕಿಸ್ತಾನದ ನಡುವೆ ಸಂಘರ್ಷವನ್ನು ಬಿತ್ತುತ್ತಿದೆ. ಇಂತಹ ಸಂದರ್ಭಲ್ಲಿ ಇದನ್ನು ಹಬ್ಬ ಎಂದು ಕರೆಯಲು ಹೇಗೆ ಸಾಧ್ಯ ಎಂದು ಗಾಂಧೀಜಿ ಹೇಳಿದ್ದರಂತೆ.
ಹಾಗಾಗಿ ಇಡೀ ದಿನ ಉಪವಾಸವಿದ್ದು, ಚರಕದಲ್ಲಿ ನೂಲು ನೇಯ್ದು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತೇನೆ ಎಂದು ಹೇಳಿದ್ದರು.
ಆಗಸ್ಟ್ 9 ರಂದು ಗಾಂಧೀಜಿಯವರು ಕೊಲ್ಕತ್ತಕ್ಕೆ ಬಂದಿದ್ದರು. ನಾವೋಖಲಿಗೆ ತೆರಳಲು ಯೋಚಿಸಿದ್ದರು. ಗಾಂಧೀಜಿ ಕೊಲ್ಕತ್ತದಿಂದ ದೆಹಲಿ, ಪಂಜಾಬ್, ಲಾಹೋರ್ ಹೀಗೆ ಹಲವು ಕಡೆ ಸಂಚರಸಿ ಶಾಂತಿ ಮರು ಸ್ಥಾಪನೆ ಮಾಡಿದ್ದರು.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications