White Collar Terrorism: ದೆಹಲಿ ಸ್ಫೋಟ: ಏನಿದು ವೈಟ್ ಕಾಲರ್ ಭಯೋತ್ಪಾದನೆ, ಬೆಂಗಳೂರಿಗೂ ಭೀತಿ ಯಾಕೆ ?
White Collar Terrorism: ದೇಶದ ರಾಜಧಾನಿಯ ಹೃದಯಭಾಗದಲ್ಲಿ ಸಂಭವಿಸಿರುವ ಬಾಂಬ್ ಸ್ಫೋಟವು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಬೆಂಗಳೂರು ಸೇರಿದಂತೆ ದೇಶದಾದ್ಯಂತ ಹೈ ಅಲರ್ಟ್ ಮುಂದುವರಿದಿದೆ. ಆದರೆ ಉನ್ನತ ಶಿಕ್ಷಣ ಪಡೆದಿರುವವರೇ ಇದೀಗ ಈ ರೀತಿಯ ವಿಧ್ವಂಸಕ ಕೃತ್ಯದಲ್ಲಿ ಭಾಗಿಯಾಗುತ್ತಿರುವುದು ಭಾರೀ ಆತಂಕಕ್ಕೆ ಕಾರಣವಾಗಿದೆ. ಇಷ್ಟಕ್ಕೂ ಏನಿದು ವೈಟ್ ಕಾಲರ್ (White Collar Terrorism) ಟೆರರಿಸಂ ಎಂದರೇನು, ಈಗ ಆಕ್ಟೀವ್ ಆಗಿದ್ದು ಹೇಗೆ ಹಾಗೂ ದೆಹಲಿ, ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಮೂಡಿರುವ ಆತಂಕಕ್ಕೆ ಕಾರಣವೇನು ಎನ್ನುವ ವಿವರ ಇಲ್ಲಿದೆ.
ದೇಶದಲ್ಲಿ ಮತ್ತೊಮ್ಮೆ ಬಾಂಬ್ ಸ್ಫೋಟವಾಗಿದೆ. ಕಳೆದ ಕೆಲವು ವರ್ಷಗಳಿಂದ ದೆಹಲಿ, ಮುಂಬೈ ಹಾಗೂ ಬೆಂಗಳೂರು ಶಾಂತವಾಗಿತ್ತು. ಆದರೆ ಈಚೆಗೆ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟವಾಗಿತ್ತು. ಇದೀಗ ದೆಹಲಿಯಲ್ಲಿ ಆಗಿದ್ದು ಈಗ ನಡೆದಿರುವ ಬಾಂಬ್ ಸ್ಫೋಟದ ಹಿಂದೆ ಏನಿದು ವೈಟ್ ಕಾಲರ್ ಇದೆ ಎಂದು ಪ್ರಾಥಮಿಕ ಹಂತದಲ್ಲಿ ವರದಿಯಾಗಿದೆ. ಅಲ್ಲದೇ ಹಿಂದೆ ಉಗ್ರ ಸಂಘಟನೆಗಳಲ್ಲಿ ಟೆಕ್ಕಿಗಳು ಸೇರ್ಪಡೆ ಆಗುತ್ತಿದ್ದರು ಆದರೆ ಈಗ ವೈದ್ಯರೂ ಸಹ ಸೇರ್ಪಡೆ ಆಗುತ್ತಿರುವುದು ಭಾರೀ ಆತಂಕಕ್ಕೆ ಕಾರಣವಾಗಿದೆ.

White Collar Terrorism: ಏನಿದು ವೈಟ್ ಕಾಲರ್ ಭಯೋತ್ಪಾದನೆ ?
ಭಯೋತ್ಪಾದನಾ ಕೃತ್ಯಗಳಲ್ಲಿ ಉನ್ನತ ಶಿಕ್ಷಣ ಪಡೆದವರ ಭಾಗಿ ಆಗುತ್ತಿರುವುದಕ್ಕೆ ವೈಟ್ ಕಾಲರ್ ಭಯೋತ್ಪಾದನೆ ಎನ್ನಲಾಗುತ್ತದೆ. ಇದು ವೈದ್ಯರು, ಎಂಜಿನಿಯರ್ಗಳು ಅಥವಾ ಶಿಕ್ಷಣ ತಜ್ಞರಂತಹ ವಿದ್ಯಾವಂತ, ನುರಿತ ವೃತ್ತಿಪರರಿಂದ ಯೋಜಿಸಲ್ಪಟ್ಟ ಕೃತ್ಯಗಳಿಗೆ ವೈಟ್ ಕಾಲರ್ ಭಯೋತ್ಪಾದನೆ ಎಂದು ಹೆಸರು ಇರಿಸಲಾಗಿದೆ. ಈ ಮಾದರಿಯ ಕೃತ್ಯಗಳಲ್ಲಿ ದೇಶದ ಪ್ರಮುಖ ನಗರಗಳನ್ನೇ ಗುರಿಯಾಗಿಸಿಕೊಳ್ಳಲಾಗುತ್ತದೆ.
ದೇಶದಲ್ಲಿ ಮತ್ತೆ ವೈಟ್ಕಾಲರ್ ಟೆರರಿಸಂ ಆಕ್ಟೀವ್: ಈಗ ದೆಹಲಿಯಲ್ಲಿ ನಡೆದಿರುವ ಭಯೋತ್ಪಾದನೆ ಕೃತ್ಯವು ದೇಶದಲ್ಲಿ ಮತ್ತೆ ವೈಟ್ ಕಾಲರ್ ಟೆರರಿಸಂ ಆಕ್ಟೀವ್ ಆಗಿರುವುದರ ಸಂಕೇತವಾಗಿದೆ ಎಂದು ಹೇಳಲಾಗುತ್ತಿದೆ. ಈ ವಿಧಾನದ ಮೂಲಕ ಪಾಕಿಸ್ತಾನ ಬೆಂಬಲಿತ ಉಗ್ರ ಜಾಲವು ಬಳಸಿಕೊಂಡು ಭಾರತದ ನಗರಗಳಲ್ಲಿ ಉಗ್ರ ಕೃತ್ಯಕ್ಕೆ ಸಂಚು ರೂಪಿಸುತ್ತಿದೆ ಎನ್ನುವ ಅನುಮಾನ ವ್ಯಕ್ತವಾಗಿದೆ. ಇಸ್ಲಾಮಿಕ್ ಸ್ಟೇಟ್ (ಐ.ಎಸ್) 1990 ಮತ್ತು 2000ರಲ್ಲಿ ಈ ಮಾದರಿಯ ಕಾರ್ಯತಂತ್ರವನ್ನು ಭಾರತದ ಪ್ರಮುಖ ನಗರಗಳಲ್ಲಿ ಬಳಸಿ ಕೃತ್ಯ ನಡೆಸಬಹುದೇ ಎನ್ನುವ ಆತಂಕ ಶುರುವಾಗಿದೆ. ಪ್ರಮುಖ ನಗರಗಳ ಸಾಲಿನಲ್ಲಿ ಬೆಂಗಳೂರು ಸಹ ಹೊರತಾಗಿಲ್ಲ.
ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರ ಚಟುವಟಿಕೆ ಇಳಿಕೆ: ಇನ್ನು ದೇಶದ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರ ಚಟುವಟಿಕೆಗಳು ಗಣನೀಯವಾಗಿ ಇಳಿಕೆಯಾಗಿದೆ. ಇತ್ತೀಚಿನ ವರ್ಷಗಳಲ್ಲಿ ಇಲ್ಲಿಂದ ಭಯೋತ್ಪಾದಕರ ಸಂಘಟನೆಗಳಿಗೆ ಸೇರುವವರ ಸಂಖ್ಯೆ ಕಡಿಮೆಯಾಗಿದೆ. ಕೆಲವು ದಿನಗಳಿಂದ ಇಲ್ಲಿನ ಜನರನ್ನು ಭಯೋತ್ಪಾದನೆಯ ಕೃತ್ಯಗಳಿಗೆ ನೇಮಕ ಮಾಡಿಕೊಂಡಿರುವುದು ಕಡಿಮೆಯಾಗಿದ್ದು, ಹೀಗಾಗಿ ಈ ಹೊಸ ಮಾರ್ಗವನ್ನು ಅನುಸರಿಸಲಾಗುತ್ತಿದೆ ಎಂದು ಹೇಳಲಾಗಿದೆ. ಈ ಹಿಂದೆ ನಡೆದಿರುವ ಉಗ್ರ ಕೃತ್ಯಗಳಿಗಿಂತಲೂ ವೈದ್ಯರಂತಹ ಪ್ರಜ್ಞಾವಂತರು ಈ ಮಾದರಿಯ ಕೃತ್ಯದಲ್ಲಿ ಭಾಗಿ ಆಗುತ್ತಿರುವುದು ಭಾರತದ ಭದ್ರತೆಗೆ ಅಪಾಯಕಾರಿ ಎಂದೇ ಪರಿಗಣಿಸಲಾಗುತ್ತಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications