'ದೇವಮಾನವ' ಚಂದ್ರಸ್ವಾಮಿಯ ಜೀವನ ವೃತ್ತಾಂತ
ಸ್ವಯಂ ಘೋಷಿತ ದೇವ ಮಾನವ ನೇಮಿಚಂದ್ ಅಲಿಯಾಸ್ ಚಂದ್ರಸ್ವಾಮಿ ತಾಂತ್ರಿಕನಾಗಿ, ಸ್ವಯಂಘೋಷಿತ ದೇವಮಾನವನಾಗಿ, ರಾಜಕೀಯ ಮುಖಂಡರ ಗುರುವಾಗಿ ಬೆಳೆದವರು. ಚಂದ್ರಸ್ವಾಮಿಯ ಜೀವನ ವೃತ್ತಾಂತ ಇಲ್ಲಿದೆ
ಹಣ ಲೇವಾದೇವಿ ವ್ಯವಹಾರ ನಡೆಸುತ್ತಿದ್ದ ರಾಜಸ್ಥಾನಿ ಮೂಲದ ವ್ಯಕ್ತಿಯೊಬ್ಬನ ಮಗನಾದ ನೇಮಿ ಚಂದ್ ತಾಂತ್ರಿಕನಾಗಿ, ವಿವಾದಿತ ವ್ಯಕ್ತಿಯಾಗಿ, ಸ್ವಯಂಘೋಷಿತ ದೇವಮಾನವನಾಗಿ, ರಾಜಕೀಯ ಮುಖಂಡರ ಗುರುವಾಗಿ ಬೆಳೆದವರು. ಚಂದ್ರಸ್ವಾಮಿಯ ಜೀವನ ವೃತ್ತಾಂತ ಇಲ್ಲಿದೆ
ರಾಜೀವ್ ಗಾಂಧಿ ಹತ್ಯೆ ಸಂಚಿನಲ್ಲೂ ಚಂದ್ರಸ್ವಾಮಿ ಹೆಸರು ಬಲವಾಗಿ ಕೇಳಿ ಬಂದಿತ್ತು. ತನ್ನ ಅಂತಾರಾಷ್ಟ್ರೀಯ ಸಂಪರ್ಕ, ಶಸ್ತ್ರಾಸ್ತ್ರ, ವಾಣಿಜ್ಯ ಡೀಲ್ ಮೂಲಕ ಎಲ್ ಟಿಟಿಐ ಸಂಘಟನೆಗೆ ನೆರವಾಗುತ್ತಿದ್ದರು. ಚಂದ್ರಸ್ವಾಮಿ ಬಂಧನವಾದರೂ ನಂತರ ಬಿಡುಗಡೆಗೊಂಡಿದ್ದರು. ಅಂದಿನ ಪ್ರಧಾನಿ ಪಿವಿ ನರಸಿಂಹ ರಾವ್ ಅವರ ಆಧಾತ್ಮ ಸಲಹೆಗಾರ ಎನಿಸಿಕೊಂಡಿದ್ದ ಸ್ವಾಮಿ, ವಿವಾದಗಳಿಂದಲೇ ಹೆಚ್ಚು ಸದ್ದು ಮಾಡಿದವರು. [ಸ್ವಯಂಘೋಷಿತ ದೇವಮಾನವ ಚಂದ್ರಸ್ವಾಮಿಯ ವಿವಾದಗಳು]

1948ರಲ್ಲಿ ಜನಿಸಿದ ನೇಮಿಚಂದ್ ಬಾಲ್ಯದಲ್ಲೇ ತಂದೆಯ ಜತೆಗೂಡಿ ರಾಜಸ್ಥಾನದ ಬೆಹ್ರೂರ್ ನಿಂದ ಹೈದರಾಬಾದಿಗೆ ಬರುತ್ತಾನೆ. ತಂತ್ರ ವಿದ್ಯೆಯಲ್ಲಿ ಪರಿಣಿತಿ ಹೊಂದಲು ಮನೆಯನ್ನು ತೊರೆದು ಉಪಾಧ್ಯಾರ್ ಅಮರ್ ಮುನಿ ಅವರ ಬಳಿ ತೆರಳುತ್ತಾನೆ. ಬಿಹಾರದ ಕಾಡಿನಲ್ಲಿ ಧ್ಯಾನ, ತಂತ್ರವಿದ್ಯೆ ಕಲಿತು ಸ್ವಾಮಿಯಾಗುತ್ತಾರೆ.
ತಾಂತ್ರಿಕ ಗೋಪಿನಾಥ್ ಕವಿರಾಜ್ ರಲ್ಲಿ ಶಿಷ್ಯವೃತ್ತಿ ಮಾಡುತ್ತಾರೆ. ನಾಲ್ಕು ವರ್ಷಗಳ ನಂತರ ತಂತ್ರ ವಿದ್ಯೆ ಕಲಿತ ಚಂದ್ರಸ್ವಾಮಿ ಅವರು ಕಾಳಿ ಮಾತೆಯ ಪರಮ ಭಕ್ತ ಹಾಗೂ ಆರಾಧಕ. ಧರ್ಮದಲ್ಲಿ ಜೈನ ಸಮುದಾಯದವರಾದರೂ ತಂತ್ರವಿದ್ಯೆ ಕಲಿತು ಅಂತಾರಾಷ್ಟ್ರೀಯ ಮಟ್ಟದ ಉಪನ್ಯಾಸ ನೀಡುವಷ್ಟರ ಮಟ್ಟಿಗೆ ಬೆಳೆದವರು.
ಭಕ್ತಗಣ: ಮಾಜಿ ಪ್ರಧಾನಿಗಳಾದ ಪಿವಿ ನರಸಿಂಹ ರಾವ್ ಮತ್ತು ಚಂದ್ರಶೇಖರ್ ಚಂದ್ರ ಸ್ವಾಮಿಯ ಭಕ್ತ ಗಣದಲ್ಲಿ ಅಗ್ರಸ್ಥಾನ ಪಡೆದಿದ್ದರು. ನರಸಿಂಹರಾವ್ ಅವರ ಆಪ್ತರಾಗಿದ್ದರಿಂದ ವಿಶ್ವ ಧರ್ಮಯಾತನ್ ಸನಾತನ ಹೆಸರಿನಲ್ಲಿ ದೆಹಲಿಯಲ್ಲಿ ಆಶ್ರಮವನ್ನು ಸ್ಥಾಪಿಸಿದ್ದರು.
ಉತ್ತರ ಪ್ರದೇಶದ ಮಾಜಿ ರಾಜ್ಯಪಾಲ ರೊಮೇಶ್ ಭಂಡಾರಿ, ಮಾಜಿ ಬಿಹಾರ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್, ರಾಜೇಶ್ ಪೈಲಟ್, ಮನೇಕಾ ಗಾಂಧಿ, ಬ್ರೂನಿಯ ರಾಜ, ನಟಿ ಎಲಿಜಬೆತ್ ಟೇಲರ್, ಬಹರೇನ್ ನ ಶೇಖ್ ಇಸಾ ಬಿನ್ ಸಲ್ಮಾನ್ ಅಲ್ ಖಲೀಫಾ, ಬ್ರಿಟಿಷ್ ಪ್ರಧಾನಿ ಮಾರ್ಗರೇಟ್ ಥ್ಯಾಚರ್, ಶಸ್ತ್ರಾಸ್ತ್ರ ಡೀಲರ್ ಅದ್ನಾನ್ ಖಶೋಗಿ, ಡಿ ಕಂಪನಿ ಒಡೆಯ ಭೂಗತ ಪಾತಕಿ, ದಾವೂದ್ ಇಬ್ರಾಹಿಂ ಸೇರಿದಂತೆ ವಿಶ್ವದೆಲ್ಲೆಡೆ ತಮ್ಮ ಭಕ್ತರನ್ನು ಹೊಂದಿದ್ದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications