ವ್ಯಕ್ತಿ ಚಿತ್ರ : ಮೇಘಗಳ ನಾಡಿನ ಸಿಎಂ ಕೊನ್ರಾಡ್ ಸಂಗ್ಮಾ
ಬೆಂಗಳೂರು, ಮಾರ್ಚ್ 06: ಈಶಾನ್ಯ ರಾಜ್ಯಗಳಲ್ಲಿ ಕೇಸರಿ ಬಾವುಟ ಹಾರಿಸುವಲ್ಲಿ ಅಮಿತ್ ಶಾ ಹಾಗೂ ಪ್ರಧಾನಿ ಮೋದಿ ಜೋಡಿ ಯಶಸ್ವಿಯಾಗಿದೆ.
ಚುನಾವಣೆ ಫಲಿತಾಂಶದ ನಂತರ ಅತಂತ್ರ ಸ್ಥಿತಿಯಲ್ಲಿದ್ದ ಮೇಘಾಲಯದಲ್ಲೂ ಬಿಜೆಪಿ ಮಿತ್ರ ಪಕ್ಷ ಅಧಿಕಾರ ಗದ್ದುಗೆ ಹಿಡಿದೆ. ಮೇಘಗಳ ನಾಡಿನ ಮುಖ್ಯಮಂತ್ರಿಯಾಗಿ ಕೊನ್ರಾಡ್ ಸಂಗ್ಮಾ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕೊನ್ರಾಡ್ ಅವರ ಸಂಕ್ಷಿಪ್ತ ಪರಿಚಯ ಇಲ್ಲಿದೆ.
ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್ ಪಿಪಿ) ಸ್ಥಾಪಕ ಪಿ.ಎ ಸಂಗ್ಮಾ ಅವರ ಪುತ್ರಿ ಅಗಾಥಾ ಸಂಗ್ಮಾ ಹಾಗೂ ಪುತ್ರ ಜೇಮ್ಸ್ ಸಂಗ್ಮಾ ಇಬ್ಬರು ಕ್ರಮವಾಗಿ ಡೌತ್ ಟುರಾ ಹಾಗೂ ಡಡೆಂಗ್ರೆ ಕ್ಷೇತ್ರಗಳಿಂದ ಜಯಭೇರಿ ಬಾರಿಸಿದ್ದಾರೆ.
ಈ ನಡುವೆ ಎನ್ ಪಿಪಿಯ ಅಧ್ಯಕ್ಷರಾಗಿರುವ ಕೊನ್ರಾಡ್ ಸಂಗ್ಮಾ ಅವರು ಇತರೆ ಅಭ್ಯರ್ಥಿಗಳ ಬೆಂಬಲದಿಂದ ಸರ್ಕಾರ ರಚನೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಐದು ಪಕ್ಷಗಳ ಮೈತ್ರಿಕೂಟ ರಚಿಸಿಕೊಂಡು 34 ಶಾಸಕರ ಬೆಂಬಲದೊಂದಿಗೆ ಅಧಿಕಾರ ಸ್ಥಾಪಿಸಿದ್ದಾರೆ.

ಹಾಲಿ ಎನ್ ಪಿಪಿ ಅಧ್ಯಕ್ಷ ಕೊನ್ರಾಡ್ ಸಂಗ್ಮಾ
27 ಜನವರಿ 1978ರಂದು ಜನಿಸಿದ ಕೊನ್ರಾಡ್ ಸಂಗ್ಮಾ ಅವರು ಮೇಘಾಲಯದ 8ನೇ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದರು. ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್ ಪಿಪಿ) ಪಕ್ಷದ ಅಧ್ಯಕ್ಷರಾಗಿದ್ದು, ಸೆಲ್ಸೆಲ್ಲಾ(ಎಸ್ ಟಿ) ಕ್ಷೇತ್ರ, ಪಶ್ಚಿಮ ಗರೋ ಹಿಲ್ ಜಿಲ್ಲೆಯಿಂದ ಆಯ್ಕೆಯಾದವರು.

ಪಿ.ಎ ಸಂಗ್ಮಾ ಅವರ ಪುತ್ರ
ಮಾಜಿ ಮುಖ್ಯಮಂತ್ರಿ, ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್ ಪಿಪಿ) ಪಕ್ಷದ ಸ್ಥಾಪಕ, ಲೋಕಸಭೆಯ ಮಾಜಿ ಸ್ಪೀಕರ್ ಪಿ.ಎ ಸಂಗ್ಮಾ ಅವರ ಪುತ್ರ ಸಂಗ್ಮಾ.

ಅಗಾಥಾ ಸಂಗ್ಮಾ ಭವಿಷ್ಯದ ನಾಯಕಿ
ಕೊನ್ರಾಡ್ ಸಂಗ್ಮಾ ಅವರ ಸೋದರಿ ಆಗಾಥಾ ಸಂಗ್ಮಾ ಅವರು 15ನೇ ಲೋಕಸಭಾ ಸದಸ್ಯೆಯಾಗಿದ್ದರು. ಕೇಂದ್ರದ ಮಾಜಿ ಸಚಿವೆಯಾಗಿದ್ದು, ಭವಿಷ್ಯದ ಸಿಎಂ ಅಭ್ಯರ್ಥಿ ಎಂದೇ ಬಿಂಬಿಸಲಾಗುತ್ತಿದೆ. ಸೋದರ ಜೇಮ್ಸ್ ಸಂಗ್ಮಾ ಅವರು ಮೇಘಾಲಯ ಅಸೆಂಬ್ಲಿಯ ಚೀಫ್ ವಿಪ್ ಆಗಿದ್ದಾರೆ.

ಮುಕುಲ್ ಸಂಗ್ಮಾ ಅಧಿಕಾರ ಅಂತ್ಯ
ಮುಕುಲ್ ಸಂಗ್ಮಾ ಅಧಿಕಾರ ಅಂತ್ಯ ಕಂಡಿದೆ. 2008ರಲ್ಲಿ ಮೇಘಾಲಯದ ಕಿರಿಯ ವಯಸ್ಸಿನಲ್ಲೇ ವಿತ್ತ ಸಚಿವರೆನಿಸಿಕೊಂಡಿದ್ದ ಕೊನ್ರಾಡ್ ಅವರು ಸದ್ಯ ತುರಾ ಲೋಕಸಭೆ ಕ್ಷೇತ್ರದಿಂದ ಸಂಸತ್ತಿಗೆ ಆಯ್ಕೆಯಾಗಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications