ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನ ಈ ಇಬ್ಬರಲ್ಲಿ ಯಾರಿಗೆ?
ರಾಜ್ಯಸಭೆಯಲ್ಲಿ ತಮ್ಮ ಪಕ್ಷದ ನಾಯಕರನ್ನಾಗಿ ಸೋನಿಯಾ ಗಾಂಧಿ ಯಾರನ್ನು ನೇಮಿಸಲಿದ್ದಾರೆ ಎನ್ನುವುದು ಸಾಕಷ್ಟು ಕುತೂಹಲಕ್ಕೆ ಎಡೆಮಾಡಿ ಕೊಟ್ಟಿದೆ. ಈ ಸಂಬಂಧ ಚರ್ಚೆಗಳು ಈಗಾಗಲೇ ಆರಂಭವಾಗಿವೆ.
ರಾಜ್ಯಸಭೆಯಲ್ಲಿ ಹಾಲೀ ವಿರೋಧ ಪಕ್ಷದ ನಾಯಕರಾಗಿರುವ ಗುಲಾಂ ನಬಿ ಆಜಾದ್ ಅವರ ನಿವೃತ್ತಿ ಅವಧಿ ಮುಂದಿನ ತಿಂಗಳು ಅಂದರೆ ಫೆಬ್ರವರಿಯಲ್ಲಿ ಮುಕ್ತಾಯಗೊಳ್ಳಲಿದೆ. ಹಾಗಾಗಿ, ಸೋನಿಯಾ ಗಾಂಧಿ ಶೀಘ್ರವಾಗಿ ಈ ಹುದ್ದೆಗೆ ನಾಯಕರನ್ನು ನೇಮಿಸಬೇಕಿದೆ.
ಸದ್ಯ ಕಾಂಗ್ರೆಸ್ ಪಕ್ಷ 37 ಸದಸ್ಯರನ್ನು ಹೊಂದಿದೆ. ಇದರಲ್ಲಿ ಎ.ಕೆ.ಆಂಟನಿ, ಪಿ.ಚಿದಂಬರಂ, ಆಸ್ಕರ್ ಫೆರ್ನಾಂಡಿಸ್, ದೀಪೇಂದರ್ ಸಿಂಗ್ ಹೂಡಾ, ಜೈರಾಂ ರಮೇಶ್, ದಿಗ್ವಿಜಯ್ ಸಿಂಗ್, ಮನಮೋಹನ್ ಸಿಂಗ್ , ಕೆ.ಸಿ. ವೇಣುಗೋಪಾಲ್ ಮುಂತಾದ ಹಿರಿಯ ನಾಯಕರಿದ್ದಾರೆ.
ಆದರೆ, ಇವರಲ್ಲಿ ಯಾರನ್ನೂ ಸೋನಿಯಾ ಗಾಂಧಿ ಪರಿಗಣಿಸುವ ಸಾಧ್ಯತೆ ಕಮ್ಮಿ ಎಂದು ಹೇಳಲಾಗುತ್ತಿದೆ. ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಹುದ್ದೆಗೆ ಇಬ್ಬರು ಹಿರಿಯ ನಾಯಕರನ್ನು ಸೋನಿಯಾ ಅಂತಿಮ ಮಾಡಿದ್ದು, ಅವರಲ್ಲಿ ಒಬ್ಬರ ಹೆಸರನ್ನು ಸದ್ಯದಲ್ಲೇ ಪ್ರಕಟಿಸುವ ಸಾಧ್ಯತೆಯಿದೆ. ಆ ಎರಡು ಹೆಸರು, ಮುಂದೆ ಓದಿ..

ಈಗಿರುವ ಹಿರಿಯ ನಾಯಕರುಗಳ ಪೈಕಿ ಕೆಲವರು ಹೈಕಮಾಂಡ್ ಗೆ ಪತ್ರ ಬರೆದಿದ್ದರು
ಈಗಿರುವ ಹಿರಿಯ ನಾಯಕರುಗಳ ಪೈಕಿ ಕೆಲವರು ಹೈಕಮಾಂಡ್ ಗೆ ಪತ್ರ ಬರೆದಿದ್ದರು. ಇಷ್ಟು ದಿನವಾದರೂ ಪಕ್ಷದಲ್ಲಿ ಆಂತರಿಕವಾಗಿ ಅಷ್ಟೇನೂ ಬೆಳವಣಿಗೆಗಳು ಕಾಣುತ್ತಿಲ್ಲ ಎನ್ನುವ ಅಸಮಾಧಾನ ಇನ್ನೂ ಕೆಲವು ನಾಯಕರುಗಳಿಗಿದೆ. ಪತ್ರ ಬರೆದವರಲ್ಲಿ ಕೆಲವರು ವಿರೋಧ ಪಕ್ಷದ ನಾಯಕನ ಸ್ಥಾನದ ಆಕಾಂಕ್ಷಿಗಳಿದ್ದಾರೆ. ಹಾಗಾಗಿ, ಅತ್ಯಂತ ಜಾಗರೂಕತೆಯಿಂದ ಈ ಹುದ್ದೆಗೆ ಹೆಸರನ್ನು ಸೋನಿಯಾ ಗಾಂಧಿ ಅಂತಿಮಗೊಳಿಸಬೇಕಿದೆ.

ವಿರೋಧ ಪಕ್ಷದ ನಾಯಕರಾಗಿದ್ದ ಮಲ್ಲಿಕಾರ್ಜುನ ಖರ್ಗೆ
ಕಳೆದ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದ ಮಲ್ಲಿಕಾರ್ಜುನ ಖರ್ಗೆ ಆ ಹುದ್ದೆಯನ್ನು ಸಮರ್ಥವಾಗಿ ನಿಭಾಯಿಸಿದ್ದರು. ಆದರೆ, ಲೋಕಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದರಿಂದ, ಖರ್ಗೆ ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿತ್ತು.

ಬಿಜೆಪಿ ಎದುರು ಬಂಡೆಯಂತೆ ನಿಂತಿದ್ದು ಮಲ್ಲಿಕಾರ್ಜುನ್ ಖರ್ಗೆ
ತಮ್ಮ ಅಪಾರ ರಾಜಕೀಯ ಅನುಭವದಲ್ಲಿ ಖರ್ಗೆ ಅವರಿಗೆ ಬಯಸಿದ ಹುದ್ದೆಗಳು ಸಿಕ್ಕಿರಲಿಲ್ಲ. ಹಲವು ಬಾರಿ ಅವರ ಹೆಸರು ಕರ್ನಾಟಕದ ಮುಖ್ಯಮಂತ್ರಿ ಹುದ್ದೆಗೆ ಕೇಳಿ ಬಂದಿತ್ತು. ಕಾಂಗ್ರೆಸ್ ಮುಕ್ತ ಭಾರತ ಎಂದು ಬೀಗುತ್ತಿದ್ದ ಬಿಜೆಪಿ ಎದುರು ಬಂಡೆಯಂತೆ ನಿಂತಿದ್ದು ಮಲ್ಲಿಕಾರ್ಜುನ್ ಖರ್ಗೆ. ಹಾಗಾಗಿ, ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಖರ್ಗೆ ಹೆಸರು ಮಂಚೂಣಿಯಲ್ಲಿ ಕೇಳಿಬರುತ್ತಿದೆ. ಇದರ ಜೊತೆಗೆ..

ಹಿಮಾಚಲ ಪ್ರದೇಶದ ಆನಂದ್ ಶರ್ಮಾ
ಇನ್ನೊಂದು ಕಡೆ ಸದ್ಯ ರಾಜ್ಯಸಭೆಯಲ್ಲಿ ಉಪಾಧ್ಯಕ್ಷರಾಗಿರುವ, ಹಿಮಾಚಲ ಪ್ರದೇಶದ ಆನಂದ್ ಶರ್ಮಾ ಕೂಡಾ ವಿರೋಧ ಪಕ್ಷದ ನಾಯಕನ ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ಸೋನಿಯಾ ಗಾಂಧಿಗೆ ಪತ್ರ ಬರೆದಿರುವ ನಾಯಕರುಗಳ ಪೈಕಿ ಆನಂದ್ ಶರ್ಮಾ ಕೂಡಾ ಒಬ್ಬರು. ಹಾಗಾಗಿ, ಖರ್ಗೆ ಮತ್ತು ಶರ್ಮಾ ನಡುವೆ ತುರುಸಿನ ಸ್ಪರ್ಧೆ ಏರ್ಪಡುವ ಸಾಧ್ಯತೆಯಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications