ಹೋಗಲ್ಲ, ಹೋಗಲ್ಲ ಎನ್ನುತ್ತಲೆ ದೆಹಲಿಯತ್ತ ಹೊರಟ ಡಿಕೆ ಶಿವಕುಮಾರ್, ಇಂದು ಸಿಎಂ ಘೋಷಣೆ ಸಾಧ್ಯತೆ

ನವದೆಹಲಿ, ಮೇ. 16: ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸ್ಪಷ್ಟ ಜನಾದೇಶ ದೊರೆತ ಕೆಲವೇ ದಿನಗಳಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರೆಂಬ ಕುತೂಹಲ ಮುಂದುವರಿದಿದೆ. ರಾಜ್ಯ ಕಾಂಗ್ರೆಸ್‌ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಮುಖ ಆಕಾಂಕ್ಷಿಗಳಾಗಿದ್ದು, ಮಂಗಳವಾರ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿ ಪಕ್ಷದ ರಾಷ್ಟ್ರೀಯ ನಾಯಕತ್ವದ ಮುಂದೆ ತಮ್ಮ ವಾದ ಮಂಡಿಸಲಿದ್ದಾರೆ.

ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿರುವ ಹಿರಿಯ ನಾಯಕ ಸಿದ್ದರಾಮಯ್ಯ ಅವರು ಪಕ್ಷ ಹೆಸರನ್ನು ಘೋಷಿಸುವ ಮುನ್ನವೇ ಸೋಮವಾರವೇ ದೆಹಲಿಗೆ ಬಂದಿದ್ದಾರೆ. ಜೊತೆಗೆ ಅವರ ಕೆಲವು ಬೆಂಬಲಿಗರು ದೆಹಲಿಯಲ್ಲಿ ಠಿಕಾಣಿ ಹೂಡಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ರಾಹುಲ್ ಗಾಂಧಿ ಅವರನ್ನೊಳಗೊಂಡ ಪಕ್ಷದ ನಾಯಕತ್ವಕ್ಕೆ ವೀಕ್ಷಕರ ತಂಡವು ಹೊಸದಾಗಿ ಆಯ್ಕೆಯಾದ ಕರ್ನಾಟಕದ ಶಾಸಕರ ಅಭಿಪ್ರಾಯಗಳನ್ನು ಸೋಮವಾರ ವಿವರಿಸಿದೆ.

Who Is Next Karnataka Chief Ministe

ವೀಕ್ಷಕರ ತಂಡವು ಬೆಂಗಳೂರಿನಲ್ಲಿ ಎಲ್ಲಾ ನೂತನ ಶಾಸಕರನ್ನು ಭೇಟಿಯಾಗಿ ಭಾನುವಾರ ರಹಸ್ಯ ಮತದಾನವನ್ನು ನಡೆಸಿದೆ. ಅದರ ಫಲಿತಾಂಶಗಳನ್ನು ಪಕ್ಷದ ಅಧ್ಯಕ್ಷರಿಗೆ ನೀಡಲಾಗಿದ್ದು, ಅವರು ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ ಎಂದು ವರದಿಯಾಗಿದೆ. ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿಯ ಹೆಸರನ್ನು ಕಾಂಗ್ರೆಸ್ ಘೋಷಿಸಬಹುದು ಎಂದು ಪಕ್ಷದ ಮೂಲಗಳು ತಿಳಿಸಿವೆ.

ಎನ್‌ಡಿಟಿವಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ, ಸಿಎಂ ಹುದ್ದೆ ಆಕಾಂಕ್ಷಿಯಾದ ಡಿಕೆ ಶಿವಕುಮಾರ್ ಅವರು ತಾವು ಬ್ಲ್ಯಾಕ್‌ಮೇಲ್ ಮಾಡುವುದಿಲ್ಲ ಅಥವಾ ಬಂಡಾಯ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಆದರೆ ಕರ್ನಾಟಕದಲ್ಲಿ ಪ್ರಬಲವಾದ ಗೆಲುವಿನ ಹಿಂದೆ ಯಾರಿದ್ದಾರೆ ಎಂಬುದನ್ನು ಪಕ್ಷದ ನಾಯಕತ್ವ ಒಪ್ಪಿಕೊಳ್ಳಬೇಕು ಎಂದು ಬೇಡಿಕೆ ಇಟ್ಟಿದ್ದಾರೆ.

Who Is Next Karnataka Chief Ministe

"ನೀವು ಕರ್ನಾಟಕವನ್ನು ಉದ್ಧಾರ ಮಾಡುತ್ತೀರಿ ಎಂಬ ವಿಶ್ವಾಸವಿದೆ" ಎಂದು ಸೋನಿಯಾ ಗಾಂಧಿ ಹೇಳಿದ್ದರು. ನಾನು ಇಲ್ಲಿ ಕುಳಿತು ನನ್ನ ನಿಯಮಿತ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದೇನೆ. ಮೂಲ ಸೌಜನ್ಯ, ಸ್ವಲ್ಪ ಕೃತಜ್ಞತೆ ಇರಬೇಕು. ಗೆಲುವಿನ ಹಿಂದೆ ಯಾರು ಇದ್ದಾರೆ ಎಂದು ಒಪ್ಪಿಕೊಳ್ಳುವ ಸೌಜನ್ಯ ಅವರಿಗಿರಬೇಕು. ನಾನು ಬ್ಲ್ಯಾಕ್‌ಮೇಲ್ ಮಾಡುವುದಿಲ್ಲ, ಅದು ನಾನಲ್ಲ. ಯಾವುದನ್ನೂ ಗ್ರಹಿಸಬೇಡಿ. ನನಗೆ ನನ್ನದೇ ಆದ ಮನಸ್ಸಿನ ಅಸ್ತಿತ್ವವಿದೆ. ನಾನು ಮಗು ಅಲ್ಲ. ನಾನು ಯಾರ ಬಲೆಗೆ ಬೀಳುವುದಿಲ್ಲ" ಎಂದು ಡಿಕೆ ಶಿವಕುಮಾರ್ ಹೇಳಿದ್ದರು.

ಶಾಸಕರ ಬೆಂಬಲವಿದೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಾನು ಅವರಿಗೆ ಶುಭ ಹಾರೈಸುತ್ತೇನೆ ಎಂದಿದ್ದಾರೆ. 224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷವು 135 ಸ್ಥಾನಗಳನ್ನು ಗೆದ್ದುಕೊಂಡಿತು. ಆದರೆ, ಮುಖ್ಯಮಂತ್ರಿ ಆಯ್ಕೆ ಪಕ್ಷಕ್ಕೆ ದೊಡ್ಡ ಪರೀಕ್ಷೆಯಾಗಿದೆ. ಚುನಾವಣೆಯ ಪೂರ್ವದಲ್ಲಿ, ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವೆ ದೊಡ್ಡ ಭಿನ್ನಾಭಿಪ್ರಾಯವಿದೆ ಎಂಬ ವದಂತಿಯ ನಡುವೆಯೂ ಕಾಂಗ್ರೆಸ್ ಭರ್ಜರಿ ಜಯ ಗಳಿಸಿದೆ.

ಸಿದ್ದರಾಮಯ್ಯನವರು ಜನಾಕರ್ಷಣೆಯ ನಾಯಕರಾಗಿದ್ದು, ಎಲ್ಲಾ ವರ್ಗದವರಲ್ಲಿ ಜನಪ್ರಿಯರಾಗಿದ್ದಾರೆ. 2013-18 ರಿಂದ ಪೂರ್ಣ ಐದು ವರ್ಷಗಳ ಅವಧಿಯ ಸರ್ಕಾರವನ್ನು ನಡೆಸಿದ ಅನುಭವವನ್ನು ಹೊಂದಿದ್ದಾರೆ. ಶಿವಕುಮಾರ್ ಪ್ರಬಲವಾದ ಸಂಘಟನಾ ಸಾಮರ್ಥ್ಯಗಳನ್ನು ಹೊಂದಿದ್ದಾರೆ. ಕಠಿಣ ಸಮಯದಲ್ಲಿ ಕಾಂಗ್ರೆಸ್‌ಗೆ ನೆರವಾಗಿ ನಿಂತು ಟ್ರಬಲ್ ಶೂಟರ್ ಎಂಬ ಹೆಸರು ಪಡೆದಿದ್ದಾರೆ. ಪ್ರಬಲ ಒಕ್ಕಲಿಗ ಸಮುದಾಯ ಮತ್ತು ಅದರ ನಾಯಕರ ಬೆಂಬಲವನ್ನು ಪಡೆದಿದ್ದಾರೆ.

ಹಲವು ಚುನಾವಣಾ ಪೂರ್ವ ಸಮೀಕ್ಷೆಗಳಲ್ಲಿ ಸಿದ್ದರಾಮಯ್ಯ ಅವರು ಸಿಎಂ ಹುದ್ದೆಗೆ ಹೆಚ್ಚು ಜನಪ್ರಿಯ ಆಯ್ಕೆಯಾಗಿ ಹೊರಹೊಮ್ಮಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+