ದೇಶದ ಗೊಂದಲಕಾರಿ, ಕ್ಷೀಣಿಸುತ್ತಿರುವ ಲಸಿಕೆ ಅಭಿಯಾನಕ್ಕೆ ಯಾರು ಹೊಣೆ?- ಪ್ರಿಯಾಂಕ ಗಾಂಧಿ
ನವದೆಹಲಿ, ಜೂ. 02: ದೇಶದಲ್ಲಿ ಕೊರೊನಾ ಲಸಿಕೆ ಕೊರತೆ ಹಿನ್ನೆಲೆ ಜನಸಾಮಾನ್ಯರಲ್ಲಿ ಹಲವಾರು ಗೊಂದಲಗಳು ಮನೆ ಮಾಡಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ ಮುಖಂಡೆ ಪ್ರಿಯಾಂಕ ಗಾಂಧಿ ವಾದ್ರಾ, ಭಾರತದ ಗೊಂದಲಕಾರಿ, ಕ್ಷೀಣಿಸುತ್ತಿರುವ ಲಸಿಕೆ ಕಾರ್ಯಕ್ರಮಕ್ಕೆ ಯಾರು ಹೊಣೆ? ಎಂದು ಪ್ರಶ್ನಿಸಿದ್ದಾರೆ.
ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಟ್ವೀಟರ್ ಖಾತೆಯಲ್ಲಿ ವಿಡಿಯೋವೊಂದನ್ನು ಟ್ವೀಟ್ ಮಾಡಲಾಗಿದೆ. ಈ ವಿಡಿಯೋದಲ್ಲಿ ಮಾತನಾಡಿರುವ ಪ್ರಿಯಾಂಕ ಗಾಂಧಿ, ಆಗಸ್ಟ್ 15, 2020 ರ ಸ್ವಾತಂತ್ರೋತ್ಸವ ದಿನದಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮುಂದಿನ ವರ್ಷದೊಳಗೆ ಎಲ್ಲರಿಗೂ ಕೊರೊನಾ ಲಸಿಕೆ ಹಾಕಲಾಗುವುದು ಎಂಬ ಭರವಸೆ ನೀಡಿದರು. ಈಗ 2021 ರ ಮಧ್ಯಾವಧಿಯಲ್ಲಿ ನಾವಿದ್ದೇವೆ. ಆದರೆ ಪ್ರಸ್ತುತ ದಿನಕ್ಕೆ 1.9 ಮಿಲಿಯನ್ ಜನರಿಗೆ ಲಸಿಕೆ ಹಾಕಲಾಗುತ್ತಿದೆ. ನಾವು ಈ ವರ್ಷದೊಳಗೆ ಲಸಿಕೆ ಅಭಿಯಾನ ಪೂರ್ಣಗೊಳಿಸಬೇಕಾದರೆ ಪ್ರತಿ ದಿನ 7 ರಿಂದ 8 ಮಿಲಿಯನ್ ಜನರಿಗೆ ಲಸಿಕೆ ಹಾಕಬೇಕಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ಇನ್ನು ಅಭಿಯಾನದ ಆರಂಭದಲ್ಲಿ ಕೇಂದ್ರ ಸರ್ಕಾರ ಎಲ್ಲಾ ಜವಾಬ್ದಾರಿಯನ್ನು ತಾನು ಹೊತ್ತಿತ್ತು, ಆದರೆ ಈಗ ಎಲ್ಲಾ ಹೊರೆಯನ್ನು ರಾಜ್ಯಗಳಿಗೆ ಹಾಕಿಬಿಟ್ಟಿದೆ ಎಂದು ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ.

ಜರ್ಮನಿ, ಯುಎಸ್ಎನಂತಹ ರಾಷ್ಟ್ರಗಳು ಲಸಿಕೆ ಅಭಿಯಾನ ಬೇರೆಯೇ ಪ್ರಕ್ರಿಯೆಯಲ್ಲಿ ನಡೆಸುತ್ತದೆ. ಆ ದೇಶಗಳಲ್ಲಿ ಕೇಂದ್ರ ಸರ್ಕಾರ ಲಸಿಕೆಯನ್ನು ಖರೀದಿಸುತ್ತದೆ ಹಾಗೂ ರಾಜ್ಯ ಸರ್ಕಾರಗಳು ಲಸಿಕೆ ನೀಡಿಕೆ ಕಾರ್ಯಕ್ರಮ ನಡೆಸುತ್ತದೆ. ಆದರೆ ಮೋದಿ ಸರ್ಕಾರ ಯಾಕೆ ಈ ರೀತಿ ಮಾಡುವುದಿಲ್ಲ ಎಂದು ಪ್ರಶ್ನಿಸಿದ್ದಾರೆ.
ವಿಶ್ವದ ಅತಿ ಹೆಚ್ಚು ಕೊರೊನಾ ಲಸಿಕೆ ಉತ್ಪಾದನೆ ಮಾಡುವ ದೇಶಗಳಲ್ಲಿ ಭಾರತವೂ ಒಂದು. ಆದರೆ ನಮ್ಮ ಜನಸಂಖ್ಯೆಯ ಕೇವಲ ಶೇ.3.4 ಮಾತ್ರ ಸಂಪೂರ್ಣವಾಗಿ ಲಸಿಕೆ ಹಾಕಲಾಗಿದೆ ಎಂದು ಕಾಂಗ್ರೆಸ್ ಹೇಳಿದೆ.
We are one of the biggest vaccine manufacturers in the world. Yet only 3.4% of our population is fully vaccinated.
— All India Mahila Congress (@MahilaCongress) June 2, 2021
Who is responsible for India’s confused and dithering vaccination program? - Smt. @priyankagandhi#SpeakUpForFreeUniversalVaccination pic.twitter.com/pQlu4Fdinv
ಭಾರತದ ಗೊಂದಲಕಾರಿ, ಕ್ಷೀಣಿಸುತ್ತಿರುವ ಲಸಿಕೆ ಕಾರ್ಯಕ್ರಮಕ್ಕೆ ಯಾರು ಹೊಣೆ? ಎಂದು ಪ್ರಿಯಾಂಕ ಗಾಂಧಿ ವಾದ್ರಾ ಪ್ರಶ್ನಿಸಿದ್ದಾರೆ.
(ಒನ್ಇಂಡಿಯಾ ಸುದ್ದಿ)
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications