ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿ ಮೋಹನ್ ಯಾದವ್ ಯಾರು, ಅವರ ಹಿನ್ನೆಲೆ ಏನು?
ಭೋಪಾಲ್, ಡಿಸೆಂಬರ್ 11: ಮಧ್ಯಪ್ರದೇಶ ವಿಧಾನಸಭಾ ಚುನಾವಣೆ ಅಭೂತಪೂರ್ವ ವಿಜಯದ ನಂತರ ವಾರದ ಬಳಿಕ ಬಿಜೆಪಿ ರಾಜ್ಯಕ್ಕೆ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಮೋಹನ್ ಯಾದವ್ ಅವರನ್ನು ಘೋಷಿಸಿದೆ. ಈ ನಿಟ್ಟಿನಲ್ಲಿ ಅವರ ಹಿನ್ನೆಲೆ ಏನು ಎಂದು ತಿಳಿಯೋಣ.
ಫಲಿತಾಂಶ ಹೊರಬಿದ್ದ ಹತ್ತು ದಿನಗಳ ನಂತರ ಮಧ್ಯಪ್ರದೇಶದ ಹೊಸ ಮುಖ್ಯಮಂತ್ರಿಯನ್ನು ಅಂತಿಮವಾಗಿ ಘೋಷಿಸಲಾಯಿತು. ಬಿಜೆಪಿಯ ವ್ಯಾಪಕ ಊಹಾಪೋಹಗಳ ನಂತರ ಮಧ್ಯಪ್ರದೇಶದ ಮುಂದಿನ ಮುಖ್ಯಮಂತ್ರಿ ಮೋಹನ್ ಯಾದವ್ ಅವರನ್ನು ಘೋಷಿಸಲಾಯಿತು. ಈ ಮೂಲಕ ಶಿವರಾಜ್ ಸಿಂಗ್ ಚೌಹಾಣ್ ಯುಗ ಅಂತ್ಯವಾಗಿದೆ.

ಯಾರು ಈ ಮೋಹನ್ ಯಾದವ್?
ಮಧ್ಯಪ್ರದೇಶದ ಉಜ್ಜಯಿನಿ ದಕ್ಷಿಣ ಕ್ಷೇತ್ರದ ಶಾಸಕ ಮೋಹನ್ ಯಾದವ್ ಅವರನ್ನು ಭಾರತೀಯ ಜನತಾ ಪಕ್ಷವು ಸೋಮವಾರ ಚುನಾಯಿತ ಮುಖ್ಯಮಂತ್ರಿ ಎಂದು ಘೋಷಿಸಿತು. ಭೋಪಾಲ್ನ ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ ಸಭೆಯಲ್ಲಿ 58 ವರ್ಷದ ಅವರನ್ನು ಔಪಚಾರಿಕವಾಗಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರನ್ನಾಗಿ ನೇಮಿಸಲಾಯಿತು.
ಮೋಹನ್ ಯಾದವ್ ಕುಟುಂಬ:
ಮಧ್ಯಪ್ರದೇಶ ವಿಧಾನಸಭಾ ವೆಬ್ಸೈಟ್ ಪ್ರಕಾರ, ಮೋಹನ್ ಯಾದವ್ ಅವರು ಮಾರ್ಚ್ 25, 1965 ರಂದು ಜನಿಸಿದರು. ಅವರು ಉಜ್ಜಯಿನಿಯಲ್ಲಿ ಜನಿಸಿದರು. ಅವರ ತಂದೆಯ ಹೆಸರು ಪೂನಂಚಂದ್ ಯಾದವ್. ಅವರು ಸೀಮಾ ಯಾದವ್ ಅವರನ್ನು ವಿವಾಹವಾಗಿದ್ದಾರೆ. ಅವರಿಗೆ ಇಬ್ಬರು ಪುತ್ರರು ಮತ್ತು ಒಬ್ಬ ಪುತ್ರಿ ಇದ್ದಾರೆ.
ಶಿವರಾಜ್ ಸಿಂಗ್ ಚೌಹಾಣ್ ಆಡಳಿತದಲ್ಲಿ ಯಾದವ್ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಬೆಂಬಲದೊಂದಿಗೆ ಉನ್ನತ ಶಿಕ್ಷಣ ಸಚಿವ ಸ್ಥಾನವನ್ನು ಹೊಂದಿದ್ದರು. ಯಾದವ್ ಮಧ್ಯಪ್ರದೇಶ ವಿಧಾನಸಭೆಯಲ್ಲಿ ಉಜ್ಜಯಿನಿ ಜಿಲ್ಲೆಯ ದಕ್ಷಿಣ ಸ್ಥಾನವನ್ನು ಪ್ರತಿನಿಧಿಸುತ್ತಿದ್ದಾರೆ. ಮೋಹನ್ ಯಾದವ್ ಅವರು ಬಿಎಸ್ಸಿ, ಎಲ್ಎಲ್ಬಿ, ಎಂಎ, ಎಂಬಿಎ ಮತ್ತು ಪಿಎಚ್ಡಿ ಪದವಿಗಳನ್ನು ಪಡೆದಿದ್ದಾರೆ.
ಜುಲೈ 2020 ರಲ್ಲಿ ಅವರು ಪ್ರಸ್ತುತ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಮಧ್ಯಪ್ರದೇಶ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಮಧ್ಯಪ್ರದೇಶ ಸಿಎಂ ಅಭ್ಯರ್ಥಿ ರೇಸ್ನಲ್ಲಿ ಮಾಜಿ ಕೇಂದ್ರ ಸಚಿವ ಮತ್ತು ಹೊಸದಾಗಿ ಚುನಾಯಿತ ದಿಮಾನಿ ಶಾಸಕ ನರೇಂದ್ರ ತೋಮರ್, ಇಂದೋರ್ ಹೆವಿವೇಟ್ ಕೈಲಾಶ್ ವಿಜಯವರ್ಗಿಯಾ, ರಾಜ್ಯ ಘಟಕದ ಮುಖ್ಯಸ್ಥ ವಿಡಿ ಶರ್ಮಾ ಮತ್ತು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಈ ಹುದ್ದೆಗೆ ಮುಂಚೂಣಿಯಲ್ಲಿದ್ದರು.
ಡಿಸೆಂಬರ್ 3 ರಂದು ಬಿಜೆಪಿ ಗೆದ್ದ ರಾಜ್ಯಗಳ ಮೂವರು ಮುಖ್ಯಮಂತ್ರಿಗಳಲ್ಲಿ ಇಬ್ಬರ ನೇಮಕಾತಿ ಕೊನೆಗೊಂಡವು. ವಿಷ್ಣು ದೇವ್ ಸಾಯಿ ಅವರನ್ನು ಭಾನುವಾರ ಛತ್ತೀಸ್ಗಢ ಮುಖ್ಯಮಂತ್ರಿಯಾಗಿ ನೇಮಿಸಲಾಯಿತು. ಈ ಬಾರಿ ಮಧ್ಯಪ್ರದೇಶದ ಚುನಾವಣೆಯಲ್ಲಿ ಮೋಹನ್ ಯಾದವ್ 2023 ರ ಚುನಾವಣೆಯಲ್ಲಿ 13000 ಕ್ಕೂ ಹೆಚ್ಚು ಮತಗಳಿಂದ ಗೆದ್ದಿದ್ದಾರೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications