ಜಮ್ಮು, ಲಡಾಖ್ ಅನ್ನು ಪ್ರತ್ಯೇಕವಾಗಿ ಗುರುತಿಸಿದ WHO: ಸ್ಪಷ್ಟನೆ
ನವದೆಹಲಿ, ಫೆಬ್ರವರಿ 4: ವಿಶ್ವ ಆರೋಗ್ಯ ಸಂಸ್ಥೆಯ ವೆಬ್ಸೈಟ್ನಲ್ಲಿರುವ ಭಾರತದ ನಕ್ಷೆಯಲ್ಲಿ ಕೇಂದ್ರಾಡಳಿತ ಪ್ರದೇಶಗಳಾದ ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ಗಳನ್ನು ಬೇರೆ ಬಣ್ಣಗಳಲ್ಲಿ ಗುರುತಿಸಿರುವುದಕ್ಕೆ ಭಾರತ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಭೂಪಟಗಳ ವಿಚಾರದಲ್ಲಿ ವಿಶ್ವಸಂಸ್ಥೆಯ ಮಾರ್ಗಸೂಚಿಗಳನ್ನು ಅನುಸರಿಸುತ್ತಿರುವುದಾಗಿ ಡಬ್ಲ್ಯೂಎಚ್ಒ ಪ್ರತಿಕ್ರಿಯೆ ನೀಡಿತ್ತು.
ಕಳೆದ ತಿಂಗಳು ದೇಶದಲ್ಲಿನ ಕೋವಿಡ್ ಸನ್ನಿವೇಶದ ಮಾಹಿತಿ ಒದಗಿಸುವ ಸಂಖ್ಯೆಗಳ ಪಟ್ಟಿಯನ್ನು ವಿಶ್ವ ಆರೋಗ್ಯ ಸಂಸ್ಥೆ ಭೂಪಟದ ಮೂಲಕ ನೀಡಿತ್ತು. ಭಾರತದ ಉಳಿದ ಭಾಗ ತಿಳಿ ನೀಲಿ ಬಣ್ಣದಲ್ಲಿದ್ದರೆ, ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಅನ್ನು ಪ್ರತ್ಯೇಕ ದೇಶಗಳೆಂಬಂತೆ ಬೂದು ಬಣ್ಣದಲ್ಲಿ ಗುರುತಿಸಲಾಗಿದೆ. ವಿವಾದಾತ್ಮಕ ಗಡಿ ಪ್ರದೇಶ ಅಕ್ಸೈ ಚಿನ್ ಅನ್ನು ಬೂದು ಬಣ್ಣ ಹಾಗೂ ನೀಲಿ ಗೆರೆಗಳಿಂದ ತೋರಿಸಲಾಗಿದೆ. ಚೀನಾದ ಭಾಗವನ್ನು ಕೂಡ ಅದೇ ರೀತಿ ಚಿತ್ರಿಸಲಾಗಿತ್ತು. ಇದಕ್ಕೆ ಭಾರತದಿಂದ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.
ಈ ಭೂಪಟದ ವಿರುದ್ಧ ಭಾರತದ ವಿದೇಶಾಂಗ ವ್ಯವಹಾರಗಳ ಇಲಾಖೆ ವಿಶ್ವಸಂಸ್ಥೆಗೆ ಖಾರವಾದ ಪತ್ರ ಬರೆದಿತ್ತು. ಹೀಗಾಗಿ ಡಬ್ಲ್ಯೂಎಚ್ಒ ಇದೀಗ ತನ್ನ ಪೋರ್ಟಲ್ನಲ್ಲಿ ವಿವರಣೆ ಪ್ರಕಟಿಸಿದೆ.

'ವಿಶ್ವ ಆರೋಗ್ಯ ಸಂಸ್ಥೆಯ ವೆಬ್ಸೈಟ್ನಲ್ಲಿ ಭಾರತದ ಭೂಪಟವನ್ನು ತಪ್ಪಾಗಿ ಚಿತ್ರಿಸಿದ್ದರ ವಿರುದ್ಧ ಉನ್ನತ ಮಟ್ಟದಲ್ಲಿ ಸೇರಿದಂತೆ ಡಬ್ಲ್ಯೂಎಚ್ಒಗೆ ಕಠಿಣವಾದ ಆಕ್ಷೇಪ ವ್ಯಕ್ತಪಡಿಸಲಾಗಿತ್ತು. ಇದಕ್ಕೆ ಪ್ರತಿಕ್ರಿಯೆಯಾಗಿ ಜಿನೀವಾದಲ್ಲಿನ ಭಾರತದ ಕಾಯಂ ಯೋಜನೆಗೆ ಡಬ್ಲ್ಯೂಎಚ್ಒ ಮಾಹಿತಿ ನೀಡಿದ್ದು, ಅದಕ್ಕೆ ವಿವರಣೆಯನ್ನು ಪ್ರಕಟಿಸಿದೆ' ಎಂದು ವಿದೇಶಾಂಗ ವ್ಯವಹಾರಗಳ ರಾಜ್ಯ ಖಾತೆ ಸಚಿವ ವಿ. ಮುರಳೀಧರನ್ ತಿಳಿಸಿದ್ದಾರೆ.
'ಈ ಭೂಪಟದ ಚಿತ್ರಣಗಳು ಯಾವುದೇ ದೇಶ, ಪ್ರದೇಶ ಅಥವಾ ಭಾಗದ ಕಾನೂನಾತ್ಮಕ ಮಾನ್ಯತೆಯ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆಯ ಅಭಿಪ್ರಾಯಗಳನ್ನು ದಾಖಲಿಸುವುದಿಲ್ಲ. ನಕ್ಷೆಯಲ್ಲಿನ ಚುಕ್ಕೆ ಗುರುತುಗಳು ಅಂದಾಜು ಗಡಿ ಭಾಗಗಳನ್ನು ತೋರಿಸುತ್ತವೆ. ಅದಕ್ಕೆ ಸಂಪೂರ್ಣ ಒಪ್ಪಿಗೆ ಇಲ್ಲದೆ ಇರಬಹುದು' ಎಂದು ವಿಶ್ವ ಆರೋಗ್ಯ ಸಂಸ್ಥೆಯ ಹೇಳಿಕೆ ತಿಳಿಸಿದೆ ಎಂಬುದಾಗಿ ಮುರಳೀಧರನ್ ಟ್ವೀಟ್ ಮಾಡಿದ್ದಾರೆ.
-
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ: 13,712 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ ಎಸ್ಐಟಿ -
Viral Video: 'ಓಂಕಾರ' ಚಿತ್ರದ ಬೀಡಿ ಜಲೈಲೆ ಹಾಡಿಗೆ ಸಖತ್ ಸ್ಟೆಪ್ಸ್ ಹಾಕಿದ ಬ್ರೆಜಿಲ್ ಬೆಡಗಿಯರು -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ












Click it and Unblock the Notifications