2ಜಿ ಸ್ಪೆಕ್ಟ್ರಂ: ಎಲ್ಲಾ ಆರೋಪಿಗಳು ಖುಲಾಸೆ, ಯಾರು, ಏನು ಹೇಳಿದರು?
Recommended Video

ನವದೆಹಲಿ, ಡಿಸೆಂಬರ್ 21: 2014ರಲ್ಲಿ ಯುಪಿಎ ಸರ್ಕಾರ ಅಧಿಕಾರವಧಿಯಲ್ಲಿ ನಡೆದಿದ್ದ 30 ಸಾವಿರ ಕೋಟಿ ರು. 2ಜಿ ಸ್ಪೆಕ್ಟ್ರಂ ಹಗರಣದ ಅಂತಿಮ ತೀರ್ಪು ಹೊರ ಬಿದ್ದಿದೆ.
ಮಾಜಿ ಸಚಿವ ಎ.ರಾಜಾ, ಕರಣಾನಿಧಿ ಅವರ ಪುತ್ರಿ ಕನ್ನಿಮೊಳಿ ಸೇರಿದಂತೆ ಒಟ್ಟು 17 ಆರೋಪಿಗಳನ್ನು ಖುಲಾಸೆಗೊಳಿಸಿ ದೆಹಲಿಯ ವಿಶೇಷ ಸಿಬಿಐ ನ್ಯಾಯಾಲಯದ ನ್ಯಾಯಮೂರ್ತಿ ಒ.ಪಿ. ಸೈನಿ ಅವರು ಗುರುವಾರ ಮಹತ್ವದ ಆದೇಶ ಹೊಡಿಸಿದ್ದಾರೆ.
ಹರಣವನ್ನು ಸಾಬೀತುಪಡಿಸಲು ಸಿಬಿಐ ಮತ್ತು ಇಡಿ ವಿಫಲವಾಗಿದೆ. ಇದರಿಂದ ಈ ಆರೋಪವನ್ನು ಕೋರ್ಟ್ ತಳ್ಳಿ ಹಾಕಿದೆ. ಇದರಿಂದ ಈ ಹಗರಣದ ತನಿಖೆ ನಡೆಸಿದ್ದ ಸಿಬಿಐ ಹಾಗೂ ಇಡಿಗೆ ತೀವ್ರ ಮುಖಭಂಗವಾಗಿದೆ.
ತೀರ್ಪು ಪ್ರಕಟವಾಗುತ್ತಿದ್ದಂತೆಯೇ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು. ಇನ್ನು ಈ ಬಹುಕೋಟಿ ಹಗರಣದಲ್ಲಿ ಅಂತಿಮ ತೀರ್ಪಿನ ಬಗ್ಗೆ ಯಾರು ಏನು ಹೇಳಿದರು ಎನ್ನುವುದನ್ನು ಮುಂದೆ ಓದಿ.

ಕಾಂಗ್ರೆಸ್ ರಾಜ್ಯಸಬಾ ಸದಸ್ಯ ಬಿ.ಕೆ ಹರಿಪ್ರಸಾದ್
ಬಿಜೆಪಿಯ ಸುಳ್ಳು ಪ್ರಚಾರ ಬಯಲಾಗಿದೆ. ಬಿಜೆಪಿಯವರು ವಿನಾಕಾರಣ ಮನಮೋಹನ್ ಸಿಂಗ್ ಅವರನ್ನು ದೂರುತ್ತಿದ್ದರು. ಇದೀಗ ಪ್ರಧಾನಿ ನರೇಂದ್ರ ಮೋದಿ ಮನಮೋಹನ್ ಸಿಂಗ್ ಅವರ ಬಳಿ ಕ್ಷಮೆ ಕೇಳಬೇಳು ಎಂದು ಕಾಂಗ್ರೆಸ್ ರಾಜ್ಯಸಬಾ ಸದಸ್ಯ ಬಿ.ಕೆ ಹರಿಪ್ರಸಾದ್ ಆಗ್ರಹಿಸಿದರು.

ಸಮಾಜಿಕ ಹೋರಾಟಗಾರ ಅಣ್ಣಾ ಹಜಾರೆ
ಕೇಂದ್ರ ಸರ್ಕಾರ ಈ ಹಗರಣದ ಬಗ್ಗೆ ಪುರಾವೆಗಳನ್ನು ಹೊಂದಿದ್ದರೇ ಅವುಗಳನ್ನು ಉನ್ನತ ನ್ಯಾಯಾಲಯಕ್ಕೆ ಹೋಗಿ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಪ್ರತಿಕ್ರಿಯಿಸಿದರು.

ಮಾಜಿ ಕೇಂದ್ರ ಸಚಿವ ಶಶಿತರೂರ್
ವಿಶೇಷ ಸಿಬಿಐ ನ್ಯಾಯಾಲಯದ ತೀರ್ಪುನ್ನು ಒಪ್ಪುತ್ತೇವೆ. ಈ ತೀರ್ಪು ಸತ್ಯಕ್ಕೆ ಜಯ ಎಂದು ಕೇಂದ್ರ ಮಾಜಿ ಸಚಿವ ಹಾಗೂ ಸಂಸದ ಶಶಿತರೂರ್ ಅಭಿಪ್ರಾಯಪಟ್ಟರು.

ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ
ವಿಶೇಷ ಸಿಬಿಐ ನ್ಯಾಯಾಲಯದ ತೀರ್ಪು ಒಪ್ಪುತ್ತೇನೆ.ಸತ್ಯಕ್ಕೆ ಜಯ ಸಿಕ್ಕಿದೆ ಎಂದು ಮಾಜಿ ಕೇಂದ್ರ್ ಸಚಿವ ಪಿ. ಚಿದಂಬರಂ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ
ಕಾಂಗ್ರೆಸ್ ಮುಖಂಡರು ಈ ತೀರ್ಪನ್ನು ಕೆಲವು ವಿಧದ ಗೌರವಾರ್ಥವಾಗಿ ಪರಿಗಣಿಸಿದ್ದಾರೆ. ಮತ್ತು ಅದು ಒಂದು ಪ್ರಾಮಾಣಿಕ ನೀತಿ ಎಂದು ಪ್ರಮಾಣೀಕರಣವನ್ನು ನೀಡುತ್ತಿದೆ.ತೀರ್ಪು ಕಾಂಗ್ರೆಸ್ ಗೆ ನೀಡಿದ ಸರ್ಟಿಫಿಕೇಟ್ ಅಲ್ಲ. ಸ್ಪೆಕ್ಟ್ರಂ ಹಂಚಿಕೆ ಮಾಡಿದ್ದ ನೀತಿ, ನಿಯಮಗಳು ಸರಿ ಇಲ್ಲ. ಮೇಲ್ಮನವಿ ಸಲ್ಲಿಸುವ ಬಗ್ಗೆ ತನಿಖಾ ತಂಡಗಳು ನಿರ್ಧರಿಸಲಿವೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಡಿಎಂಕೆ ಮುಖ್ಯಸ್ಥ ಕರುಣಾನಿಧಿ
ಇದು ಅನೀತಿಗಾದ ಸೋಲು, ನೀತಿ ನ್ಯಾಯದ ಗೆಲುವು ಎಂದು ಈ ತೀರ್ಪಿನ ಬಗ್ಗೆ ಡಿಎಂಕೆ ಮುಖ್ಯಸ್ಥ ಕರುಣಾನಿಧಿ ಪತ್ರದ ಮೂಲಕ ಅಭಿಪ್ರಾಯ ವ್ಯಕ್ತಪಡಿಸಿದರು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications