2ಜಿ ಸ್ಪೆಕ್ಟ್ರಂ: ಎಲ್ಲಾ ಆರೋಪಿಗಳು ಖುಲಾಸೆ, ಯಾರು, ಏನು ಹೇಳಿದರು?
Recommended Video

ನವದೆಹಲಿ, ಡಿಸೆಂಬರ್ 21: 2014ರಲ್ಲಿ ಯುಪಿಎ ಸರ್ಕಾರ ಅಧಿಕಾರವಧಿಯಲ್ಲಿ ನಡೆದಿದ್ದ 30 ಸಾವಿರ ಕೋಟಿ ರು. 2ಜಿ ಸ್ಪೆಕ್ಟ್ರಂ ಹಗರಣದ ಅಂತಿಮ ತೀರ್ಪು ಹೊರ ಬಿದ್ದಿದೆ.
ಮಾಜಿ ಸಚಿವ ಎ.ರಾಜಾ, ಕರಣಾನಿಧಿ ಅವರ ಪುತ್ರಿ ಕನ್ನಿಮೊಳಿ ಸೇರಿದಂತೆ ಒಟ್ಟು 17 ಆರೋಪಿಗಳನ್ನು ಖುಲಾಸೆಗೊಳಿಸಿ ದೆಹಲಿಯ ವಿಶೇಷ ಸಿಬಿಐ ನ್ಯಾಯಾಲಯದ ನ್ಯಾಯಮೂರ್ತಿ ಒ.ಪಿ. ಸೈನಿ ಅವರು ಗುರುವಾರ ಮಹತ್ವದ ಆದೇಶ ಹೊಡಿಸಿದ್ದಾರೆ.
ಹರಣವನ್ನು ಸಾಬೀತುಪಡಿಸಲು ಸಿಬಿಐ ಮತ್ತು ಇಡಿ ವಿಫಲವಾಗಿದೆ. ಇದರಿಂದ ಈ ಆರೋಪವನ್ನು ಕೋರ್ಟ್ ತಳ್ಳಿ ಹಾಕಿದೆ. ಇದರಿಂದ ಈ ಹಗರಣದ ತನಿಖೆ ನಡೆಸಿದ್ದ ಸಿಬಿಐ ಹಾಗೂ ಇಡಿಗೆ ತೀವ್ರ ಮುಖಭಂಗವಾಗಿದೆ.
ತೀರ್ಪು ಪ್ರಕಟವಾಗುತ್ತಿದ್ದಂತೆಯೇ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು. ಇನ್ನು ಈ ಬಹುಕೋಟಿ ಹಗರಣದಲ್ಲಿ ಅಂತಿಮ ತೀರ್ಪಿನ ಬಗ್ಗೆ ಯಾರು ಏನು ಹೇಳಿದರು ಎನ್ನುವುದನ್ನು ಮುಂದೆ ಓದಿ.

ಕಾಂಗ್ರೆಸ್ ರಾಜ್ಯಸಬಾ ಸದಸ್ಯ ಬಿ.ಕೆ ಹರಿಪ್ರಸಾದ್
ಬಿಜೆಪಿಯ ಸುಳ್ಳು ಪ್ರಚಾರ ಬಯಲಾಗಿದೆ. ಬಿಜೆಪಿಯವರು ವಿನಾಕಾರಣ ಮನಮೋಹನ್ ಸಿಂಗ್ ಅವರನ್ನು ದೂರುತ್ತಿದ್ದರು. ಇದೀಗ ಪ್ರಧಾನಿ ನರೇಂದ್ರ ಮೋದಿ ಮನಮೋಹನ್ ಸಿಂಗ್ ಅವರ ಬಳಿ ಕ್ಷಮೆ ಕೇಳಬೇಳು ಎಂದು ಕಾಂಗ್ರೆಸ್ ರಾಜ್ಯಸಬಾ ಸದಸ್ಯ ಬಿ.ಕೆ ಹರಿಪ್ರಸಾದ್ ಆಗ್ರಹಿಸಿದರು.

ಸಮಾಜಿಕ ಹೋರಾಟಗಾರ ಅಣ್ಣಾ ಹಜಾರೆ
ಕೇಂದ್ರ ಸರ್ಕಾರ ಈ ಹಗರಣದ ಬಗ್ಗೆ ಪುರಾವೆಗಳನ್ನು ಹೊಂದಿದ್ದರೇ ಅವುಗಳನ್ನು ಉನ್ನತ ನ್ಯಾಯಾಲಯಕ್ಕೆ ಹೋಗಿ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಪ್ರತಿಕ್ರಿಯಿಸಿದರು.

ಮಾಜಿ ಕೇಂದ್ರ ಸಚಿವ ಶಶಿತರೂರ್
ವಿಶೇಷ ಸಿಬಿಐ ನ್ಯಾಯಾಲಯದ ತೀರ್ಪುನ್ನು ಒಪ್ಪುತ್ತೇವೆ. ಈ ತೀರ್ಪು ಸತ್ಯಕ್ಕೆ ಜಯ ಎಂದು ಕೇಂದ್ರ ಮಾಜಿ ಸಚಿವ ಹಾಗೂ ಸಂಸದ ಶಶಿತರೂರ್ ಅಭಿಪ್ರಾಯಪಟ್ಟರು.

ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ
ವಿಶೇಷ ಸಿಬಿಐ ನ್ಯಾಯಾಲಯದ ತೀರ್ಪು ಒಪ್ಪುತ್ತೇನೆ.ಸತ್ಯಕ್ಕೆ ಜಯ ಸಿಕ್ಕಿದೆ ಎಂದು ಮಾಜಿ ಕೇಂದ್ರ್ ಸಚಿವ ಪಿ. ಚಿದಂಬರಂ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ
ಕಾಂಗ್ರೆಸ್ ಮುಖಂಡರು ಈ ತೀರ್ಪನ್ನು ಕೆಲವು ವಿಧದ ಗೌರವಾರ್ಥವಾಗಿ ಪರಿಗಣಿಸಿದ್ದಾರೆ. ಮತ್ತು ಅದು ಒಂದು ಪ್ರಾಮಾಣಿಕ ನೀತಿ ಎಂದು ಪ್ರಮಾಣೀಕರಣವನ್ನು ನೀಡುತ್ತಿದೆ.ತೀರ್ಪು ಕಾಂಗ್ರೆಸ್ ಗೆ ನೀಡಿದ ಸರ್ಟಿಫಿಕೇಟ್ ಅಲ್ಲ. ಸ್ಪೆಕ್ಟ್ರಂ ಹಂಚಿಕೆ ಮಾಡಿದ್ದ ನೀತಿ, ನಿಯಮಗಳು ಸರಿ ಇಲ್ಲ. ಮೇಲ್ಮನವಿ ಸಲ್ಲಿಸುವ ಬಗ್ಗೆ ತನಿಖಾ ತಂಡಗಳು ನಿರ್ಧರಿಸಲಿವೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಡಿಎಂಕೆ ಮುಖ್ಯಸ್ಥ ಕರುಣಾನಿಧಿ
ಇದು ಅನೀತಿಗಾದ ಸೋಲು, ನೀತಿ ನ್ಯಾಯದ ಗೆಲುವು ಎಂದು ಈ ತೀರ್ಪಿನ ಬಗ್ಗೆ ಡಿಎಂಕೆ ಮುಖ್ಯಸ್ಥ ಕರುಣಾನಿಧಿ ಪತ್ರದ ಮೂಲಕ ಅಭಿಪ್ರಾಯ ವ್ಯಕ್ತಪಡಿಸಿದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications