ವಾಲ್ಮೀಕಿ ಜಯಂತಿ: ಟ್ವಿಟ್ಟರ್ ನಲ್ಲಿ ಶುಭಹಾರೈಸಿದ ಗಣ್ಯರು
ರತ್ನಾಕರನೆಂಬ ದರೋಡೆಕೋರನಿಗೆ ನಾರದರಿಂದ ಜ್ಞಾನೋದಯವಾಗಿ ನಂತರ ವಾಲ್ಮೀಕಯಾಗಿ ಬದಲಾದ ಕತೆ ಜನಜನಿತ. ಮಹಾಕವಿ ವಾಲ್ಮೀಕಿ ನಂತರದಲ್ಲಿ ರಾಮಾಯಣವೆಂಬ ಸಾರ್ವಕಾಲಿಕ ಮಹಾಗ್ರಂಥವನ್ನು ಬರೆದು ಮಹರ್ಷಿಯಾದರು.
ನಾರದರ ಮಾತಿನಂತೆ ರಾಮನಾಮಸ್ಮರಣೆ ಮಾಡುತ್ತ ಬಹುವರ್ಷ ಜಪ ಮಾಡಿದ್ದರಿಂದ ಅವರ ಸುತ್ತ ಹುತ್ತ ಬೆಳೆದು, ಸಂಸ್ಕೃತದ ವಲ್ಮೀಕ(ಹುತ್ತ)ವೇ ವಾಲ್ಮೀಕಿ ಎಂಬ ಹೆಸರನ್ನು ನೀಡಿತು ಎಂಬ ಮಾತೂ ಪ್ರಚಲಿತವಾಗಿದೆ.
ಇಂದು(ಅ.5) ವಾಲ್ಮೀಕಿ ಜಯಂತಿ. ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ದೇಶದ ಹಲವು ಗಣ್ಯರು ಮಹರ್ಷಿ ವಾಲ್ಮೀಕಿ ಜಯಂತಿಗೆ ಶುಭಕೋರಿದ್ದಾರೆ. ಅತ್ಯುನ್ನತ ಮಹಾಕಾವ್ಯ ನೀಡಿದ ಮಹಾನ್ ಕವಿಗೆ ನಮನಸಲ್ಲಿಸಿದ್ದಾರೆ.
|
ತಲೆಮಾರುಗಳಿಗೆ ಮಾರ್ಗದರ್ಶಿ
ವಾಲ್ಮೀಕಿ ಜಯಂತಿಯ ಶುಭಾಶಯಗಳು. ಅವರೊಬ್ಬ ಮಹಾನ್ ಋಷಿ ಮತ್ತು ಪರಿಣಿತ ಸಾಹಿತಿ. ಅವರ ಆದರ್ಶಶಗಳು ಮತ್ತು ಕೆಲಸಗಳು ಹಲವು ತಲೆಮಾರುಗಳಿಗೆ ಮಾರ್ಗದರ್ಶಿಯಾಗಬಲ್ಲದು ಎಂದು ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮಾಡಿದ್ದಾರೆ.
|
ಶುಭಾಶಯಗಳು
ನಾಡಿನ ಸಮಸ್ತ ಜನತೆಗೆ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವದ ಶುಭಾಶಯಗಳು. ಈ ಶುಭ ದಿನದಂದು ಮಹರ್ಷಿ ವಾಲ್ಮೀಕಿಯವರ ಪುತ್ಥಳಿ ಅನಾವರಣ ಮಾಡಲಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
|
ತಲೆಬಾಗಿ ವಂದಿಸುವೆ
ರಾಮಾಯಣದ ಸೃಷ್ಟಿಕರ್ತ ಮಹರ್ಷಿ ವಾಲ್ಮೀಕಿ ಅವರಿಗೆ ನಾನು ತಲೆಬಾಗಿ ವಂದಿಸುತ್ತೇನೆ. ದೇವರ ಕಾರ್ಯದಲ್ಲೇ ಸಾರ್ಥಕತೆ ಹುಡುಕಿದ ಅವರು ಮಾನವೀಯತೆಯ ದಾರಿದೀಪವೂ ಹೌದು ಎಂದು ಬಳ್ಳಾರಿ ಸಂಸದ ಶ್ರೀರಾಮುಲು ಹೇಳಿದ್ದಾರೆ.
|
ಅವರ ಆದರ್ಶ ಪಾಲಿಸೋಣ
ವಾಲ್ಮೀಕಿ ಜಯಂತಿಯ ಶುಭಾಶಯಗಳು. ಈ ಸಂಭ್ರಮದ ದಿನದಂದು ಮಹಾನ್ ಋಷಿಯ ಆದರ್ಶಗಳನ್ನು ಅನುಸರಿಸುವ ಸಂಕಲ್ಪ ಮಾಡೋಣ ಎಂದು ಶಿರೋಮಣಿ ಸಕಾಲಿ ದಳದ ಅಧ್ಯಕ್ಷ ಸುಖ್ಬಿರ್ ಸಿಂಗ್ ಬಾದಲ್ ಅಭಿಪ್ರಾಯಪಟ್ಟಿದ್ದಾರೆ.
-
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ












Click it and Unblock the Notifications