ವಾಲ್ಮೀಕಿ ಜಯಂತಿ: ಟ್ವಿಟ್ಟರ್ ನಲ್ಲಿ ಶುಭಹಾರೈಸಿದ ಗಣ್ಯರು
ರತ್ನಾಕರನೆಂಬ ದರೋಡೆಕೋರನಿಗೆ ನಾರದರಿಂದ ಜ್ಞಾನೋದಯವಾಗಿ ನಂತರ ವಾಲ್ಮೀಕಯಾಗಿ ಬದಲಾದ ಕತೆ ಜನಜನಿತ. ಮಹಾಕವಿ ವಾಲ್ಮೀಕಿ ನಂತರದಲ್ಲಿ ರಾಮಾಯಣವೆಂಬ ಸಾರ್ವಕಾಲಿಕ ಮಹಾಗ್ರಂಥವನ್ನು ಬರೆದು ಮಹರ್ಷಿಯಾದರು.
ನಾರದರ ಮಾತಿನಂತೆ ರಾಮನಾಮಸ್ಮರಣೆ ಮಾಡುತ್ತ ಬಹುವರ್ಷ ಜಪ ಮಾಡಿದ್ದರಿಂದ ಅವರ ಸುತ್ತ ಹುತ್ತ ಬೆಳೆದು, ಸಂಸ್ಕೃತದ ವಲ್ಮೀಕ(ಹುತ್ತ)ವೇ ವಾಲ್ಮೀಕಿ ಎಂಬ ಹೆಸರನ್ನು ನೀಡಿತು ಎಂಬ ಮಾತೂ ಪ್ರಚಲಿತವಾಗಿದೆ.
ಇಂದು(ಅ.5) ವಾಲ್ಮೀಕಿ ಜಯಂತಿ. ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ದೇಶದ ಹಲವು ಗಣ್ಯರು ಮಹರ್ಷಿ ವಾಲ್ಮೀಕಿ ಜಯಂತಿಗೆ ಶುಭಕೋರಿದ್ದಾರೆ. ಅತ್ಯುನ್ನತ ಮಹಾಕಾವ್ಯ ನೀಡಿದ ಮಹಾನ್ ಕವಿಗೆ ನಮನಸಲ್ಲಿಸಿದ್ದಾರೆ.
|
ತಲೆಮಾರುಗಳಿಗೆ ಮಾರ್ಗದರ್ಶಿ
ವಾಲ್ಮೀಕಿ ಜಯಂತಿಯ ಶುಭಾಶಯಗಳು. ಅವರೊಬ್ಬ ಮಹಾನ್ ಋಷಿ ಮತ್ತು ಪರಿಣಿತ ಸಾಹಿತಿ. ಅವರ ಆದರ್ಶಶಗಳು ಮತ್ತು ಕೆಲಸಗಳು ಹಲವು ತಲೆಮಾರುಗಳಿಗೆ ಮಾರ್ಗದರ್ಶಿಯಾಗಬಲ್ಲದು ಎಂದು ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮಾಡಿದ್ದಾರೆ.
|
ಶುಭಾಶಯಗಳು
ನಾಡಿನ ಸಮಸ್ತ ಜನತೆಗೆ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವದ ಶುಭಾಶಯಗಳು. ಈ ಶುಭ ದಿನದಂದು ಮಹರ್ಷಿ ವಾಲ್ಮೀಕಿಯವರ ಪುತ್ಥಳಿ ಅನಾವರಣ ಮಾಡಲಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
|
ತಲೆಬಾಗಿ ವಂದಿಸುವೆ
ರಾಮಾಯಣದ ಸೃಷ್ಟಿಕರ್ತ ಮಹರ್ಷಿ ವಾಲ್ಮೀಕಿ ಅವರಿಗೆ ನಾನು ತಲೆಬಾಗಿ ವಂದಿಸುತ್ತೇನೆ. ದೇವರ ಕಾರ್ಯದಲ್ಲೇ ಸಾರ್ಥಕತೆ ಹುಡುಕಿದ ಅವರು ಮಾನವೀಯತೆಯ ದಾರಿದೀಪವೂ ಹೌದು ಎಂದು ಬಳ್ಳಾರಿ ಸಂಸದ ಶ್ರೀರಾಮುಲು ಹೇಳಿದ್ದಾರೆ.
|
ಅವರ ಆದರ್ಶ ಪಾಲಿಸೋಣ
ವಾಲ್ಮೀಕಿ ಜಯಂತಿಯ ಶುಭಾಶಯಗಳು. ಈ ಸಂಭ್ರಮದ ದಿನದಂದು ಮಹಾನ್ ಋಷಿಯ ಆದರ್ಶಗಳನ್ನು ಅನುಸರಿಸುವ ಸಂಕಲ್ಪ ಮಾಡೋಣ ಎಂದು ಶಿರೋಮಣಿ ಸಕಾಲಿ ದಳದ ಅಧ್ಯಕ್ಷ ಸುಖ್ಬಿರ್ ಸಿಂಗ್ ಬಾದಲ್ ಅಭಿಪ್ರಾಯಪಟ್ಟಿದ್ದಾರೆ.
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ












Click it and Unblock the Notifications