ಸಿಆರ್ ಪಿಎಫ್ ಮುಖ್ಯಸ್ಥರ ನೇಮಕ ಸರಕಾರದ ಆದ್ಯತೆ ಆಗಬೇಕು ಏಕೆ?
ಎರಡು ತಿಂಗಳಿಂದ ಸಿಆರ್ ಪಿಎಫ್ ಗೆ ಮುಖ್ಯಸ್ಥರು ಇಲ್ಲದಂತಾಗಿದೆ. ಈ ಅವಧಿಯಲ್ಲಿ ಎರಡು ಪ್ರಮುಖ ದಾಳಿಗಳು ಆಗಿವೆ. ಸರಕಾರ ಕೂಡಲೇ ಸಿಆರ್ ಪಿಎಫ್ ಗೆ ತುರ್ತಾಗಿ ಮುಖ್ಯಸ್ಥರ ನೇಮಕ ಮಾಡಬೇಕಾಗಿದೆ
ಬೆಂಗಳೂರು, ಏಪ್ರಿಲ್ 25: ಸಿಆರ್ ಪಿಎಫ್ ನ ಇಪ್ಪತ್ತಾರು ಮಂದಿ ನಕ್ಸಲರ ದಾಳಿಯಿಂದ ಛತ್ತೀಸ್ ಗಢದಲ್ಲಿ ಹುತಾತ್ಮರಾಗಿದ್ದಾರೆ. ಆದರೆ ಸಿಆರ್ ಪಿಎಫ್ ಗೆ ಮುಖ್ಯಸ್ಥರೇ ಇಲ್ಲದೆ ಎರಡು ತಿಂಗಳು ಕಳೆದಿದ್ದು, ಈ ಬಗ್ಗೆ ಸರಕಾರ ತುಟಿ ಬಿಚ್ಚಿಲ್ಲ. ಗೃಹ ಸಚಿವಾಲಯದ ಮೂಲದ ಪ್ರಕಾರ ಹೊಸ ಡೈರೆಕ್ಟರ್ ಜನರಲ್ (ಡಿಜಿ) ನೇಮಕ ಶೀಘ್ರದಲ್ಲೇ ಆಗಲಿದೆ.
ಆದರೆ, ಸಿಆರ್ ಪಿಎಫ್ ಅಧಿಕಾರಿಗಳೇ ಹೇಳುವ ಪ್ರಕಾರ ನೇಮಕದ ಬಗ್ಗೆ ಯಾವುದೇ ಅಧಿಕೃತ ಸುದ್ದಿ ಇಲ್ಲ. ಮುಖ್ಯಸ್ಥರೇ ಇಲ್ಲದ ಈ ಅವಧಿಯಲ್ಲಿ ಸಿಆರ್ ಪಿಎಫ್ ಮೇಲೆ ಎರಡು ಪ್ರಮುಖ ದಾಳಿಗಳಾಗಿವೆ. ಇವುಗಳಲ್ಲಿ ನಲವತ್ತರಷ್ಟು ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದಾರೆ.[ಛತ್ತೀಸ್ ಗಢ ನಕ್ಸಲರ ದಾಳಿ, ಗುರುತೇ ಸಿಗದಂತಾಗಿದ್ದ ಯೋಧರ ದೇಹ]

ಕೆ ದುರ್ಗಾಪ್ರಸಾದ್ ಸಿಆರ್ ಪಿಎಫ್ ಮುಖ್ಯಸ್ಥ ಹುದ್ದೆಯಿಂದ ನಿವೃತ್ತರಾದ ನಂತರ ಗೃಹ ಸಚಿವಾಲಯವು ಸುದೀಪ್ ಲಕ್ಟಕಿ ಅವರಿಗೆ ಹೆಚ್ಚುವರಿ ಹೊಣೆ ಹೊರಿಸಿತು. ಸದ್ಯಕ್ಕೆ ಹೊಸ ಮುಖ್ಯಸ್ಥರ ಆಯ್ಕೆಗೆ ಮುಂದಾಗಿದೆ. ಒಂದು ಪಟ್ಟಿಯನ್ನೇನೋ ಸಿದ್ಧಪಡಿಸಿದರೂ ಯಾವುದೇ ಅಂತಿಮ ಆಯ್ಕೆ ಆಗಿಲ್ಲ.[ಅಪನಗದೀಕರಣದಿಂದ ನಕ್ಸಲರಿಗೆ ಸಮಸ್ಯೆಯಾಗಿದೆಯಾ? ಖಂಡಿತಾ ಹಾಗನಿಸಲ್ಲ]
ಮುಖ್ಯಸ್ಥರಿಲ್ಲದ ಸಿಆರ್ ಪಿಎಫ್ ಮೇಲೆ ತೀರಾ ಗಂಭೀರ ದಾಳಿಗಳಾಗಿವೆ. ದೈನಂದಿನ ವ್ಯವಹಾರಗಳಾನ್ನು ಆಯಾ ಬೆಟಾಲಿಯನ್ ಮುಖ್ಯಸ್ಥರು ನೋಡಿಕೊಳ್ಳುತ್ತಿದ್ದಾರೆ. ಆದರೆ ನಿರ್ಧಾರದ ವಿಷಯ ಬಂದಾಗ ಸಮಸ್ಯೆ ಎದುರಾಗುತ್ತದೆ. ಪೂರ್ಣಕಾಲಿಕ ಮುಖ್ಯಸ್ಥರು ಮಾತ್ರ ಮುಖ್ಯವಾಗಿ ನೀತಿ ನಿರೂಪಣೆ ವಿಚಾರವಾಗಿ ನಿರ್ಧಾರ ಮಾಡಲು ಸಾಧ್ಯ. ಮತ್ತು ಇಂಥ ಸವಾಲಿನ ಸನ್ನಿವೇಶದಲ್ಲಿ ಸಹಾಯ ಮಾಡಲು ಸಾಧ್ಯ
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications