ಸನ್ನಿಯನ್ನೂ ಮಾಧುರಿ, ಶ್ರೀದೇವಿಯವರಂತೆ ನೋಡಿ: ಹಾರ್ದಿಕ್ ಪಟೇಲ್!
ಇಂದೋರ್, ಜೂನ್ 11: "ವಯಸ್ಕ ಚಿತ್ರಗಳ ಮಾಜಿ ನಟಿ ಸನ್ನಿ ಲಿಯೋನ್ ಅವರನ್ನು ನಾವ್ಯಾಕೆ ಶ್ರೀದೇವಿ ಅಥವಾ ಮಾಧುರಿ ದೀಕ್ಷಿತ್ ರನ್ನು ನೋದಿದಂತೆ ನೋಡುತ್ತಿಲ್ಲ?" ಎಂದು ಕೇಳುವ ಮೂಲಕ ಪಾತೀದಾರ್ ಮುಖಂಡ ಹಾರ್ದಿಕ್ ಪಟೇಲ್ ಹೊಸ ವಿವಾದಕ್ಕೆ ಮುನ್ನುಡಿ ಬರೆದಿದ್ದಾರೆ.
ಮಧ್ಯಪ್ರದೇಶದ ಇಂದೋರ್ ನಲ್ಲಿ ಪತ್ರಿಗಾಗೋಷ್ಠಿಯೊಂದರಲ್ಲಿ ಮಾತನಾಡುತ್ತಿದ್ದ ಅವರು ಸನ್ನಿ ಲಿಯೋನ್ ಬೆಂಬಲಕ್ಕೆ ನಿಂತಿದ್ದು ವಿಶೇಷವಾಗಿತ್ತು.
ಸನ್ನಿ ಲಿಯೋನ್ ತಮ್ಮ ಹಳೆಯ ಬದುಕನ್ನು ಬಿಟ್ಟು, ಇದೀಗ ಬಾಲಿವುಡ್ ನಟಿಯಾಗಿ ತಮ್ಮ ವ್ಯಕ್ತಿತ್ವವನ್ನು ಬದಲಿಸಿಕೊಂಡಿದ್ದಾರೆ. ಆದರೆ ನಾವು ಅವರನ್ನು ಇಂದಿಗೂ ಒಬ್ಬ ವಯಸ್ಕ ಚಿತ್ರಗಳ ನಟಿ ಎಂಬಂತೆ ನೋಡುವುದು ಸರಿಯೇ? ಎಂದು ಅವರು ಪ್ರಶ್ನಿಸಿದ್ದಾರೆ.

ಸನ್ನಿ ಲಿಯೋನ್ ಅವರನ್ನು ಅವರ ಹಳೆಯ ವ್ಯಕ್ತಿತ್ವದಲ್ಲೇ ನೋಡುವುದು ನಮ್ಮ ಮನಸ್ಥಿತಿಯಾದರೆ ಈ ದೇಶ ಎಂದಿಗೂ ಬದಲಾಗುವುದಿಲ್ಲ ಎಂದು ಅವರು ಹೇಳಿದ್ದಾರೆ. ಇತ್ತೀಚೆಗಷ್ಟೇ ಬಿಟ್ ಕಾಯ್ನ್ ಹಗರಣದಲ್ಲಿ ಸನ್ನಿ ಲಿಯೋನ್ ಹೆಸರು ಕೇಳಿಬಂದಿದ್ದನ್ನು ಇಲ್ಲಿ ಸ್ಮರಿಸಬಹುದು.
ಮಧ್ಯಪ್ರದೇಶದಲ್ಲಿ ಈ ವರ್ಷ ನಡೆಯಲಿರುವ ಚುನಾವಣೆಯ ಹಿನ್ನೆಲೆಯಲ್ಲಿ 'ಯಾತ್ರೆ'ಯೊಂದನ್ನು ನಡೆಸಲು ಉದ್ದೇಶಿಸಿರುವ ಪಟೇಲ್, ಈ ಕುರಿತು ಇಂದೋರ್ ನಲ್ಲಿ ಘೋಷಣೆ ಮಾಡಿದರು.
ಬಿಜೆಪಿಗೆ ಅಧಿಕಾರದ ದುರಾಸೆ:
ಇದೇ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಹರಿಯಾಯ್ದ ಅವರು, ಬಿಜೆಪಿಗೆ ಅಧಿಕಾರದ ದುರಾಸೆ ಇದೆ. ಅಕಸ್ಮಾತ್ 1019 ರಲ್ಲಿಯೂ ನರೇಂದ್ರ ಮೋದಿಯವರೇ ಪ್ರಧಾನಿಯಾದರೆ ಈ ದೇಶದಲ್ಲಿ ಮುಂದೆ ಚುನಾವಣೆಗಳೇ ನಡೆಯುವುದಿಲ್ಲವೇನೋ ಎಂದರು.
ಕರ್ನಾಟಕದಲ್ಲಿ ಸರ್ಕಾರ ರಚನೆಗೆ ಬಿಜೆಪಿ ಮುಖಂಡ ಬಿ ಎಸ್ ಯಡಿಯೂರಪ್ಪ ಅವರಿಗೆ ರಾಜ್ಯಪಾಲರು ಕಾಲಾವಕಾಶ ನೀಡಿದ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಇದು ದೇಶದ ಸಂವಿಧಾನ ವ್ಯವಸ್ಥೆಗೆ ಧಕ್ಕೆಯಾಗುತ್ತಿದೆ ಎಂಬುದಕ್ಕೆ ಸಾಕ್ಷಿ ಎಂದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications