ಏರ್ ಕಂಡೀಷನರ್, ದೊಡ್ಡ ಕಾರು, ನಗರ ನಕ್ಸಲರು, ಕಾಂಗ್ರೆಸ್ ಬೆಂಬಲದ ಬಗ್ಗೆ ಮೋದಿ ಟೀಕೆ
"ನಗರ ನಕ್ಸಲರು ಏರ್ ಕಂಡೀಷನರ್ ಮಧ್ಯೆ ಇರುತ್ತಾರೆ. ದೊಡ್ಡ ಕಾರುಗಳಲ್ಲಿ ಸುತ್ತಾಡುತ್ತಾರೆ. ಅವರ ಮಕ್ಕಳು ವಿದೇಶಗಳಲ್ಲಿ ವ್ಯಾಸಂಗ ಮಾಡುತ್ತಾರೆ. ಆದರೆ ಅವರು ನಮ್ಮ ಬಡ ಆದಿವಾಸಿ ಯುವಕರ ಜೀವನವನ್ನು ರಿಮೋಟ್ ಕಂಟೋಲ್ ಮೂಲಕ ಹಾಳು ಮಾಡ್ತಾರೆ. ಈ ನಗರ ಮಾವೋವಾದಿಗಳನ್ನು ಕಾಂಗ್ರೆಸ್ ಏಕೆ ಬೆಂಬಲಿಸುತ್ತಿದೆ?" ಎಂದು ನರೇಂದ್ರ ಮೋದಿ ಶುಕ್ರವಾರ ಟೀಕಾ ಪ್ರಹಾರ ನಡೆಸಿದರು.
ಛತ್ತೀಸ್ ಗಢದ ವಿಧಾನಸಭಾ ಚುನಾವಣೆ ಪ್ರಚಾರ ಸಲುವಾಗಿ ಜಗ್ದಲ್ ಪುರ್ ನಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಆಡಳಿತದಲ್ಲಿ ಅಭಿವೃದ್ಧಿ ಹಾಗೂ ಪ್ರಗತಿ ಮಾಡುವುದಾಗಿ ಭರವಸೆ ನೀಡಿದರು. ನಮಗೆ ಮಾವೋಗಳು ಇರುವ ಪ್ರದೇಶವನ್ನೂ ಅಭಿವೃದ್ಧಿ ಮಾಡುವ ಧೈರ್ಯವಿದೆ ಎಂದರು.
ಛತ್ತೀಸ್ ಗಢ ರಾಜ್ಯ ರಚನೆಯಾಗಿ ಹದಿನೆಂಟು ವರ್ಷ ತುಂಬುತ್ತಿದೆ. ರಾಜ್ಯದ ಪ್ರಗತಿ ಹಾಗೂ ಅಭಿವೃದ್ಧಿಗಾಗಿ ಹೊಸ ಬಜೆಟ್ ಅಗತ್ಯವಿದೆ. ಛತ್ತೀಸ್ ಗಢವನ್ನು ಶ್ರೀಮಂತ ರಾಜ್ಯ ಎಂದು ಕರೆಯುವ ದಿನಗಳು ಬರಲಿವೆ. ನಮ್ಮ ಮೂಲ ಮಂತ್ರವೇ 'ಸಬ್ ಕಾ ಸಾಥ್ ಸಬ್ ಕಾ ವಿಕಾಸ್'. ಲಿಂಗ ಮತ್ತು ಜಾತಿ ಆಧಾರದಲ್ಲಿ ನಾವು ಯಾರನ್ನೂ ಭೇದ ಮಾಡುವುದಿಲ್ಲ ಎಂದು ಮೋದಿ ಹೇಳಿದರು.

ಬಡವರು, ದಲಿತರು, ಬುಡಕಟ್ಟು ಜನಾಂಗದವರನ್ನು ಕಾಂಗ್ರೆಸ್ ಯಾವಾಗಲೂ ಮತಬ್ಯಾಂಕ್ ನಂತೆ ನೋಡುತ್ತದೆ. ಆದರೆ ಅಟಲ್ ಬಿಹಾರಿ ವಾಜಪೇಯಿ ಆ ಜನರ ಹಿತದ ಬಗ್ಗೆ ಆಲೋಚಿಸಿದರು. ಅದಕ್ಕಾಗಿ ಬುಡುಕಟ್ಟು ಜನಾಂಗದ ಕ್ಷೇಮವನ್ನು ನೋಡಿಕೊಳ್ಳಲು ಸಚಿವಾಲಯವನ್ನೇ ಸೃಷ್ಟಿಸಿದರು ಎಂದರು.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ












Click it and Unblock the Notifications