Cotton Candy: ಮಕ್ಕಳ ಮೆಚ್ಚಿನ ಬಾಂಬೆ ಮಿಠಾಯಿ ಮಾರಾಟ ನಿಷೇಧ: ಕಾರಣವೇನು?
ಕಡಿಮೆ ವೆಚ್ಚದ ಎಲ್ಲರ ಮೆಚ್ಚಿನ ತಿನಿಸು ಬಾಂಬೆ ಮಿಠಾಯಿ. ಕಳೆದ ಇಪ್ಪತ್ತು ವರ್ಷಗಳಿಂದ ಹೆಚ್ಚಾಗಿ ಮುನ್ನೆಲೆಗೆ ಬಂದ ಈ ತಿಸಿಸು ಮಕ್ಕಳಿಂದ ದೊಡ್ಡವರವರೆಗೂ ಎಲ್ಲರಿಗೂ ಅಚ್ಚುಮೆಚ್ಚಾಗಿತ್ತು. ನೋಡಲು ಆಕರ್ಷಕವಾಗಿದ್ದು, ದರವೂ ಕಡಿಮೆ ಇರುವುದರಿಂದ ಎಲ್ಲರ ಕೈಗೆಟುಕುವ ರುಚಿಯಾದ ಸಿಹಿ ತಿಂಡಿಗಳಲ್ಲಿ ಬಾಂಬೆ ಮಿಠಾಯಿ ಪ್ರಮುಖವಾಗಿತ್ತು. ಆದರೆ ಇದೀಗ ಮಕ್ಕಳ ಮೆಚ್ಚಿನ ಬಾಂಬೆ ಮಿಠಾಯಿ ಮಾರಾಟವನ್ನು ನಿಷೇಧಿಸಲಾಗುತ್ತಿದೆ.
ಹೌದು, ಬಾಂಬೆ ಮಿಠಾಯಿ ತಯಾರಿಕೆಯಲ್ಲಿ ವಿಷಕಾರಿ ರಾಸಾಯನಿಕಗಳ ಬಳಕೆಯನ್ನು ಆಹಾರ ಅಧಿಕಾರಿಗಳು ಪತ್ತೆಹಚ್ಚಿದ್ದು, ಪುದುಚೇರಿ ಸರ್ಕಾರವು ಕಳೆದ ವಾರದಿಂದ ಬಾಂಬೆ ಮಿಠಾಯಿ ಮಾರಾಟವನ್ನು ನಿಷೇಧಿಸಿದೆ. ಸದ್ಯ ಪುದುಚೇರಿಯಲ್ಲಿ ಬಾಂಬೆ ಮಿಠಾಯಿ ಮಾರಾಟವನ್ನು ನಿಷೇಧಿಸಲಾಗಿದೆ.

ಬಾಂಬೆ ಮಿಠಾಯಿಯಲ್ಲಿ ಆರೋಗ್ಯಕ್ಕೆ ಹಾನಿಕರವಾದ ರೊಡಮೈನ್-ಬಿ ಎಂಬ ವಿಷಕಾರಿ ಅಂಶ ಪತ್ತೆಯಾಗಿರುವುದಾಗಿ ಆಹಾರ ಸುರಕ್ಷತಾ ಅಧಿಕಾರಿಗಳು ವರದಿ ನೀಡಿದ್ದಾರೆ. ಹೀಗಾಗಿ ಪುದುಚೇರಿಯಾದ್ಯಂತ ಇನ್ನು ಬಾಂಬೆ ಮಿಠಾಯಿ ಮಾರಾಟ ನಿಷೇಧಿಸಿರುವುದಾಗಿ ಲೆಫ್ಟಿನೆಂಟ್ ಗವರ್ನರ್ ತಮಿಳಿಸೈ ಸೌಂದರರಾಜನ್ ತಿಳಿಸಿದ್ದಾರೆ.
ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ತಮಿಳಿಸೈ ಸೌಂದರರಾಜನ್ ಅವರು ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಮಕ್ಕಳಿಗೆ ಕಂಡಕಂಡಲ್ಲಿ ಕಾಟನ್ ಕ್ಯಾಂಡಿ ಕೊಡಿಸದಂತೆ ಹಾಗೂ ಖರೀದಿಸದಂತೆ ಜನರಿಗೆ ವಿನಂತಿಸಿಕೊಂಡಿದ್ದಾರೆ. ಏಕೆಂದರೆ ಅದರಲ್ಲಿ ಇರುವ ವಿಷಕಾರಿ ವಸ್ತುಗಳು ಮಕ್ಕಳ ದೈಹಿಕ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು ಎಂದು ಅವರು ತಿಳಿಸಿದ್ದಾರೆ.
ಬಾಂಬೆ ಮಿಠಾಯಿ ತಯಾರಿಕೆಯಲ್ಲಿ ಬಳಸುವ ರೋಡಮೈನ್ ಬಿ ಮಾನವರ ದೇಹಕ್ಕೆ ವಿಷಕಾರಿಯಾಗುತ್ತದೆ. ಇದನ್ನು ಸೇವಿಸಿದರೆ ಜೀವಕೋಶಗಳು ಮತ್ತು ಅಂಗಾಂಶಗಳ ಮೇಲೆ ಆಕ್ಸಿಡೇಟಿವ್ ಒತ್ತಡವನ್ನು ಉಂಟುಮಾಡಬಹುದು. ಇದರ ಸೇವನೆ ಕಾಲಾನಂತರದಲ್ಲಿ ಯಕೃತ್ತು ಹಾನಿ, ಗೆಡ್ಡೆಗಳು ಮತ್ತು ಮಾರಣಾಂತಿಕ ಕಾಯಿಲೆ ಕ್ಯಾನ್ಸರ್ಗೆ ಕಾರಣವಾಗುತ್ತದೆ ಎಂದು ವರದಿಯಾಗಿದೆ.
ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ತಮಿಳಿಸೈ ಸೌಂದರರಾಜನ್ ಅವರು ತಿಳಿಸಿರುವ ಪ್ರಕಾರ 'ಸದ್ಯ ಕೇಂದ್ರಾಡಳಿತ ಪ್ರದೇಶದಲ್ಲಿ ಮಾರಾಟವಾಗುತ್ತಿದ್ದ ಕಾಟನ್ ಕ್ಯಾಂಡಿಯನ್ನು ಆಹಾರ ಸುರಕ್ಷತಾ ಅಧಿಕಾರಿಗಳು ಪರೀಕ್ಷಿಸಿದಾಗ ರೋಡಮೈನ್-ಬಿ ಎಂಬ ಹಾನಿಕಾರಕ ರಾಸಾಯನಿಕ ಅಂಶ ಕಂಡುಬಂದಿದೆ. ಹೀಗಾಗಿ ಜನರ ಆರೋಗ್ಯದ ದೃಷ್ಟಿಯ ಹಿನ್ನೆಲೆಯಲ್ಲಿ ಕಾಟನ್ ಕ್ಯಾಂಡಿ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.
ಈ ಬಗ್ಗೆ ಇನ್ನೂ ಪರಿಶೀಲನೆ ನಡೆಯಲಿದ್ದು, ಆಹಾರ ಸುರಕ್ಷತಾ ಪ್ರಮಾಣ ಪತ್ರ ಎಷ್ಟು ಬೇಗ ಸಿಗುತ್ತದೋ ಅಷ್ಟು ಬೇಗ ವ್ಯಾಪಾರ ಆರಂಭಿಸಬಹುದು. ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಹೀಗಾಗಿ ಬಣ್ಣದ ಸೇರ್ಪಡೆಗಳನ್ನು ಹೊಂದಿರುವ ಈ ಆಹಾರ ಪದಾರ್ಥಗಳನ್ನು ಮಕ್ಕಳಿಗೆ ನೀಡಬಾರದು' ಎಂದು ತಿಳಿಸಿದ್ದಾರೆ.
-
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Coconut: ರೈತರ ನಿದ್ದೆಗೆಡಿಸಿದ ತೆಂಗಿನ ರೋಗ: ಶೇ.14ರಷ್ಟು ತೋಟಗಳಿಗೆ ಕೀಟಬಾಧೆ; ತಜ್ಞರ ತಂಡ ಪರಿಶೀಲನೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ












Click it and Unblock the Notifications