Cotton Candy: ಮಕ್ಕಳ ಮೆಚ್ಚಿನ ಬಾಂಬೆ ಮಿಠಾಯಿ ಮಾರಾಟ ನಿಷೇಧ: ಕಾರಣವೇನು?
ಕಡಿಮೆ ವೆಚ್ಚದ ಎಲ್ಲರ ಮೆಚ್ಚಿನ ತಿನಿಸು ಬಾಂಬೆ ಮಿಠಾಯಿ. ಕಳೆದ ಇಪ್ಪತ್ತು ವರ್ಷಗಳಿಂದ ಹೆಚ್ಚಾಗಿ ಮುನ್ನೆಲೆಗೆ ಬಂದ ಈ ತಿಸಿಸು ಮಕ್ಕಳಿಂದ ದೊಡ್ಡವರವರೆಗೂ ಎಲ್ಲರಿಗೂ ಅಚ್ಚುಮೆಚ್ಚಾಗಿತ್ತು. ನೋಡಲು ಆಕರ್ಷಕವಾಗಿದ್ದು, ದರವೂ ಕಡಿಮೆ ಇರುವುದರಿಂದ ಎಲ್ಲರ ಕೈಗೆಟುಕುವ ರುಚಿಯಾದ ಸಿಹಿ ತಿಂಡಿಗಳಲ್ಲಿ ಬಾಂಬೆ ಮಿಠಾಯಿ ಪ್ರಮುಖವಾಗಿತ್ತು. ಆದರೆ ಇದೀಗ ಮಕ್ಕಳ ಮೆಚ್ಚಿನ ಬಾಂಬೆ ಮಿಠಾಯಿ ಮಾರಾಟವನ್ನು ನಿಷೇಧಿಸಲಾಗುತ್ತಿದೆ.
ಹೌದು, ಬಾಂಬೆ ಮಿಠಾಯಿ ತಯಾರಿಕೆಯಲ್ಲಿ ವಿಷಕಾರಿ ರಾಸಾಯನಿಕಗಳ ಬಳಕೆಯನ್ನು ಆಹಾರ ಅಧಿಕಾರಿಗಳು ಪತ್ತೆಹಚ್ಚಿದ್ದು, ಪುದುಚೇರಿ ಸರ್ಕಾರವು ಕಳೆದ ವಾರದಿಂದ ಬಾಂಬೆ ಮಿಠಾಯಿ ಮಾರಾಟವನ್ನು ನಿಷೇಧಿಸಿದೆ. ಸದ್ಯ ಪುದುಚೇರಿಯಲ್ಲಿ ಬಾಂಬೆ ಮಿಠಾಯಿ ಮಾರಾಟವನ್ನು ನಿಷೇಧಿಸಲಾಗಿದೆ.

ಬಾಂಬೆ ಮಿಠಾಯಿಯಲ್ಲಿ ಆರೋಗ್ಯಕ್ಕೆ ಹಾನಿಕರವಾದ ರೊಡಮೈನ್-ಬಿ ಎಂಬ ವಿಷಕಾರಿ ಅಂಶ ಪತ್ತೆಯಾಗಿರುವುದಾಗಿ ಆಹಾರ ಸುರಕ್ಷತಾ ಅಧಿಕಾರಿಗಳು ವರದಿ ನೀಡಿದ್ದಾರೆ. ಹೀಗಾಗಿ ಪುದುಚೇರಿಯಾದ್ಯಂತ ಇನ್ನು ಬಾಂಬೆ ಮಿಠಾಯಿ ಮಾರಾಟ ನಿಷೇಧಿಸಿರುವುದಾಗಿ ಲೆಫ್ಟಿನೆಂಟ್ ಗವರ್ನರ್ ತಮಿಳಿಸೈ ಸೌಂದರರಾಜನ್ ತಿಳಿಸಿದ್ದಾರೆ.
ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ತಮಿಳಿಸೈ ಸೌಂದರರಾಜನ್ ಅವರು ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಮಕ್ಕಳಿಗೆ ಕಂಡಕಂಡಲ್ಲಿ ಕಾಟನ್ ಕ್ಯಾಂಡಿ ಕೊಡಿಸದಂತೆ ಹಾಗೂ ಖರೀದಿಸದಂತೆ ಜನರಿಗೆ ವಿನಂತಿಸಿಕೊಂಡಿದ್ದಾರೆ. ಏಕೆಂದರೆ ಅದರಲ್ಲಿ ಇರುವ ವಿಷಕಾರಿ ವಸ್ತುಗಳು ಮಕ್ಕಳ ದೈಹಿಕ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು ಎಂದು ಅವರು ತಿಳಿಸಿದ್ದಾರೆ.
ಬಾಂಬೆ ಮಿಠಾಯಿ ತಯಾರಿಕೆಯಲ್ಲಿ ಬಳಸುವ ರೋಡಮೈನ್ ಬಿ ಮಾನವರ ದೇಹಕ್ಕೆ ವಿಷಕಾರಿಯಾಗುತ್ತದೆ. ಇದನ್ನು ಸೇವಿಸಿದರೆ ಜೀವಕೋಶಗಳು ಮತ್ತು ಅಂಗಾಂಶಗಳ ಮೇಲೆ ಆಕ್ಸಿಡೇಟಿವ್ ಒತ್ತಡವನ್ನು ಉಂಟುಮಾಡಬಹುದು. ಇದರ ಸೇವನೆ ಕಾಲಾನಂತರದಲ್ಲಿ ಯಕೃತ್ತು ಹಾನಿ, ಗೆಡ್ಡೆಗಳು ಮತ್ತು ಮಾರಣಾಂತಿಕ ಕಾಯಿಲೆ ಕ್ಯಾನ್ಸರ್ಗೆ ಕಾರಣವಾಗುತ್ತದೆ ಎಂದು ವರದಿಯಾಗಿದೆ.
ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ತಮಿಳಿಸೈ ಸೌಂದರರಾಜನ್ ಅವರು ತಿಳಿಸಿರುವ ಪ್ರಕಾರ 'ಸದ್ಯ ಕೇಂದ್ರಾಡಳಿತ ಪ್ರದೇಶದಲ್ಲಿ ಮಾರಾಟವಾಗುತ್ತಿದ್ದ ಕಾಟನ್ ಕ್ಯಾಂಡಿಯನ್ನು ಆಹಾರ ಸುರಕ್ಷತಾ ಅಧಿಕಾರಿಗಳು ಪರೀಕ್ಷಿಸಿದಾಗ ರೋಡಮೈನ್-ಬಿ ಎಂಬ ಹಾನಿಕಾರಕ ರಾಸಾಯನಿಕ ಅಂಶ ಕಂಡುಬಂದಿದೆ. ಹೀಗಾಗಿ ಜನರ ಆರೋಗ್ಯದ ದೃಷ್ಟಿಯ ಹಿನ್ನೆಲೆಯಲ್ಲಿ ಕಾಟನ್ ಕ್ಯಾಂಡಿ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.
ಈ ಬಗ್ಗೆ ಇನ್ನೂ ಪರಿಶೀಲನೆ ನಡೆಯಲಿದ್ದು, ಆಹಾರ ಸುರಕ್ಷತಾ ಪ್ರಮಾಣ ಪತ್ರ ಎಷ್ಟು ಬೇಗ ಸಿಗುತ್ತದೋ ಅಷ್ಟು ಬೇಗ ವ್ಯಾಪಾರ ಆರಂಭಿಸಬಹುದು. ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಹೀಗಾಗಿ ಬಣ್ಣದ ಸೇರ್ಪಡೆಗಳನ್ನು ಹೊಂದಿರುವ ಈ ಆಹಾರ ಪದಾರ್ಥಗಳನ್ನು ಮಕ್ಕಳಿಗೆ ನೀಡಬಾರದು' ಎಂದು ತಿಳಿಸಿದ್ದಾರೆ.
-
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಮುದ್ದೇನಹಳ್ಳಿ ಸತ್ಯಸಾಯಿ ಗ್ರಾಮದಲ್ಲಿ CSR ರಾಷ್ಟ್ರೀಯ ಸಮಾವೇಶ: ವಿಕಸಿತ ಭಾರತ ಚರ್ಚೆ -
War Updates: ಇರಾನ್ಗೆ ಟ್ರಂಪ್ ವಾರ್ನಿಂಗ್: ತೈಲ ಮಾರ್ಗ ಬಂದ್ ಮಾಡಿದರೆ ದೇಶವೇ ಸರ್ವನಾಶ, ಇಂದಿನ ಪ್ರಮುಖಾಂಶಗಳು -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ












Click it and Unblock the Notifications