6 ತಿಂಗಳಲ್ಲಿ 3 ಬಾರಿ ಪ್ರಧಾನಿ ಮೋದಿಯನ್ನು ಭೇಟಿಯಾದ ಆಂಧ್ರ ಸಿಎಂ ಜಗನ್ ಮೋಹನ ರೆಡ್ಡಿ- ಗರಿಗೆದರಿದ ಮೈತ್ರಿ ಚರ್ಚೆ
ನವದೆಹಲಿ, ಜುಲೈ 05: ಆಂಧ್ರಪ್ರದೇಶದ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಬುಧವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಕಳೆದ ಆರು ತಿಂಗಳಲ್ಲಿ ಮೂರನೇ ಬಾರಿಗೆ ಬಿಜೆಪಿ ಉನ್ನತ ನಾಯಕರನ್ನು ಜಗನ್ ಮೋಹನ ರೆಡ್ಡಿ ಭೇಟಿಯಾಗಿರುವುದು ಹಲವು ಊಹಾಪೋಹಗಳಿಗೆ ಕಾರಣವಾಗಿದೆ.
ಕಳೆದ ತಿಂಗಳು ಆಂಧ್ರಪ್ರದೇಶದ ಮಾಜಿ ಸಿಎಂ, ತೆಲುಗು ದೇಶಂ ಪಕ್ಷದ ಚಂದ್ರಬಾಬು ನಾಯ್ಡು ಅವರು ಸಹ ಅಮಿತ್ ಶಾ ಅವರನ್ನು ಭೇಟಿಯಾಗಿ ಮೈತ್ರಿಯ ಬಗ್ಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಈ ಇಬ್ಬರು ನಾಯಕರು ಬಿಜೆಪಿಯೊಂದಿಗೆ ಸಖ್ಯ ಬೆಳೆಸುತ್ತಿರುವ ವಿಚಾರವೀಗ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಮುಂಬರುವ ಲೋಕಸಭಾ ಚುನಾವಣೆಗೂ ಮುನ್ನ ಆಂಧ್ರಪ್ರದೇಶದ ಈ ಎರಡು ಪಕ್ಷಗಳಲ್ಲಿ ಒಂದರ ಜೊತೆ ಬಿಜೆಪಿ ಮೈತ್ರಿ ಹೊಂದಲಿದೆ ಎಂಬ ಅಭಿಪ್ರಾಯವನ್ನು ರಾಜಕೀಯ ತಜ್ಞರು ವ್ಯಕ್ತಪಡಿಸಿದ್ದಾರೆ. ಆದರೆ, ಜಗನ್ ಭೇಟಿಯ ಹಿಂದೆ ಯಾವುದೇ ರಾಜಕೀಯ ಉದ್ದೇಶವಿಲ್ಲವೆಂದು ವರದಿಗಳು ಹೇಳಿವೆ.
ಜಗನ್ ಭೇಟಿಯ ಬಗ್ಗೆ ವರದಿಗಳು ಹೇಳುವುದೇನು?
ಆಂಧ್ರಪ್ರದೇಶದ ಅಭಿವೃದ್ಧಿ ಹಾಗೂ ಯೋಜನೆಗಳ ಅನುಷ್ಠಾನದ ವಿಚಾರವಾಗಿ ಜಗನ್ ಅವರು ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಆಗಿದ್ದಾರೆ ಎನ್ನಲಾಗುತ್ತಿದೆ.
ಪೊಲಾವರಂ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಲು ಹಣವನ್ನು ನೀಡಬೇಕು. ಈ ಯೋಜನೆಗೆ ರಾಜ್ಯ ಸರ್ಕಾರ ಖರ್ಚು ಮಾಡಿದ ಹಣವನ್ನು ತಕ್ಷಣವೇ ಮರುಪಾವತಿಸಬೇಕು. ಇದಕ್ಕಾಗಿ ಸೂಕ್ತ ನೆರವು ನೀಡಬೇಕು ಎಂದು ಪ್ರಧಾನಿಗೆ ಜಗನ್ ಮನವಿ ಮಾಡಿದರು ಎಂದು ವರದಿಯಾಗಿದೆ.

ಯೋಜನಾ ವೆಚ್ಚಕ್ಕೆ ಅನುಮೋದನೆ ನೀಡುವಂತೆ ಜಗನ್ ಕೋರಿದ್ದಾರೆ. ತಾಂತ್ರಿಕ ಸಲಹೆಗಾರರ ಸಮಿತಿಯು ನಿರ್ಧರಿಸಿದಂತೆ 55,548.87 ಕೋಟಿ ರೂಪಾಯಿ ಬಿಡುಗಡೆ ಮಾಡಬೇಕೆಂದು ಅವರು ಮನವಿ ಮಾಡಿದ್ದಾರೆ ಎನ್ನಲಾಗಿದೆ.
ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಫಲಾನುಭವಿಗಳ ಗುರುತನ್ನು ತಕ್ಷಣವೇ ಮರುಪರಿಶೀಲಿಸುವಂತೆ ಮುಖ್ಯಮಂತ್ರಿಗಳು ಕೋರಿದ್ದಾರೆ.
ವಿಶೇಷ ಸ್ಥಾನಮಾನದ ಮೂಲಕ ಕೇಂದ್ರದಿಂದ ಕೈಗಾರಿಕಾ ವಲಯದ ಬೆಳವಣಿಗೆ, ಉದ್ಯೋಗ ಸೃಷ್ಟಿ, ಅನುದಾನ ಮತ್ತು ತೆರಿಗೆ ರಿಯಾಯ್ತಿಗಳ ಪ್ರಯೋಜನಗಳ ಬಗ್ಗೆ ಅವರು ಪ್ರಧಾನಿಗಳೊಂದಿಗೆ ಜಗನ್ ಮೋಹನ ರೆಡ್ಡಿ ಮಾತನಾಡಿದ್ದಾರೆ ಎಂದು ವರದಿಗಳು ಹೇಳಿವೆ.
-
Viral Video: ಲಂಡನ್ ರಸ್ತೆಯಲ್ಲಿ ರಾರಾಜಿಸಿದ ಭಾರತದ ಆಟೋ ರಿಕ್ಷಾ: ವಿಡಿಯೋ ನೋಡಿ ದೆಹಲಿ ಎಂದ ನೆಟ್ಟಿಗರು -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ












Click it and Unblock the Notifications