ಪಿಎನ್ ಬಿ ಆರೋಪಿಗಳಿಗೆ ಚಿದಂಬರಂ ನೆರವು : ಬಿಜೆಪಿ ಆರೋಪ
ಬೆಂಗಳೂರು, ಮಾರ್ಚ್ 06: 2014ರ ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದ ಸಂದರ್ಭದಲ್ಲೇ ಅಂದಿನ ಹಣಕಾಸು ಸಚಿವ ಪಿ.ಚಿದಂಬರಂ ಅವರು, ಹಗರಣದಲ್ಲಿ ಸಿಲುಕಿರುವ ಗೀತಾಂಜಲಿ ಜೆಮ್ಸ್ ಸೇರಿದಂತೆ ಏಳು ಖಾಸಗಿ
ಕಂಪನಿಗಳಿಗೆ ಬಂಗಾರ ಆಮದು ಲಾಭಗಳನ್ನು ವಿತರಿಸಿದ್ದರು ಎಂದು ಬಿಜೆಪಿ ಆರೋಪಿಸಿದೆ.
ಬಿಜೆಪಿಯ ಹಿರಿಯ ನಾಯಕ ಹಾಗೂ ಕೇಂದ್ರ ಸಚಿವ ರವಿ ಶಂಕರ್ ಪ್ರಸಾದ್ ಅವರು ಈ ಆರೋಪ ಮಾಡಿದ್ದು, ಪ್ರತಿಪಕ್ಷಗಳ ಸುಳ್ಳು ಹಾಗೂ ವಂಚನೆಗಳನ್ನು ಬಯಲು ಮಾಡುವುದಾಗಿ ಹೇಳಿದ್ದಾರೆ.
2014ರ ಮೇ 16ರಂದು ನರೇಂದ್ರ ಮೋದ ನೇತೃತ್ವದಲ್ಲಿ ಬಿಜೆಪಿ ಜಯಭೇರಿ ಬಾರಿಸುತ್ತಿದ್ದ ಸಮಯದಲ್ಲೇ ಚಿದಂಬರಂ ಅವರು ಏಳು ಖಾಸಗಿ ಉದ್ಯಮಗಳಿಗೆ 80:20 ಬಂಗಾರ ಆಮದು ಯೋಜನೆಯಡಿ ಲಾಭ ನೀಡಿದ್ದರು. ಇದರರ್ಥ ಏನು? ಈ ಬಗ್ಗೆ ಚಿದಂಬರಂ ಹಾಗೂ ಕಾಂಗ್ರೆಸ್ ಮುಖ್ಯಸ್ಥ ರಾಹುಲ್ ಗಾಂಧಿ ಉತ್ತರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದೇನೂ ಭ್ರಷ್ಟಾಚಾರವೇ? ಅಥವಾ ಜುಮ್ಲಾ'ವೇ? (ಒಣ ಮಾತು) ಎಂಬುದನ್ನು ಚಿದಂಬರಂ ಉತ್ತರಿಸಬೇಕು ಎಂದವರು ಲೇವಡಿ ಮಾಡಿದ್ದಾರೆ. ಚಿದಂಬರಂ ಹಲವು ಬಾರಿ ಕೇಂದ್ರ ಸರ್ಕಾರವನ್ನು ಜುಮ್ಲಾ' ಎಂದು ಲೇವಡಿ ಮಾಡಿದ್ದಕ್ಕೆ ಪ್ರಸಾದ್ ತಿರುಗೇಟು ನೀಡಿದಂತಿತ್ತು.
ಚಿದಂಬರಂ ತೆಗೆದುಕೊಂಡ ನಿರ್ಧಾರವನ್ನು ಆರ್.ಬಿ.ಐ. ಕೆಲ ದಿನಗಳ ನಂತರ ಅಂಗೀಕರಿಸಿತ್ತು. ಆನಂತರ ಮೋದಿ ಸರ್ಕಾರ 80:20 ಬಂಗಾರದ ಯೋಜನೆಯನ್ನೇ ರದ್ದುಗೊಳಿಸಿತ್ತು ಎಂದವರು ತಿಳಿಸಿದರು.
ಹಿಂದಿನ ಯುಪಿಎ ಸರ್ಕಾರ ಬ್ಯಾಂಕುಗಳಲ್ಲಿ ಒತ್ತಡಕ್ಕೆ ಸಿಲುಕಿದ್ದ ಆಸ್ತಿಗಳ ವಿವರಗಳನ್ನು ದಾಖಲಿಸಲು ಅವಕಾಶ ನೀಡಿರಲಿಲ್ಲ. ಇದರಿಂದಾಗಿ ಬ್ಯಾಂಕುಗಳು ನೀಡಿದ ಸಾಲದ ಪ್ರಮಾಣ 2008ರಲ್ಲಿ 18.06 ಲಕ್ಷ ಕೋಟಿ ರೂ. ಇದ್ದು, ಆರು ವರ್ಷಗಳಲ್ಲೇ 52.15 ಲಕ್ಷ ಕೋಟಿ ರೂ.ಗಳಿಗೆ ತಲುಪಿತ್ತು ಎಂದು ಹೇಳಿದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications