ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಸುದ್ದಿಗೋಷ್ಠಿ ಕರೆದಿದ್ದು ಏಕೆ?
ನವದೆಹಲಿ, ಜನವರಿ 12 : ಹಿಂದೆಂದೂ ನಡೆಯದಂಥ ವಿದ್ಯಮಾನ ಭಾರತದ ಸರ್ವೋಚ್ಚ ನ್ಯಾಯಾಲಯದ ಅಂಗಳಲ್ಲಿ ಶುಕ್ರವಾರ, ಜನವರಿ 12ರಂದು ನಡೆದಿದೆ. ಸುಪ್ರೀಂ ಕೋರ್ಟ್ ನ ನಾಲ್ವರು ನ್ಯಾಯಮೂರ್ತಿಗಳು ಸುದ್ದಿಗೋಷ್ಠಿ ಕರೆದು ವಿವರಗಳನ್ನು ನೀಡಿದ್ದಾರೆ.
ನ್ಯಾ. ಕುರಿಯನ್ ಜೋಸೆಫ್, ನ್ಯಾ. ಜೆ ಚಲಮೇಶ್ವರ, ನ್ಯಾ. ರಂಜನ್ ಗೊಗೊಯ್ ಮತ್ತು ನ್ಯಾ. ಮದನ್ ಲೋಕೂರ್ ಅವರು ಸುದ್ದಿಗೋಷ್ಠಿ ಕರೆದು, ದೇಶದ ಪ್ರಜಾಪ್ರಭುತ್ವದ ಬಗ್ಗೆ, ನ್ಯಾಯಾಂಗ ಆಡಳಿತ ನಡೆಸುತ್ತಿರುವ ಬಗ್ಗೆ ಕಳಕಳಿ ವ್ಯಕ್ತಪಡಿಸಿದ್ದು, ದೇಶದ ಜನರಲ್ಲಿ ಭಾರೀ ಕುತೂಹಲ ಹುಟ್ಟಿಕೊಂಡಿದೆ.
ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ಹಲವಾರು ಹುಳುಕುಗಳಿವೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಹಿಂದೆ ಕರ್ಣನ್ ನ್ಯಾಯಾಂಗ ವ್ಯವಸ್ಥೆಯ ಮೇಲೆ ಗಂಭೀರ ಆರೋಪಗಳನ್ನು ಮಾಡಿದ್ದರಾದರೂ, ಹೀಗೆ ನಾಲ್ವರು ನ್ಯಾಯಮೂರ್ತಿಗಳು ಒಟ್ಟಿಗೆ ಸೇರಿ ಈರೀತಿ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ ನಿದರ್ಶನಗಳು ಸಿಗುವುದು ದುರ್ಲಭ.

ನಾಲ್ವರು ನ್ಯಾಯಮೂರ್ತಿಗಳು ಒಟ್ಟಿಗೆ ಸೇರಿ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಪತ್ರಿಕಾ ಹೇಳಿಕೆಯಲ್ಲಿ ಏನಿದೆಯೆಂದು ಇನ್ನೂ ತಿಳಿದುಬಂದಿಲ್ಲ. ಸುದ್ದಿಗೋಷ್ಠಿಯ ಮುಖ್ಯಾಂಶಗಳು ಕೆಳಗಿನಂತಿವೆ.
* ನಾಲ್ಕು ತಿಂಗಳ ಹಿಂದೆಯೇ ಈ ನಾಲ್ವರು ನ್ಯಾಯಮೂರ್ತಿಗಳು ಮುಖ್ಯ ನ್ಯಾಯಮೂರ್ತಿಗೆ ಒಂದು ಪತ್ರವನ್ನು ನೀಡಿದ್ದರು.
* ಸರ್ವೋಚ್ಚ ನ್ಯಾಯಾಲಯದಲ್ಲಿ ಆಡಳಿತ ವ್ಯವಸ್ಥೆ ಸರಿದಾರಿಯಲ್ಲಿ ಸಾಗುತ್ತಿಲ್ಲ. ಕಳೆದ ಕೆಲವಾರು ತಿಂಗಳುಗಳಲ್ಲಿ ಹಲವಾರು ಅನಿರೀಕ್ಷಿತ, ಅಹಿತಕರ ಘಟನೆಗಳು ನಡೆದಿವೆ ಎಂದು ನ್ಯಾ. ಚಲಮೇಶ್ವರ ಹೇಳಿದರು.
* ನ್ಯಾಯಾಂಗ ವ್ಯವಸ್ಥೆ ಅಪಾರದರ್ಶಕವಾಗಿರದಿದ್ದರೆ ದೇಶದ ಪ್ರಜಾಪ್ರಭುತ್ವಕ್ಕೇ ಮಾರಕವಾಗಲಿದೆ ಎಂದು ನ್ಯಾಯಮೂರ್ತಿ ಚಲಮೇಶ್ವರ ಅವರು ಆತಂಕ ವ್ಯಕ್ತಪಡಿಸಿದರು.
* ಇದು ಅಭೂತಪೂರ್ವ ಸಂಗತಿ. ಇದನ್ನು ನಾವೇನು ಅತ್ಯಂತ ಸಂತೋಷದಿಂದ ಮಾಡುತ್ತಿಲ್ಲ. ದೇಶವನ್ನುದ್ದೇಶಿಸಿ ಮಾತನಾಡದಿದ್ದರೆ ನಮಗೆ ಬೇರೆ ದಾರಿಯೇ ಇರಲಿಲ್ಲ ಎಂದು ನ್ಯಾ. ಚಲಮೇಶ್ವರ ಅವರು ವಿಷಾದಿಸಿದರು.
* ಕೆಲ ಪ್ರಮುಖ ಸಂಗತಿಗಳ ಬಗ್ಗೆ ಕ್ರಮಗಳನ್ನು ತೆಗೆದುಕೊಳ್ಳುವ ಬಗ್ಗೆ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯ ಮನವೊಲಿಸಲು ಪ್ರಯತ್ನಿಸಿದೆವು. ಆದರೆ, ಫಲಕಾರಿಯಾಗಲಿಲ್ಲ ಎಂದು ಅವರು ವಿಷಾದ ವ್ಯಕ್ತಪಡಿಸಿದರು.
* ಜಸ್ಟಿಸ್ ಬಿಎಚ್ ಲೋಯಾ ಅವರ ಆಘಾತಕಾರಿ ಹತ್ಯೆಗೆ ಬಗ್ಗೆ ಪತ್ರ ಬರೆಯಲಾಗಿದೆಯಾ ಎಂಬ ಪ್ರಶ್ನೆಗೆ ನ್ಯಾಯಮೂರ್ತಿಗಳು ಸ್ಪಷ್ಟವಾಗಿ ಉತ್ತರ ನೀಡಲಿಲ್ಲ. ಸೊಹ್ರಾಬುದ್ದಿನ್ ಎನ್ಕೌಂಟರ್ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಲೋಯಾ ಅವರು ಸಂಶಯಾಸ್ಪದವಾಗಿ ಸಾವಿಗೀಡಾಗಿದ್ದರು.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications