Uniform Civil Code: ಏಕರೂಪ ನಾಗರಿಕ ಸಂಹಿತೆಯನ್ನು ಖಡಾಖಂಡಿತವಾಗಿ ಒಪ್ಪಲ್ಲವೆಂದ ಎಐಎಡಿಎಂಕೆ- ಬಿಜೆಪಿ ಮಹದಾಸೆಗೆ ತಣ್ಣೀರು
ಚೆನ್ನೈ, ಜುಲೈ 05: ಕಳೆದ ಕೆಲ ದಿನಗಳಿಂದ ದೇಶದಾದ್ಯಂತ ಏಕರೂಪ ನಾಗರಿಕ ಸಂಹಿತೆ ವಿಚಾರ ಭಾರೀ ಚರ್ಚೆಯಲ್ಲಿದೆ. ಪ್ರಧಾನಿ ಮೋದಿ ಹಾಗೂ ಬಿಜೆಪಿ ನಾಯಕರು ಏಕರೂಪ ನಾಗರಿಕ ಸಂಹಿತೆ ಜಾರಿ ಕುರಿತು ಮಾತನಾಡಿದ್ದಾರೆ. ಇದಕ್ಕೆ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ಆದರೆ, ಎನ್ಡಿಎ ಮೈತ್ರಿಕೂಟದಲ್ಲಿರುವ ತಮಿಳುನಾಡಿನ ಎಐಎಡಿಎಂಕೆ ಪಕ್ಷವು ಇದಕ್ಕೆ ವಿರೋಧ ವ್ಯಕ್ತಪಡಿಸಿರುವುದು ಅಚ್ಚರಿಗೆ ಕಾರಣವಾಗಿದೆ.
ಈ ವಿಚಾರವಾಗಿ ತಮಿಳು ನಾಡಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಎಐಎಡಿಎಂಕೆ ಅಧ್ಯಕ್ಷ, ಮಾಜಿ ಸಿಎಂ ಕೆ ಪಳನಿಸ್ವಾಮಿ, 'ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬಿಜೆಪಿ ಮುಂದಾಗಿದೆ. ಆದರೆ, 2019 ರ ಲೋಕಸಭೆ ಚುನಾವಣೆಯಲ್ಲಿ ನಾವು ಪ್ರಕಟಿಸಿದ್ದ ಪ್ರಣಾಳಿಕೆಯಲ್ಲಿ ನಮ್ಮ ನಿಲುವನ್ನು ತಿಳಿಸಿದ್ದೆವು' ಎಂದು ಹೇಳಿದ್ದಾರೆ.

ಚೆನ್ನೈನಲ್ಲಿ ನಡೆದ ಪಕ್ಷದ ಜಿಲ್ಲಾ ಕಾರ್ಯದರ್ಶಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಮ್ಮ ಪ್ರಣಾಳಿಕೆಯನ್ನು ಓದಿ, ಅದರಲ್ಲಿ ಸ್ಪಷ್ಟವಾಗಿ ನಮೂದಿಸಿದ್ದೇವೆ. ನಾವು ಏಕರೂಪ ನಾಕರಿಕತೆಯ ಪರ ಇಲ್ಲ ಎಂದು ತಿಳಿಸಿದ್ದಾರೆ.
'ಅಲ್ಪಸಂಖ್ಯಾತರ ( ಮುಸ್ಲಿಮರು, ಕ್ರೈಸ್ತರು, ಸಿಕ್ಖರು ) ಧಾರ್ಮಿಕ ಹಕ್ಕುಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಏಕರೂಪ ನಾಗರಿಕ ಸಂಹಿತೆಯನ್ನು ಪಕ್ಷವು ವಿರೋಧಿಸಲಿದೆ. ಈ ಕುರಿತು ಸಂವಿಧಾನಕ್ಕೆ ಯಾವುದೇ ತಿದ್ದುಪಡಿಗಳನ್ನು ತರದಂತೆ ಭಾರತ ಸರ್ಕಾರವನ್ನು ಎಐಎಡಿಎಂಕೆ ಒತ್ತಾಯಿಸುತ್ತದೆ' ಎಂದು ಈ ಹಿಂದಿನ ಪ್ರಣಾಳಿಕೆಯಲ್ಲಿ ಹೇಳಲಾಗಿದೆ.

2024 ರ ಲೋಕಸಭಾ ಚುನಾವಣೆಗೆ ಬಿಜೆಪಿಯೊಂದಿಗೆ ತಮ್ಮ ಪಕ್ಷದ ಮೈತ್ರಿ ಮುಂದುವರಿಯುತ್ತದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪಳನಿಸ್ವಾಮಿ, 'ಈಗ ಯಾವುದೇ ಚುನಾವಣೆ ಇಲ್ಲ. ಲೋಕಸಭೆ ಚುನಾವಣೆಗೆ ಒಂದು ವರ್ಷವಿದೆ. ನಮಗೆ ಯಾವುದೇ ತುರ್ತು ಇಲ್ಲ. ಚುನಾವಣೆಯ ಸಮಯದಲ್ಲಿ ಎಲ್ಲವನ್ನೂ ಬಹಿರಂಗಪಡಿಸುತ್ತೇವೆ. ನಾವು ಯಾವ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುತ್ತಿದ್ದೇವೆ ಎಂಬುದನ್ನು ನಿಮಗೆ ಖಚಿತವಾಗಿ ಹೇಳುತ್ತೇವೆ' ಎಂದು ಹೇಳಿದ್ದಾರೆ.
ಸೂಕ್ತ ಸಮಯದಲ್ಲಿ ಎಲ್ಲವನ್ನೂ ಪಾರದರ್ಶಕವಾಗಿ ಮಾತನಾಡಲಾಗುವುದು ಎಂದೂ ಪಳನಿಸ್ವಾಮಿ ತಿಳಿಸಿದ್ದಾರೆ.
ಪಕ್ಷದ ಸಂಸ್ಥಾಪಕ ಎಂಜಿ ರಾಮಚಂದ್ರನ್ ಹಾಗೂ ಮಾಜಿ ಸಿಎಂ ಜಯಲಲಿತಾ ಅವರ ಹೆಜ್ಜೆಗಳನ್ನು ನಾವು ಅನುಸರಿಸುತ್ತೇವೆ. ಅವರ ಈ ಹಿಂದೆ ತಳೆದಿದ್ದ ನಿಲುವಿನಂತೆ ಮೈತ್ರಿ ಮಾಡಿಕೊಳ್ಳಲಾಗುವುದು. ಬಿಜೆಪಿಯೊಂದಿಗಿನ ನಮ್ಮ ಮೈತ್ರಿ ಕುರಿತು ಈಗಾಗಲೇ ಸ್ಪಷ್ಟಪಡಿಸಲಾಗಿದೆ ಎಂದು ಅವರು ಪುನರುಚ್ಚರಿಸಿದರು.
-
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral












Click it and Unblock the Notifications