ಅತ್ಯಾಚಾರಿ ಬಾಬಾ ರಾಮ್ ರಹೀಮ್ ಜನಪ್ರಿಯತೆಯ ಗುಟ್ಟೇನು?
ಚಂಡೀಗಢ, ಆಗಸ್ಟ್ 25: ಡೇರಾ ಸಚ್ಚಾ ಸೌಧಾ ಮುಖ್ಯಸ್ಥ ಸ್ವಯಂ ಘೋಷಿತ ದೇವಮಾನವ ಗುರ್ಮಿತ್ ರಾಮ್ ರಹೀಮ್ ಸಿಂಗ್ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿ ಎಂದು ಸಿಬಿಐ ವಿಶೇಷ ನ್ಯಾಯಾಲಯ ಶುಕ್ರವಾರಂದು ಘೋಷಿಸಿದೆ.
ಅತ್ಯಾಚಾರ ಸೇರಿದಂತೆ ಹಲವು ಕ್ರಿಮಿನಲ್ ಕೇಸುಗಳನ್ನು ರಾಮ್ ರಹೀಮ್ ಅವರ ಮೇಲೆ ಹೊರೆಸಲಾಗಿದೆ. ಆದರೂ, ರಾಮ್ ರಹೀಮ್ ಅವರಿಗೆ ಲಕ್ಷಾಂತರ ಭಕ್ತರಿದ್ದಾರೆ ಏಕೆ? ಅಪರಾಧ ಪ್ರಕರಣದ ತೀರ್ಪು ಪ್ರಕಟಿಸಲು ಕ್ರಿಕೆಟ್ ಸ್ಟೇಡಿಯಂನ್ನು ಜೈಲಾಗಿ ಪರಿವರ್ತಿಸಲಾಗುತ್ತದೆ.
ರಾಮ್ ರಹೀಮ್ ಸಿಂಗ್ ಅತ್ಯಾಚಾರ ಪ್ರಕರಣದ ತೀರ್ಪಿನ ಪ್ರಭಾವ ಪಂಜಾಬ್, ಹರ್ಯಾಣ ಅಲ್ಲದೆ ರಾಜಸ್ಥಾನಕ್ಕೂ ವ್ಯಾಪಿಸಿದೆ. ರಾಜಸ್ಥಾನದಲ್ಲಿಯೂ 48 ಗಂಟೆಗಳ ಕಾಲ ಅಂತರ್ಜಾಲ ಸೇವೆ ಸ್ಥಗಿತಗೊಳಿಸಲಾಗಿದೆ. ಇಡೀ ರಾಜಸ್ಥಾನದಾದ್ಯಂತ ಸಿಆರ್'ಪಿಸಿ ಸೆಕ್ಷನ್ 144 ಹೇರಲಾಗಿದೆ.
ಅಗತ್ಯ ಬಿದ್ದರೆ ಶಸ್ತ್ರಾಸ್ತ್ರ ಬಳಸುವಂತೆ ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ಹರ್ಯಾಣ ಸರಕಾರಕ್ಕೆ ಸೂಚನೆ ನೀಡಿದೆ. ಪ್ರಚೋದನಕಾರಿ ಹೇಳಿಕೆ ನೀಡುವವರ ವಿರುದ್ಧ ಎಫ್ಐಆರ್ ದಾಖಲಿಸುವಂತೆಯೂ ಕೋರ್ಟ್ ಹೇಳಿದೆ.

ಜಾತಿ ವ್ಯವಸ್ಥೆ ಅಲ್ಲಾಡಿಸಿದ್ದ ಬಾಬಾ : ಜಾತಿ ವ್ಯವಸ್ಥೆಯಲ್ಲಿ ಮುಳುಗಿರುವ ಪಂಜಾಬ್ ಹಾಗೂ ಹರ್ಯಾಣದಲ್ಲಿ ಡೇರಾ ಸಚ್ಚಾ ಸೌಧಾ ಸಂಸ್ಥೆ ಮೂಲಕ ಗುರ್ಮಿತ್ ರಾಮ್ ರಹೀಮ್ ಸಿಂಗ್ ಅವರು ಹೊಸ ಬೆಳಕು ಮೂಡಿಸಿದ್ದರು. ಜಾತಿ ರಹಿತ ವ್ಯವಸ್ಥೆ ತರಲು ಯತ್ನಿಸಿದರು. ಇದಕ್ಕೆ ಸಾರ್ವಜನಿಕರಿಂದ ಭರಪೂರ ವ್ಯಕ್ತವಾಗಿತ್ತು.
ಸಮಾಜದಲ್ಲಿ ಹಿಂದುಳಿದ ವರ್ಗದವರು ರಾಮ್ ರಹೀಮ್ ಬೆನ್ನಹಿಂದೆ ನಿಂತರು. ಸಬ್ಸಿಡಿ ದರದಲ್ಲಿ ಆಹಾರ ವಿತರಣೆ, ಔಷಧಿ ಪೂರೈಕೆ ಮಾಡುವ ಮೂಲಕ ಜನಪ್ರಿಯತೆ ಗಳಿಸಿದರು. ಸರಿ ಸುಮಾರು 104ಕ್ಕೂ ಅಧಿಕ ಜನಪ್ರಿಯ ಯೋಜನೆಗಳನ್ನು ಜಾರಿಗೆ ತಂದಿರುವ ರಾಮ್ ರಹೀಮ್ ಅವರು ಪಂಜಾಬಿನ ಬಹುಮುಖ್ಯ ಸಮಸ್ಯೆಯ ವಿರುದ್ಧ ಹೋರಾಟ ನಡೆಸಿದರು.
ಐದು ಕೋಟಿಗೂ ಅಧಿಕ ಮಂದಿಯನ್ನು ಮಾದಕ ವ್ಯಸನದಿಂದ ಮುಕ್ತರಾಗುವಂತೆ ಮಾಡಿ 13ಕ್ಕೂ ಅಧಿಕ ಗಿನ್ನೆಸ್ ಪ್ರಶಸ್ತಿಗೆ ಭಾಜನರಾದರು. ಇದೆಲ್ಲರ ಜತೆಗೆ ಸಿನಿಮಾ, ಸಂಗೀತದ ಮೂಲಕ ಕೂಡಾ ರಾಮ್ ರಹೀಮ್ ಜನರಿಗೆ ಹತ್ತಿರವಾದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications