ಭಾರತೀಯ ಜ್ಯೋತಿಷಿಗಳಿಂದ ಪಾಕ್ ನಲ್ಲಿನ ಉಗ್ರ ದಾಳಿ ಬಗ್ಗೆ ನಿಖರ ಭವಿಷ್ಯ
ಪಾಕಿಸ್ತಾನದಲ್ಲೀಗ ಭಾರತದ ಜ್ಯೋತಿಷಿಗಳ ಬಗ್ಗೆ ಸಿಟ್ಟು ಹೆಚ್ಚಾಗಿದೆಯಂತೆ. ಕೇರಳದಿಂದ ಜ್ಯೋತಿಷಿಯೊಬ್ಬರು ಹೇಳಿರುವ ಭೂ ಕಂಪನದ ಬಗೆಗಿನ ಭವಿಷ್ಯವನ್ನೇ ಐಎಸ್ ಐ ಗಂಭೀರವಾಗಿ ತೆಗೆದುಕೊಂಡಿದ್ದು, ಇದೀಗ ನತ್ತೊಬ್ಬ ಜ್ಯೋತಿಷಿ ಹೇಳಿರುವ ಭವಿಷ್ಯ ಪಾಕಿಸ್ತಾನವನ್ನು ಚಿಂತೆಗೆ ಈಡು ಮಾಡಿದೆ.
ಕಳೆದ ಅಕ್ಟೋಬರ್ ನಲ್ಲಿ ಭಾರತದ ಜ್ಯೋತಿಷಿಯೊಬ್ಬರು, ಪಾಕಿಸ್ತಾನದಲ್ಲಿ ಉಗ್ರಗಾಮಿಗಳ ದಾಳಿ ನಡೆಯುವ ಬಗ್ಗೆ ತಿಳಿಸಿದ್ದರು. ಪಾಕಿಸ್ತಾನ ತಲೆ ಕೆಡಿಸಿಕೊಂಡಿರುವುದು ಏಕೆಂದರೆ, ಮುಂದಿನ ಫೆಬ್ರವರಿಯಲ್ಲಿ ಐದು ಉಗ್ರ ದಾಳಿಗಳು ನಡೆಯುತ್ತವೆ ಎಂದು ಅದೇ ಜ್ಯೋತಿಷಿ ಭವಿಷ್ಯ ನುಡಿದಿದ್ದಾರೆ.
ಕಳೆದ ಅಕ್ಟೋಬರ್ 13ರಂದು ಅನಿರುದ್ಧ್ ಕುಮಾರ್ ಎಂಬುವರು ಟ್ವೀಟ್ ಮಾಡಿ, ನವೆಂಬರ್ ನೊಳಗೆ ಪಾಕಿಸ್ತಾನದಲ್ಲಿ ಉಗ್ರಗಾಮಿಗಳಿಂದ ದಾಳಿ ಆಗುತ್ತದೆ ಎಂದಿದ್ದರು. ಆ ಟ್ವೀಟ್ ಅನ್ನು ಪಾಕಿಸ್ತಾನದ ಡಾನ್ ಪತ್ರಿಕೆಗೆ ಟ್ಯಾಗ್ ಕೂಡ ಮಾಡಿದ್ದರು. ಆದರೆ ಡಿಸೆಂಬರ್ 1ರಂದು ಪೇಶಾವರದ ಕೃಷಿ ತರಬೇತಿ ಕೇಂದ್ರದ ಮೇಲೆ ದಾಳಿ ನಡೆದು, 13 ಮಂದಿ ಮೃತಪಟ್ಟಿದ್ದರು.

ಡಿಸೆಂಬರ್ 1ರಂದು ಬುರ್ಕಾ ಧರಿಸಿ ಬಂದ ಭಯೋತ್ಪಾದಕರು ಪೇಶಾವರದ ಕೃಷಿ ತರಬೇತಿ ಕೇಂದ್ರದ ಮೇಲೆ ದಾಳಿ ನಡೆಸಿದ್ದರು. ಆ ನಂತರ ಭವಿಷ್ಯ ನಿಜವಾಗಿದೆ. ಆದರೆ ಒಂದು ದಿನ ತಡವಾಗಿದೆ ಎಂದು ಮಿಶ್ರಾ ಎಂಬುವವರು ಟ್ವೀಟ್ ಮಾಡಿದ್ದಾರೆ. ಮುಂದಿನ ಫೆಬ್ರವರಿಯಲ್ಲಿ ಇನ್ನೂ ಐದು ಉಗ್ರ ದಾಳಿಗಳು ನಡೆಯುತ್ತವೆ ಎಂದಿದ್ದಾರೆ.
ಇದೀಗ ಪಾಕಿಸ್ತಾನದ ಅಧಿಕಾರಿಗಳು ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ. ಭಾರತೀಯನೊಬ್ಬ ಇಷ್ಟು ನಿಖರವಾಗಿ ಭಯೋತ್ಪಾದಕರ ದಾಳಿ ಬಗ್ಗೆ ತಿಳಿಸಲು ಹೇಗೆ ಸಾಧ್ಯ ಎಂದು ತಲೆ ಕೆಡಿಸಿಕೊಂಡಿದ್ದಾರೆ. ಅಲ್ಲಿನ ಜನಪ್ರತಿನಿಧಿ ರೆಹಮಾನ್ ಮಲಿಕ್, ಪಾಕಿಸ್ತಾನದಲ್ಲಿ ಭಯೋತ್ಪಾದಕ ಕೃತ್ಯಕ್ಕೆ ಭಾರತ ಕುಮ್ಮಕ್ಕು ನೀಡುತ್ತಿದೆ ಎಂದು ಕೂಡ ಆರೋಪ ಮಾಡಿದ್ದಾರೆ.
ಕಳೆದ ತಿಂಗಳು ಪಾಕಿಸ್ತಾನದ ಬೇಹುಗಾರಿಕೆ ಸಂಸ್ಥೆ ಐಎಸ್ ಐ ಭೂಕಂಪನದ ಎಚ್ಚರಿಕೆ ಬಗ್ಗೆ ಮಾಹಿತಿ ನೀಡಿತ್ತು. ಈ ಮಾಹಿತಿಯು ಕೇರಳದ ಸಂಸ್ಥೆಯೊಂದು ನುಡಿದಿದ್ದ ಭವಿಷ್ಯದ ಮೇಲೆ ಆಧಾರಪಟ್ಟಿತ್ತು. ಆ ಸಂಸ್ಥೆಯು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಭೂ ಕಂಪನದ ಬಗ್ಗೆ ಎಚ್ಚರಿಕೆಯ ಮಾತು ಹೇಳಿತ್ತು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications