ಪಾಕ್ ತನಿಖಾ ತಂಡ ಪಠಾಣ್ ಕೋಟ್ ಪ್ರವೇಶಿಸುವಂತಿಲ್ಲ
ಬೆಂಗಳೂರು, ಜನವರಿ 20 : ಪಠಾಣ್ ಕೋಟ್ ದಾಳಿಯ ತನಿಖೆ ನಡೆಸುತ್ತಿರುವ ಪಾಕಿಸ್ತಾನದ ಕ್ರಮವನ್ನು ಭಾರತ ಶ್ಲಾಘಿಸಿದೆ. ಆದರೆ, ಪಾಕ್ ವಿಶೇಷ ತನಿಖಾ ತಂಡ ವಾಯುನೆಲೆ ಪ್ರವೇಶಿಸಲು ಅನುಮತಿ ನೀಡುವುದಿಲ್ಲ ಎಂದು ಭಾರತ ಸ್ಪಷ್ಟಪಡಿಸಿದೆ.
ರಕ್ಷಣಾ ಸಚಿವ ಮನೋಹರ ಪರಿಕ್ಕರ್ ಅವರು ಈಗಾಗಲೇ ಪಾಕ್ ತಂಡ ವಾಯುನೆಲೆ ಪ್ರವೇಶಿಸಲು ಅನುಮತಿ ನೀಡುವುದಿಲ್ಲ ಎಂದು ಹೇಳಿದ್ದಾರೆ. ವಾಯುನೆಲೆ ಮೇಲಿನ ದಾಳಿಯ ಸಂಚು ರೂಪಿಸಿದ ವ್ಯಕ್ತಿಗಳ ಬಗ್ಗೆ ತನಿಖೆ ನಡೆಸುತ್ತಿದ್ದು, ಅದಕ್ಕಾಗಿ ವಾಯುನೆಲೆಗೆ ಭೇಟಿ ನೀಡುತ್ತೇವೆ ಎಂದು ಪಾಕ್ ಹೇಳಿತ್ತು. [ಪಠಾಣ್ ಕೋಟ್ ವಾಯುನೆಲೆ ವಿಶೇಷತೆಗಳೇನು?]

ಯಾವುದೇ ದೇಶವೂ ಮತ್ತೊಂದು ದೇಶದ ಅಧಿಕಾರಿಗಳಿಗೆ ವಾಯುನೆಲೆ ಪ್ರವೇಶಿಸಲು ಅನುಮತಿ ನೀಡುವುದಿಲ್ಲ. ಇದನ್ನೇ ಭಾರತವೂ ಮಾಡುತ್ತಿದೆ. ಕೆಲವು ದಿನಗಳ ಹಿಂದೆ ಭಾರತದ ಮಾಜಿ ಸೈನಿಕರು ಪಾಕ್ಗೆ ಸೇನೆಯ ಮಾಹಿತಿಗಳನ್ನು ಒದಗಿಸಿರುವುದು ಬೆಳಕಿಗೆ ಬಂದಿತ್ತು. ಆದ್ದರಿಂದ, ತನಿಖಾ ತಂಡಕ್ಕೆ ವಾಯುನೆಲೆ ಪ್ರವೇಶ ನಿರಾಕರಿಸಲಾಗಿದೆ. [ಪಠಾಣ್ ಕೋಟ್ ಉಗ್ರರ ದಾಳಿ : ಟೈಮ್ ಲೈನ್]
ಪಂಜಾಬ್ನ ಪಠಾಣ್ ಕೋಟ್ ವಾಯುನೆಲೆ ಭಾರತ ಮತ್ತು ಪಾಕಿಸ್ತಾನದ ಗಡಿಭಾಗದಿಂದ ಕೇವಲ 40 ಕಿ.ಮೀ.ದೂರದಲ್ಲಿದೆ. ಇದು ದೇಶದ ಮಹತ್ವದ ಸೇನಾ ನೆಲೆಯಾಗಿದೆ. ಪಾಕ್ ಮೊದಲಿನಿಂದಲೂ ಇದರ ಮೇಲೆ ಕಣ್ಣಿಟ್ಟಿದೆ.
1965, 1971ರ ಭಾರತ-ಪಾಕ್ ನಡುವಿನ ಯುದ್ಧದ ಸಮಯದಲ್ಲಿ ಪಾಕಿಸ್ತಾನ ಈ ವಾಯುನೆಲೆ ಮೇಲೆ ದಾಳಿ ಮಾಡಿತ್ತು. 1971ರಲ್ಲಿ ಪಾಕ್ ವೈಮಾನಿಕ ದಾಳಿಯಿಂದಾಗಿ ವಾಯುನೆಲೆಯ ರನ್ವೇಗೆ ಹಾನಿ ಉಂಟಾಗಿತ್ತು.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications