Manmohan Singh: ತಂದೆಯ ಆಸೆಯಂತೆ ಮನಮೋಹನ್ ಸಿಂಗ್ ವೈದ್ಯನಾಗಬೇಕೆಂಬ ಕನಸು ಈಡೇರಲಿಲ್ಲ ಯಾಕೆ?
Manmohan Singh Passes Away: ಭಾರತದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಅವರು ನಿನ್ನೆ (ಡಿಸೆಂಬರ್ 26) ನಿಧನರಾಗಿದ್ದಾರೆ. ಅವರು ದೇಶದ 13ನೇ ಪ್ರಧಾನಿಯಾಗಿ ಆಡಳಿತ ನಡೆಸಿದ್ದಾರೆ, ಆರ್ಥಿಕ ತಜ್ಞರಾಗಿಯೂ ಸೇವೆ ಸಲ್ಲಿದ ಕೀರ್ತಿ ಇವರದ್ದಾಗಿದೆ. ಇನ್ನು ತಮ್ಮ ತಂದೆಯ ಆಸೆಯಂತೆ ಮನಮೋಹನ್ ಸಿಂಗ್ ವೈದ್ಯನಾಗಬೇಕೆಂಬ ಕನಸು ಈಡೇರಲಿಲ್ಲ ಯಾಕೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಮನಮೋಹನ್ ಸಿಂಗ್ ಅವರು ವ್ಯದ್ಯನಾಬೇಕೆಂದು ಅವರ ತಂದೆ ಕನಸು ಕಂಡಿದ್ದರು. ಅವರ ತಂದೆಯ ತಂದೆ ಬಯಸಿದ್ದರಿಂದ ಪ್ರಿ-ಮೆಡಿಕಲ್ ಕೋರ್ಸ್ಗೆ ಸೇರಿಕೊಂಡರು. ಆದರೆ. ಒಂದೆರಡು ತಿಂಗಳ ಬಳಿಕ ವೈದ್ಯಕೀಯ ಶಿಕ್ಷಣದಲ್ಲಿ ಆಸಕ್ತಿ ಕಳೆದುಕೊಂಡು ವಾಪಸ್ ಮರಳಿದರು. ಮನಮೋಹನ್ ಸಿಂಗ್ ಅವರ ಮಗಳು ದಮನ್ ಸಿಂಗ್ ತಮ್ಮ ತಂದೆಯ ಕುರಿತು ಬರೆದ ಪುಸ್ತಕದಲ್ಲಿ ಈ ವಿಷಯವನ್ನು ಉಲ್ಲೇಖಿಸಿದ್ದಾರೆ.

ದಮನ್ ಬರೆದಿರುವ ಸ್ಟ್ರಿಕ್ಟ್ಲಿ ಪೊಲಿಟಿಕಲ್ ಮನಮೋಹನ್ & ಗುರುಶರಣ್ ಎಂಬ ಪುಸ್ತಕ 2014ರಲ್ಲಿ ಪ್ರಕಟ ಆಗಿತ್ತು. ಅರ್ಥಶಾಸ್ತ್ರ ವಿಷಯದಲ್ಲಿ ಅವರು ಹೆಚ್ಚು ಆಸಕ್ತಿ ಹೊಂದಿದ್ದರು ಎಂದು ಅವರು ಪುಸ್ತಕದಲ್ಲಿ ಬರೆದಿದ್ದಾರೆ.
ಮಗನನ್ನು ವ್ಯದ್ಯನಾಗಬೇಕೆಂಬ ಕಾರಣಕ್ಕೆ ವ್ಯದ್ಯಕೀಯದಲ್ಲಿ ಹೆಚ್ಚಿನ ಅಧ್ಯಯನಕ್ಕೆ ಅವಕಾಶ ಕಲ್ಪಿಸುವ ಎರಡು ವರ್ಷಗಳ ಎಫ್ಎಸ್ಸಿ ಕೋರ್ಸ್ಗೆ ಸೇರಿಸಿದ್ದರು. ಆದರೆ, ಒಂದೆರಡು ತಿಂಗಳ ನಂತರ ಅವರು ಕೋರ್ಸ್ನಲ್ಲಿ ಆಸಕ್ತಿ ಕಳೆದುಕೊಂಡರು. ವಾಸ್ತವವಾಗಿ ವಿಜ್ಞಾನ ವಿಷಯವನ್ನು ಅಧ್ಯಯನ ಮಾಡುವ ಆಸಕ್ತಿ ಅವರಿಗೆ ಇರಲಿಲ್ಲ ಎಂದು ಹೇಳಿಕೊಂಡಿದ್ದಾರೆ.
ಮನಮೋಹನ್ ಸಿಂಗ್ ಹೇಳಿದ್ದೇನು?: ನಾನು ಅಪ್ಪನಿಗೆ ನೆರವಾಗಲು ಕಲ ಸಮಯ ಅವರ ಜೊತೆ ಅಂಗಡಿಗೆ ಹೋಗುತ್ತಿದ್ದೆ. ಆದರೆ ಅದು ಕೂಡ ನನಗೆ ಇಷ್ಟ ಆಗಲಿಲ್ಲ. ಯಾಕೆಂದರೆ ನನ್ನನ್ನು ಅಲ್ಲಿ ಕೀಳಾಗಿ ಕಂಡರು. ನೀರು, ಚಹಾ ತರುವ ಕೆಲಸವನ್ನು ನನಗೆ ನೀಡಲಾಯಿತು. ಆಗ ಶಿಕ್ಷಣ ಪಡೆಯುವುದೇ ಒಳಿತು ಎಂದು ನಿರ್ಧರಿಸಿ ಕಾಲೇಜು ಸೇರಲು ಬಯಸಿದೆ. 1948ರಲ್ಲಿ ಹಿಂದೂ ಕಾಲೇಜಿಗೆ ಪ್ರವೇಶ ಪಡೆದೆ ಎಂದು ದಮನ್ ಅವರು ತಮ್ಮ ತಂದೆಯ ಹೇಳಿಕೆಯನ್ನು ಪುಸ್ತಕದಲ್ಲಿ ಬರೆದಿದ್ದಾರೆ.
"ಬಡತನಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ನಾನು ಆಸಕ್ತಿ ಹೊಂದಿದ್ದೇನೆ. ಕೆಲವು ದೇಶಗಳು ಯಾಕೆ ಹಿಂದುಳಿದಿವೆ, ಇನ್ನೂ ಕೆಲ ದೇಶಗಳು ಯಾಕೆ ಶ್ರೀಮಂತ ಆಗಿವೆ ಎಂಬುದರ ಬಗ್ಗೆ ಯೋಚಿಸುತ್ತಿದೆ. ಇಂತಹ ಪ್ರಶ್ನೆಗಳನ್ನು ಅರ್ಥಶಾಸ್ತ್ರದಲ್ಲಿ ಕೇಳಲಾಗುತ್ತದೆ ಎಂದು ನನಗೆ ತಿಳಿಸಲಾಯಿತು," ಅಂತಾ ಮನಮೋಹನ್ ಸಿಂಗ್ ಹೇಳಿರುವುದನ್ನು ಅವರ ಮಗಳು ದಮನ್ ಅವರು ಪುಸ್ತಕದಲ್ಲಿ ಬರೆದಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications