Postpone JEE Main 2022 ಟ್ರೆಂಡಿಂಗ್ ಆಗಲು ಕಾರಣವೇನು?
ನವದೆಹಲಿ, ಏಪ್ರಿಲ್ 6: ಜೆಇಇ ಮುಖ್ಯ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಿರಿ ಎನ್ನುವ ವಿಷಯವು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಟ್ರೆಂಡಿಂಗ್ ಆಗುತ್ತಿದೆ. ಏಕೆಂದರೆ 2022ರ ಜೆಇಇ ಮುಖ್ಯ ಪರೀಕ್ಷೆಗಳು ಇದೇ ತಿಂಗಳಿನಲ್ಲಿ ನಡೆಯಲಿರುವ ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆಯ ವೇಳಾಪಟ್ಟಿಯೊಂದಿಗೆ ಘರ್ಷಣೆ ಆಗುತ್ತದೆ. ಈ ಹಿನ್ನೆಲೆ ಸಿಬಿಎಸ್ಇ 12ನೇ ತರಗತಿ ಎರಡನೇ ಅವಧಿಯ ಪರೀಕ್ಷೆಗಳಿಗೆ ಸಮಸ್ಯೆ ಆಗಲಿದೆ.
ಏಪ್ರಿಲ್ 26 ರಿಂದ ಜೂನ್ 15 ರವರೆಗೆ CBSE ಪರೀಕ್ಷೆಗಳು ನಡೆಯಲಿದೆ. ಇದರ ಮಧ್ಯೆ ರಾಷ್ಟ್ರೀಯ ಪರೀಕ್ಷಾ ಮಂಡಳಿಯು 2022ನೇ ಸಾಲಿನ JEE ಮುಖ್ಯ ಪರೀಕ್ಷೆಯನ್ನು ಏಪ್ರಿಲ್ 21 ರಿಂದ ಮೇ 4 ರವರೆಗೆ ನಡೆಸಲು ನಿರ್ಧರಿಸಿದೆ.
ಎಂಜಿನಿಯರಿಂಗ್ ಮತ್ತು ಜೆಇಇ ಮುಖ್ಯ ಪರೀಕ್ಷೆಯ ದಿನಾಂಕಗಳ ನಡುವೆ ಘರ್ಷಣೆ ಆಗಲಿರುವ ಹಿನ್ನೆಲೆ ಆಕಾಂಕ್ಷಿಗಳು ಜೆಇಇ ಪರೀಕ್ಷೆಗಳನ್ನು ಮುಂದೂಡುವಂತೆ ಒತ್ತಾಯಿಸುತ್ತಿದ್ದಾರೆ. ಈ ಸಂಬಂಧ ಶಿಕ್ಷಣ ಸಚಿವಾಲಯ ಮತ್ತು ರಾಷ್ಟ್ರೀಯ ಪರೀಕ್ಷೆ ಮಂಡಳಿಗೆ ಮನವಿ ಮಾಡಿಕೊಳ್ಳುತ್ತಿದ್ದಾರೆ. ಈ ಕಾರಣಕ್ಕಾಗಿಯೇ ಸಾಮಾಜಿಕ ಜಾಲತಾಣದಲ್ಲಿ PostponeJEEMain2022 ಎಂಬುದು ಸಖತ್ ಟ್ರೆಂಡಿಂಗ್ ಆಗುತ್ತಿದೆ.

ಜೆಇಇ ಮುಖ್ಯ ಪರೀಕ್ಷೆ ಮುಂದೂಡುವಿಕೆಗೆ ಟ್ವೀಟ್:
"ದಯವಿಟ್ಟು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿ. ಪರೀಕ್ಷೆಗಳನ್ನು ಸ್ವಲ್ಪ ಮುಂದೂಡುವುದರಿಂದ ಹೆಚ್ಚಿನ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುವುದಿಲ್ಲ. ಆದರೆ ಇದೀಗ ವಿದ್ಯಾರ್ಥಿಗಳು ತಲೆ ಕೆಡಿಸಿಕೊಳ್ಳುವಂತಾಗಿದೆ," ಎಂದು ಟ್ವೀಟ್ ಮಾಡಲಾಗುತ್ತಿದೆ.
ಭಾರತೀಯ ಅಧಿಕಾರಿಗಳು ನಮಗೆ ಸಾಧ್ಯವಿರುವ ಅತ್ಯಂತ ಕಷ್ಟಕರ ಸಂದರ್ಭಗಳಲ್ಲಿ #JEEMains ನಂತಹ ಪ್ರವೇಶ ಪರೀಕ್ಷೆಗಳನ್ನು ನೀಡುತ್ತಿದ್ದಾರೆ. ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕಾಗಿ ವಿದೇಶಕ್ಕೆ ಏಕೆ ಹೋಗುತ್ತಿದ್ದಾರೆ ಎಂದು ಕೇಳುತ್ತಾರೆ. ನಮ್ಮ ಬೇಡಿಕೆಗಳು ಪ್ರಾಯೋಗಿಕವಾಗಿದ್ದು, ಅದಕ್ಕೆ ಜೆಇಇ ಮುಖ್ಯ ಪರೀಕ್ಷೆಗಳನ್ನು ಮುಂದೂಡುವುದೊಂದೇ ಏಕೈಕ ಮಾರ್ಗವಾಗಿದೆ ಎಂದರು.
-
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
SSLC ಪರೀಕ್ಷೆ 2026: ಪರೀಕ್ಷಾ ಹಾಲ್ಗೆ ಹೋಗುವ ಮುನ್ನ ನಿಮ್ಮ ಕೈಯಲ್ಲಿ ಈ ವಸ್ತುಗಳಿವೆಯಾ? ಒಮ್ಮೆ ಚೆಕ್ ಮಾಡಿಕೊಳ್ಳಿ -
ಇಂದಿನಿಂದ SSLC ಪರೀಕ್ಷೆ: 8.66 ಲಕ್ಷ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಶುಭಹಾರೈಕೆ; ಆತಂಕಬೇಡ ಎಂದ ಸರ್ಕಾರ -
SSLC Exam: ಪರೀಕ್ಷಾ ಕೊಠಡಿಯೊಳಗೆ ಪ್ರವೇಶಿಸಿದ ನಂತರ ನಿಮ್ಮ ಮುಂದಿನ 3 ಗಂಟೆ ಹೇಗಿರಬೇಕು? ಇಲ್ಲಿದೆ ಮಾಹಿತಿ -
ಇನ್ಮುಂದೆ ಗ್ರಾಮೀಣ ವಿದ್ಯಾರ್ಥಿಗಳಿಗೆ ಸರ್ಕಾರದಿಂದಲೇ ಸಿಗಲಿದೆ ಉಚಿತ 'NEET' ತರಬೇತಿ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
ಶಾಲಾ ಶಿಕ್ಷಣದಲ್ಲಿ ಮಹತ್ವದ ಬದಲಾವಣೆ: 1-8ನೇ ತರಗತಿಗೆ ಹೊಸ ಪಠ್ಯಪುಸ್ತಕ ಬಿಡುಗಡೆ ಮಾಡಿದ NCERT -
SSLC Exam 2026: ಕೊನೆಯ ಕ್ಷಣದಲ್ಲಿ ಒತ್ತಡವಿಲ್ಲದೆ ರಿವಿಷನ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ -
ಕನ್ನಡಿಗರ ಮುಕ್ತಜ್ಞಾನದ ತಾಣ ‘ಕಣಜ’ಕ್ಕೆ ಸಿಕ್ಕಿಬಿಟ್ಟಿತೆ ಮುಕ್ತಿ? 3 ತಿಂಗಳಿಂದ ಕಣ್ಮರೆಯಾದ ವೆಬ್ಸೈಟ್ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ












Click it and Unblock the Notifications