ಗೌರಿಗೆ ಕರ್ನಾಟಕ ಸರ್ಕಾರ ರಕ್ಷಣೆ ಏಕೆ ಕೊಟ್ಟಿರಲಿಲ್ಲ: ರವಿಶಂಕರ್ ಪ್ರಶ್ನೆ
ನವದೆಹಲಿ, ಸೆಪ್ಟೆಂಬರ್ 8: ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಪ್ರಕರಣ ದಿನಗಳೆದಂತೆ ಹೆಚ್ಚೆಚ್ಚು ರಾಜಕೀಯ ಬಣ್ಣ ಪಡೆದುಕೊಳ್ಳುತ್ತಿದೆ. ಈ ಪ್ರಕರಣವೀಗ ಬಿಜೆಪಿ ಹಾಗೂ ಕಾಂಗ್ರೆಸ್ ನಡುವಿನ ಕಿತ್ತಾಟವನ್ನು ತಾರಕಕ್ಕೆ ಕೊಂಡೊಯ್ದಿದೆ.
ಶುಕ್ರವಾರ, ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿರುವ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು, ''ಗೌರಿ ಲಂಕೇಶ್ ಅವರಿಗೆ ನಕ್ಸಲೀಯರಿಂದ ಬೆದರಿಕೆ ಇ-ಮೇಲ್ ಹಾಗೂಕರೆಗಳು ಬಂದಿದ್ದವೆಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಪರಿಸ್ಥಿತಿ ಹೀಗಿದ್ದರೂ, ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಅವರಿಗೆ ಗೌರಿ ಅವರಿಗೆ ಏಕೆ ರಕ್ಷಣೆ ನೀಡಿರಲಿಲ್ಲ?'' ಎಂದು ಪ್ರಶ್ನಿಸಿದರು.












Click it and Unblock the Notifications