2020ರಲ್ಲಿ ಶ್ರದ್ಧಾ ದೂರಿನ ಬಗ್ಗೆ ಏಕೆ ಕ್ರಮ ಕೈಗೊಂಡಿಲ್ಲ: ಫಡ್ನವೀಸ್ ಪ್ರಶ್ನೆ, ತನಿಖೆಗೆ ಆಗ್ರಹ
ದೆಹಲಿ, ನವೆಂಬರ್ 23: 2020ರಲ್ಲಿ ಶ್ರದ್ಧಾ ದೂರಿನ ಮೇಲೆ ಏಕೆ ಕ್ರಮ ಕೈಗೊಂಡಿಲ್ಲ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಫಡ್ನವೀಸ್ ಪ್ರಶ್ನೆ ಮಾಡಿದ್ದಾರೆ. ಶ್ರದ್ಧಾ ವಾಕರ್ ಹತ್ಯೆ ಪ್ರಕರಣದ ತನಿಖೆಯಲ್ಲಿ ಪೊಲೀಸರು ಹೊಸ ಹೊಸ ವಿಚಾರಗಳನ್ನು ಬಯಲಿಗೆಳಿಯುತ್ತಿದ್ದಾರೆ. ಇಂದು ಶ್ರದ್ಧಾ ವಾಕರ್ ಎರಡು ವರ್ಷಗಳ ಹಿಂದೆ ಅಫ್ತಾಬ್ ವಿರುದ್ಧ ದೂರು ದಾಖಲಿಸಿರುವುದು ಬೆಳಕಿಗೆ ಬಂದಿದೆ.
ಶ್ರದ್ಧಾ ವಾಕರ್ನೊಂದಿಗೆ ಸಹಜೀವನ ನಡೆಸುತ್ತಿದ್ದ ಅಫ್ತಾಬ್ ಮೇ 18 ರಂದು ಆಕೆಯನ್ನು ಕೊಲೆ ಮಾಡಿ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ಫ್ರಿಡ್ಜ್ನಲ್ಲಿ ಇರಿಸಿದ್ದನು. ಇದಾದ ಬಳಿಕ ಕೆಲ ದಿನಗಳವರೆಗೆ ಮೃತದೇಹದ ತುಂಡುಗಳನ್ನು ಮೆಹ್ರೌಲಿ ಅರಣ್ಯದಲ್ಲಿ ಎಸೆಯಲಾಯಿತು. ಈ ಬಗ್ಗೆ ದೆಹಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತನಿಖೆ ಮುಂದುವರೆದಂತೆ ಪ್ರತಿದಿನ ಹೊಸ ಮತ್ತು ಆಘಾತಕಾರಿ ಸಂಗತಿಗಳು ಬಹಿರಂಗಗೊಳ್ಳುತ್ತಿವೆ. ಇಂದು ಶ್ರದ್ಧಾ ವಾಕರ್ ಅವರ ಹಳೆಯ ದೂರಿನ ಪ್ರತಿಯೊಂದು ವೈರಲ್ ಆಗಿದೆ. ಈ ಪತ್ರದ ಮೂಲಕ ಮಹಾರಾಷ್ಟ್ರ ಪೊಲೀಸರಿಗೆ ಶ್ರದ್ಧಾ ವಾಕರ್, ಅಫ್ತಾಬ್ ಕೊಲೆ ಬೆದರಿಕೆ ಹಾಕುತ್ತಿದ್ದಾನೆ ಮತ್ತು ತನ್ನನ್ನು ತುಂಡು ತುಂಡಾಗಿ ಕತ್ತರಿಸುವುದಾಗಿ ಬೆದರಿಕೆ ಹಾಕುತ್ತಿದ್ದಾನೆ ಎಂದು ದೂರು ನೀಡಿದ್ದಾರೆ.
ಎರಡು ವರ್ಷಗಳ ಹಿಂದೆ ಶ್ರದ್ಧಾ ದೂರಿನ ಬಗ್ಗೆ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಫಡ್ನವೀಸ್ ಪ್ರತಿಕ್ರಿಯಿಸಿದ್ದಾರೆ. ಶ್ರದ್ಧಾ ವಾಕರ್ ನೀಡಿದ ಈ ದೂರನ್ನು ಆಗ ಏಕೆ ತನಿಖೆ ನಡೆಸಲಿಲ್ಲ? ಎಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಫಡ್ನವೀಸ್ ಅವರು ಪ್ರಶ್ನೆ ಮಾಡಿದ್ದಾರೆ. ಟಿವಿ ವಾಹಿನಿಯೊಂದರೊಂದಿಗಿನ ಸಂಭಾಷಣೆಯ ಸಂದರ್ಭದಲ್ಲಿ ಫಡ್ನವೀಸ್ ಮಾತನಾಡಿ, 2020 ರಲ್ಲಿ ಶ್ರದ್ಧಾ ನೀಡಿದ ದೂರು ತುಂಬಾ ಗಂಭೀರವಾಗಿದೆ. ಆ ವೇಳೆಗೆ ತನಿಖೆ ನಡೆಸಿದ್ದರೆ ಶ್ರದ್ಧಾ ಅವರ ಪ್ರಾಣ ಉಳಿಯುತ್ತಿತ್ತು. ಆ ಸಮಯದಲ್ಲಿ ಈ ಪ್ರಕರಣವನ್ನು ಏಕೆ ತನಿಖೆ ಮಾಡಲಿಲ್ಲ ಎಂಬ ಬಗ್ಗೆ ಈಗ ತನಿಖೆ ನಡೆಸುವುದಾಗಿ ಫಡ್ನವೀಸ್ ಹೇಳಿದ್ದಾರೆ.

2020 ರಲ್ಲಿ ತುಳಿಂಜ್ ಪೊಲೀಸ್ ಠಾಣೆಯಲ್ಲಿ ಶ್ರದ್ಧಾ ವಾಕರ್ ದೂರು ದಾಖಲಿಸಿದ್ದರು. ಈ ದೂರಿನ ಮೂಲಕ, ಅಫ್ತಾಬ್ ತನ್ನನ್ನು ಥಳಿಸುತ್ತಿದ್ದರು ಮತ್ತು ತನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕುತ್ತಿದ್ದರು. ಮಾತ್ರವಲ್ಲದೆ ತಮ್ಮನ್ನು ತುಂಡು ತುಂಡು ಮಾಡುವ ಬಗ್ಗೆ ಮಾತನಾಡುತ್ತಿದ್ದರು ಎಂದು ಶ್ರದ್ಧಾ ಆರೋಪಿಸಿದ್ದರು.
ಶ್ರದ್ಧಾ ಕೊಲೆ ಪ್ರಕರಣ ಬಯಲಾಗಿದ್ದು ಹೀಗೆ
ಶ್ರದ್ಧಾ ಮತ್ತು ಅಫ್ತಾಬ್ ಡೇಟಿಂಗ್ ಆಪ್ ಮೂಲಕ ಭೇಟಿಯಾಗಿದ್ದಾರೆ. ಶ್ರದ್ಧಾ ಮುಂಬೈ ನಿವಾಸಿಯಾಗಿದ್ದರು. ಅಫ್ತಾಬ್ ಕೂಡ ಇಲ್ಲಿನ ನಿವಾಸಿಯಾಗಿದ್ದರು. ಇಬ್ಬರ ನಡುವೆ ಮಾತುಕತೆ ಮುಂದುವರೆದಾಗ, ಅವರು ಒಟ್ಟಿಗೆ ವಾಸಿಸಲು ಪ್ರಾರಂಭಿಸಿದರು. ಈ ಸಂಬಂಧವನ್ನು ಶ್ರದ್ಧಾ ಮನೆಯವರು ವಿರೋಧಿಸಿದ್ದರು. ಅಫ್ತಾಬ್ ಜೊತೆ ಇರಲು ತಂದೆ ಶ್ರದ್ಧಾಗೆ ನಿಷೇಧ ಹೇರಿದಾಗ, ಆಕೆ ತಂದೆಯೊಂದಿಗಿನ ಸಂಬಂಧವನ್ನು ಕೊನೆಗೊಳಿಸಿದ್ದಳು. ನಾನು ಇಂದಿನಿಂದ ನಿಮ್ಮ ಪಾಲಿಗೆ ಸತ್ತಿದ್ದೇನೆ ಎಂದು ತಂದೆಗೆ ಹೇಳಿ ಹೋಗಿದ್ದಳು. ಇಷ್ಟೆಲ್ಲ ಆದರೂ ಶ್ರದ್ಧಾ ಕುಟುಂಬಸ್ಥರು ಸ್ನೇಹಿತರ ಮೂಲಕ ಆಕೆಯ ಮೇಲೆ ಕಣ್ಣಿಟ್ಟಿದ್ದರು. ಅದೇ ಸಮಯದಲ್ಲಿ ಶ್ರದ್ಧಾ ಕೆಲವು ದಿನ ಸ್ನೇಹಿತರ ಜೊತೆ ಮಾತನಾಡದೇ ಇದ್ದಾಗ ಸ್ನೇಹಿತರು ಶ್ರದ್ಧಾ ತಂದೆಗೆ ವಿಷಯ ತಿಳಿಸಿದ್ದಾರೆ. ಇದಾದ ನಂತರ ತಂದೆ ಪಾಲ್ಘರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣದ ತನಿಖೆ ಆರಂಭವಾದಾಗ ಶ್ರದ್ಧಾ ಅವರ ಕೊನೆಯ ಸ್ಥಳ ದೆಹಲಿಯಲ್ಲಿ ಪತ್ತೆಯಾಗಿತ್ತು. ನಂತರ ಪಾಲ್ಘರ್ ಪೊಲೀಸರು ಪ್ರಕರಣವನ್ನು ದೆಹಲಿ ಪೊಲೀಸರಿಗೆ ಹಸ್ತಾಂತರಿಸಿದರು. ದೆಹಲಿ ಪೊಲೀಸರು ಅಫ್ತಾಬ್ನನ್ನು ವಿಚಾರಣೆಗೆ ಒಳಪಡಿಸಿದಾಗ, ಅವನು ಸತ್ಯವನ್ನು ಹೇಳಲಿಲ್ಲ. ಆತ ಶ್ರದ್ಧಾ ತನ್ನನ್ನು ಬಿಟ್ಟು ಎಲ್ಲೋ ಹೋಗಿದ್ದಾಳೆ ಎಂದು ಹೇಳುತ್ತಿದ್ದನು. ಆದರೆ, ದೆಹಲಿ ಪೊಲೀಸರು ಕಟ್ಟುನಿಟ್ಟಾಗಿ ವಿಚಾರಣೆ ನಡೆಸಿದಾಗ ಸತ್ಯಾಂಶ ಹೊರಬಿದ್ದಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications