ಸಾಧು-ಸಂತರ ಕೊಡುಗೆ ಈ ದೇಶಕ್ಕಿಲ್ಲವಾ? ಅವರಿಗೇಕೆ ಭಾರತ ರತ್ನ ಇಲ್ಲ?: ರಾಮ್ ದೇವ್
ಸಮಾಜಕ್ಕೆ ಅದ್ಭುತವಾದ ಕೊಡುಗೆ ನೀಡಿದ ಹೊರತಾಗಿಯೂ ಭಾರತ ಸ್ವತಂತ್ರಗೊಂಡ ಎಪ್ಪತ್ತು ವರ್ಷಗಳಲ್ಲಿ ಯಾರೊಬ್ಬ ಸಾಧುವಿಗೂ ಯಾವುದೇ ರಾಷ್ಟ್ರ ಮಟ್ಟದ ಪ್ರಶಸ್ತಿ ಲಭಿಸಿಲ್ಲ ಎಂದು ಯೋಗ ಗುರು ಬಾಬಾ ರಾಮ್ ದೇವ್ ಹೇಳಿದ್ದಾರೆ.
ಸರಕಾರದ ಬಗ್ಗೆ ನಿಮಗಿರುವ ದ್ವೇಷದಿಂದ ಹೀಗೆ ಹೇಳುತ್ತಿದ್ದೀರಾ ಎಂಬ ಪ್ರಶ್ನೆಗೆ, ನಾನು ಅದನ್ನು ಹೇಳಲು ಸಾಧ್ಯವಿಲ್ಲ. ಸರಳವಾಗಿ ಆ ಕಡೆಗೆ ಬೊಟ್ಟು ಮಾಡಿ ತೋರಿಸುತ್ತಿದ್ದೇನೆ ಅಷ್ಟೇ ಎಂದು ಹೇಳಿದ್ದಾರೆ.
ಪತಂಜಲಿ ಬ್ರ್ಯಾಂಡ್ ನ ಹುಟ್ಟು ಹಾಕಿದ, ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿದ್ದ ರಾಮ್ ದೇವ್, ನಾನು ರಾಜಕಾರಣದಿಂದ ದೂರ ಉಳಿದಿದ್ದೇನೆ ಎಂದು ಇತ್ತೀಚೆಗೆ ಹೇಳಿದ್ದಾರೆ.
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಪರವಾಗಿ ಲೋಕಸಭೆ ಚುನಾವಣೆಗೆ ಪ್ರಚಾರ ನಡೆಸುತ್ತೀರಾ ಎಂದು ಕೇಳಿದ ಪ್ರಶ್ನೆಗೆ, ನಾನು ಏಕೆ ಮಾಡಬೇಕು ಎಂದು ಮರು ಪ್ರಶ್ನೆ ಹಾಕಿದ್ದಾರೆ.

ಈಗಾಗಲೇ ಭಾರತ ರತ್ನ ಬಂದವರ ದೇಶ ಕಟ್ಟುವ ಕೆಲಸದ ಬಗ್ಗೆ ನನಗೆ ಅಪಾರ ಗೌರವ ಇದೆ. ಆದರೆ ಕೇಸರಿ ಧರಿಸಿದ ಒಬ್ಬರೇ ಒಬ್ಬರು ಸನ್ಯಾಸಿಗೆ ದೇಶದ ಅತ್ಯುನ್ನತ ಗೌರವ ದೊರೆಯದಿರುವುದು ಹೇಗೆ ಸಾಧ್ಯ ಎಂದು ಪ್ರಶ್ನೆ ಮಾಡಿದ್ದಾರೆ.
ಈ ವರೆಗೆ ಸನ್ಯಾಸಿಯೊಬ್ಬರಿಗೆ ಏಕೆ ಭಾರತ ರತ್ನ ಬಂದಿಲ್ಲ. ಮಹರ್ಷಿ ದಯಾನಂದ ಅಥವಾ ಸ್ವಾಮಿ ವಿವೇಕಾನಂದ ಅವರು ದೇಶಕ್ಕೆ ನೀಡಿದ ಕೊಡುಗೆ ಯಾವ ರಾಜಕೀಯ ನಾಯಕರು ಅಥವಾ ಕ್ರೀಡಾಳುವಿಗಿಂತ ಕಡಿಮೆ ಇಲ್ಲ ಎಂದು ಹೇಳಿದ್ದಾರೆ.

ಮದರ್ ತೆರೇಸಾಗೆ ಈ ಪ್ರಶಸ್ತಿ ನೀಡಿದ್ದಾರೆ. ಅವರು ಕ್ರಿಶ್ಚಿಯನ್, ಆದರೆ ಹಿಂದೂ ಎಂಬ ಕಾರಣಕ್ಕೆ ಬೇರೆ ಸನ್ಯಾಸಿಗಳಿಗೆ ನೀಡಿಲ್ಲ. ಈ ದೇಶದಲ್ಲಿ ಹಿಂದೂ ಆಗಿರುವುದು ಅಪರಾಧವಾ ಎಂದು ರಾಮ್ ದೇವ್ ಪ್ರಶ್ನೆ ಮಾಡಿದ್ದಾರೆ. ಯಾರೆಲ್ಲ ಸಂತರು ಅಪಾರ ಕೊಡುಗೆ ನೀಡಿದ್ದಾರೋ ಅವರೆಲ್ಲರಿಗೂ ಭಾರತ ರತ್ನ ಸಿಗಲೇಬೇಕು ಎಂದಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಸೇರಿದಂರೆ ಕರ್ನಾಟಕ ಕಾಂಗ್ರೆಸ್ ನ ಹಲವು ನಾಯಕರು ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮಿಗಳಿಗೆ ಭಾರತ ರತ್ನ ಘೋಷಿಸುವಂತೆ ಒತ್ತಾಯಿಸಿದ್ದರು. 111ನೇ ವರ್ಷದಲ್ಲಿ ಡಾ.ಶಿವಕುಮಾರ ಸ್ವಾಮೀಜಿ ಜನವರಿ 21ರಂದು (ಕಳೆದ ವಾರ) ಶಿವೈಕ್ಯರಾದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications