ಪ್ರಧಾನಿ ಸುಳ್ಳು ಹೇಳುವುದು ಬಿಟ್ಟು ಮಣಿಪುರಕ್ಕೆ ಏಕೆ ಭೇಟಿ ನೀಡುತ್ತಿಲ್ಲ: ಹಿಗ್ಗಾಮುಗ್ಗ ಜಾಡಿಸಿದ ಜೈರಾಮ್ ರಮೇಶ್
ಬೆಂಗಳೂರು, ಸೆಪ್ಟೆಂಬರ್ 27: ಪ್ರಧಾನಿ ಮೋದಿ ಅವರು ಕಾಂಗ್ರೆಸ್ಸನ್ನು ನಿಂದಿಸುವುದು, ಸುಳ್ಳು ಹೇಳುವುದು ಬಿಟ್ಟು ಮಣಿಪುರಕ್ಕೆ ಏಕೆ ಭೇಟಿ ನೀಡುತ್ತಿಲ್ಲ ಎಂದು ರಾಜ್ಯಸಭಾ ಸದಸ್ಯ ಜೈರಾಮ್ ರಮೇಶ್ ಟೀಕಿಸಿದ್ದಾರೆ.
ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಇಂದು ಮತ್ತೆ ಮಣಿಪುರದಲ್ಲಿ 5 ದಿನಗಳ ಕಾಲ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಸಾಮಾನ್ಯರ ಹಕ್ಕುಗಳನ್ನು ಸಂಪೂರ್ಣವಾಗಿ ಅಪಹಾಸ್ಯ ಮಾಡುವ ಭಯಾನಕ ವೀಡಿಯೊ ಹೊರಹೊಮ್ಮಿದೆ. ಆದರೆ ಮಣಿಪುರಕ್ಕೆ ಸಂಬಂಧಿಸಿದಂತೆ ಯಾವ ವಿಷಯ ಪ್ರಧಾನಿಯನ್ನು ಕಾಡುವುದಿಲ್ಲ. ಅಲ್ಲಿನ ಜನರನ್ನು ಸುಮ್ಮನೆ ಕೈಬಿಟ್ಟಿದ್ದಾರೆ ಎಂದು ಆರೋಪಿಸಿದರು.

ಪ್ರಧಾನಿಯವರು ಅಧಿಕಾರಕ್ಕೆ ಬರಲು ಮಾತ್ರ ಕಾಳಜಿ ವಹಿಸುತ್ತಾರೆ ಮತ್ತು ಅವರಿಗೆ ಬೇರೆ ಯಾವುದೂ ಮುಖ್ಯವಲ್ಲ ಎಂದು ತಿಳಿಸಿದರು. ಬುಧವಾರ ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ಮಣಿಪುರದಲ್ಲಿ ಹಿಂಸಾಚಾರವನ್ನು ನಿಯಂತ್ರಿಸುವ ಮೊದಲ ಹೆಜ್ಜೆಯಾಗಿ ಬಿಜೆಪಿಯು ಅಸಮರ್ಥ ಮುಖ್ಯಮಂತ್ರಿಯನ್ನು ವಜಾಗೊಳಿಸಬೇಕೆಂದು ಒತ್ತಾಯಿಸಿದರು.
The Prime Minister is roaming around different states leaving behind his trademark trail of lies, abuses and insults. Why he cannot find a day to visit Manipur is simply beyond any understanding.
— Jairam Ramesh (@Jairam_Ramesh) September 26, 2023
Today again internet services have been suspended for 5 days in Manipur. A…
147 ದಿನಗಳಿಂದ ಮಣಿಪುರದ ಜನರು ಹಿಂಸಾಚಾರದ ವಾತಾವರಣದಲ್ಲಿ ನರಳುತ್ತಿದ್ದಾರೆ. ಆದರೆ ಪ್ರಧಾನಿಗೆ ಇಲ್ಲಿಗೆ ಭೇಟಿ ನೀಡಲು ಸಾಧ್ಯವಾಗುತ್ತಿಲ್ಲ. ಈ ಹಿಂಸಾಚಾರದಲ್ಲಿ ವಿದ್ಯಾರ್ಥಿಗಳು ಬಲಿಯಾಗುತ್ತಿರುವ ಭಯಾನಕ ಚಿತ್ರಗಳು ಮತ್ತೊಮ್ಮೆ ಇಡೀ ರಾಷ್ಟ್ರವನ್ನು ಬೆಚ್ಚಿಬೀಳಿಸಿವೆ ಎಂದು ಅವರು ಆರೋಪಿಸಿದರು.
ಹಿಂಸಾಚಾರದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯವು ಅಸ್ತ್ರವಾಗಿದೆ ಎಂಬುದು ಈಗ ಸ್ಪಷ್ಟವಾಗಿದೆ. ಸುಂದರವಾದ ಮಣಿಪುರ ರಾಜ್ಯವು ರಣರಂಗವಾಗಿ ಮಾರ್ಪಟ್ಟಿದೆ, ಇದಕ್ಕೆ ಬಿಜೆಪಿ ಕಾರಣ. ಹೈ ಟೈಮ್, ಪಿಎಂ ಮೋದಿ ಬಿಜೆಪಿಯ ಅಸಮರ್ಥ ಮಣಿಪುರ ಮುಖ್ಯಮಂತ್ರಿಯನ್ನು ವಜಾಗೊಳಿಸಿದರೆ ಹೆಚ್ಚಿನ ಪ್ರಕ್ಷುಬ್ಧತೆಯನ್ನು ನಿಯಂತ್ರಿಸಲು ಇದು ಮೊದಲ ಹೆಜ್ಜೆಯಾಗುತ್ತದೆ ಎಂದು ಅವರು ಹೇಳಿದರು.
ಜುಲೈ 6 ರಿಂದ ನಾಪತ್ತೆಯಾಗಿದ್ದ ಮೈಟಿ ಸಮುದಾಯದ ಇಬ್ಬರು ವಿದ್ಯಾರ್ಥಿಗಳ ಹತ್ಯೆಯನ್ನು ಪ್ರತಿಭಟಿಸುತ್ತಿರುವ ಸ್ಥಳೀಯರ ಮತ್ತು ಆರ್ಎಎಫ್ ಸಿಬ್ಬಂದಿ ನಡುವೆ ಮಂಗಳವಾರ ರಾತ್ರಿ ಇಂಫಾಲ್ನ ಸಿಂಗ್ಜಮೇಯ್ ಪ್ರದೇಶದಲ್ಲಿ ಘರ್ಷಣೆ ಸಂಭವಿಸಿದೆ. ಆರ್ಎಎಫ್ ಸಿಬ್ಬಂದಿ ಪ್ರತಿಭಟನಾಕಾರರ ಮೇಲೆ ಅಶ್ರುವಾಯು ಶೆಲ್ ಮತ್ತು ರಬ್ಬರ್ ಗುಂಡುಗಳನ್ನು ಹಾರಿಸಿದ ಪರಿಣಾಮ 45 ಮಂದಿ ಪ್ರತಿಭಟನಾಕಾರರು, ಹೆಚ್ಚಾಗಿ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಮಣಿಪುರ ಹಿಂಸಾಚಾರದ ವಿಚಾರದಲ್ಲಿ ಕಾಂಗ್ರೆಸ್ ಬಿಜೆಪಿ ಸರ್ಕಾರವನ್ನು ಗುರಿಯಾಗಿಸಿಕೊಂಡಿದ್ದು, ಹಿಂಸಾಚಾರ ಪೀಡಿತ ರಾಜ್ಯಕ್ಕೆ ಪ್ರಧಾನಿ ಏಕೆ ಭೇಟಿ ನೀಡಿಲ್ಲ ಎಂದು ಪ್ರಶ್ನಿಸುತ್ತಿದೆ. ಸ್ಥಳೀಯರು ಮತ್ತು ರಾಪಿಡ್ ಆಕ್ಷನ್ ಫೋರ್ಸ್ (ಆರ್ಎಎಫ್) ಸಿಬ್ಬಂದಿಗಳ ನಡುವಿನ ಘರ್ಷಣೆಯ ನಂತರ ಬುಧವಾರ ಬೆಳಿಗ್ಗೆ ಇಂಫಾಲ್ನಲ್ಲಿ ಪರಿಸ್ಥಿತಿ ಬೂದಿಮುಚ್ಚಿದ ಕೆಂಡದಂತಿತ್ತು.
ಮುಂಬರುವ ಪ್ರತಿಭಟನೆಗಳು ಮತ್ತು ಹಿಂಸಾಚಾರ ಹೆಚ್ಚಾಗುವ ಹಿನ್ನೆಲೆಯಲ್ಲಿ ಮಣಿಪುರ ಪೊಲೀಸರು, ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ಮತ್ತು RAF ಸಿಬ್ಬಂದಿಯನ್ನು ಇಂಫಾಲ್ ಕಣಿವೆಯಾದ್ಯಂತ ಹೆಚ್ಚಾಗಿ ನಿಯೋಜಿಸಲಾಗಿದೆ. ಮಣಿಪುರ ರಾಜ್ಯ ಸರ್ಕಾರವು ಬುಧವಾರ ಶಾಲೆಗಳಿಗೆ ರಜೆ ಘೋಷಿಸಿದ್ದರೂ, ಇಂಫಾಲ್ ಮೂಲದ ಕೆಲವು ಸಂಸ್ಥೆಗಳ ವಿದ್ಯಾರ್ಥಿಗಳು ತಮ್ಮ ಶಾಲೆಗಳಿಗೆ ಹೋಗುವುದಾಗಿ ಪ್ರತಿಜ್ಞೆ ಮಾಡಿದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications