ಕಾಂಗ್ರೆಸ್ ಅಧ್ಯಕ್ಷ ಪಟ್ಟಕ್ಕೆ ರಾಹುಲ್ ಗಾಂಧಿ ಹಿಂದೇಟು ಇದೇ ಕಾರಣಕ್ಕಾ?
2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯಾಗಿದ್ದ ನರೇಂದ್ರ ಮೋದಿ ವಾರಣಾಸಿ ಮತ್ತು ವಡೋದರ ಎರಡೂ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದರು. 2019ರ ಚುನಾವಣೆಯಲ್ಲಿ ವಾರಣಾಸಿಯನ್ನು ಮಾತ್ರ ಮೋದಿ ಆಯ್ಕೆಮಾಡಿಕೊಂಡರು ಮತ್ತು ಭಾರೀ ಮತಗಳ ಅಂತರದಿಂದ ಜಯಶೀಲರಾದರು.
ಇತ್ತ ಕಾಂಗ್ರೆಸ್ ಪಕ್ಷದ ಕಡೆಗೆ ತಿರುಗುವುದಾದರೆ, 2014ರ ಚುನಾವಣೆಯಲ್ಲಿ ಅಮೇಥಿಯಲ್ಲಿ ಮಾತ್ರ ಸ್ಪರ್ಧಿಸಿದ್ದ ರಾಹುಲ್ ಗಾಂಧಿ, ಈ ಬಾರಿ ಅಮೇಥಿ ಜೊತೆ ವಯನಾಡ್ ಕ್ಷೇತ್ರದಲ್ಲೂ ಸ್ಪರ್ಧಿಸಿದ್ದರು. ರಾಹುಲ್ ಕೇರಳದ ಕ್ಷೇತ್ರದಿಂದ ಮಾತ್ರ ಭಾರೀ ಅಂತರದಿಂದ ಗೆಲುವು ಸಾಧಿಸಿದರು.
ಎರಡು ಚುನಾವಣೆಯನ್ನು ಹೋಲಿಸುವುದಾದರೆ, ಅಂದು ಒಂದೇ ಕ್ಷೇತ್ರ ಸಾಕು ಎನ್ನುವ ವಿಶ್ವಾಸದಿಂದ ಇಲೆಕ್ಷನ್ ಎದುರಿಸಿದ್ದ ರಾಹುಲ್ ಗಾಂಧಿಗೆ, ಈ ಬಾರಿ ಸೋಲಿನ ಭೀತಿ ಕಾಡಿತು ಎನ್ನುವುದು ಅತ್ಯಂತ ಸ್ಪಷ್ಟ. ಅವರ ನಿರೀಕ್ಷೆ ಹುಸಿಯಾಗಲಿಲ್ಲ, ತಲತಲಾಂತರದ ತಮ್ಮ ಕರ್ಮಭೂಮಿ ಅಮೇಥಿಯಲ್ಲಿ ಸೋಲು ಅನುಭವಿಸಿದರು.
ರಾಹುಲ್ ಗಾಂಧಿಗೆ ಇದ್ದ ಸೇಫೆಸ್ಟ್ ಕ್ಷೇತ್ರ ಕೇರಳದಲ್ಲಿ ಮಾತ್ರ ಎಂದೇ ವ್ಯಾಖ್ಯಾನಿಸಲಾಗುತ್ತಿತ್ತು ಮತ್ತು ಅದೇ ನಿಜವಾಯಿತು. ಚುನಾವಣೆಯ ಸೋಲಿನ ನಂತರ ರಾಹುಲ್ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಲು ಮುಂದಾಗಿದ್ದದ್ದು ಗೊತ್ತೇ ಇದೆ. ಹಲವು ಒತ್ತಡದ ಹೊರತಾಗಿಯೂ, ರಾಹುಲ್ ಹುದ್ದೆಯಲ್ಲಿ ಮುಂದುವರಿಯಲು ಹಿಂದೇಟು ಹಾಕುತ್ತಲೇ ಇದ್ದಾರೆ.

ಅಮೇಥಿಯಲ್ಲಿನ ಸೋಲು ರಾಹುಲ್ ಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ
ರಾಹುಲ್ ಗಾಂಧಿ ರಾಜೀನಾಮೆಯನ್ನು ಕಾಂಗ್ರೆಸ್ಸಿನವರು ಒಪ್ಪಿಕೊಳ್ಳುವುದಿಲ್ಲ ಎನ್ನುವುದು ಗೊತ್ತಿರುವ ವಿಚಾರ, ಅದರಂತೆಯೇ ನಡೆಯುತ್ತಿದೆ ಕೂಡಾ... ಆದರೆ, ರಾಹುಲ್ ಗಾಂಧಿ ತನ್ನ ನಿರ್ಧಾರದಿಂದ ಹಿಂದಕ್ಕೆ ಸರಿಯುತ್ತಿಲ್ಲ ಎನ್ನುವುದು ಕೂಡಾ ಅಷ್ಟೇ ಸತ್ಯ, ಕಾರಣ ಅಮೇಥಿಯಲ್ಲಿನ ಸೋಲು ಅವರಿಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.

ತನ್ನ ಮತ್ತು ಕುಟುಂಬದ ರಾಜಕೀಯ ಕರ್ಮಭೂಮಿಯನ್ನು ಉಳಿಸಿಕೊಳ್ಳಲಾಗಲಿಲ್ಲ
ತನ್ನ ಮತ್ತು ಕುಟುಂಬದ ರಾಜಕೀಯ ಕರ್ಮಭೂಮಿಯನ್ನು ಉಳಿಸಿಕೊಳ್ಳಲಾಗಲಿಲ್ಲ ಎನ್ನುವ ನೋವು ರಾಹುಲ್ ಗಾಂಧಿಗೆ ಕಾಡುತ್ತಿದೆ ಎನ್ನುವುದು ಅವರ ಪರಮಾಪ್ತ ವಲಯದಲ್ಲಿ ಕೇಳಿ ಬರುತ್ತಿರುವ ಮಾತು. ನೆಹರೂ- ಗಾಂಧಿ ಕುಟುಂಬಕ್ಕೆ ರಾಜಕೀಯ ಕೊಂಡಿಯಂತಿದ್ದ ಅಮೇಥಿಯಲ್ಲೇ ಸೋಲು ಎಂದರೆ ಎಂತಹ ಅವಮಾನ. ಕಾಂಗ್ರೆಸ್ ಅನ್ನು ಮತ್ತೆ ಅಧಿಕಾರಕ್ಕೆ ತರಲಾಗದಿದ್ದದ್ದು ನಂತರದ ಮಾತು, ತಾನೇ ಸೋತೆ ಎಂದರೆ ಆದು ಕೂಡಾ ಅಮೇಥಿಯಲ್ಲಿ!!

ಏನೇ ಮಾಡಿದರೂ, ಮಾಡದಿದ್ದರೂ ಜನತೆ ಕೈಬಿಡುವುದಿಲ್ಲ ಎನ್ನುವ ಅತಿಯಾದ ವಿಶ್ವಾಶ
ಅಮೇಥಿಯಲ್ಲಿನ ಸೋಲಿಗೆ ಕಾರಣ ಯಾರು? ಏನೇ ಮಾಡಿದರೂ, ಮಾಡದಿದ್ದರೂ ತನ್ನನ್ನು ಅಲ್ಲಿನ ಜನತೆ ಕೈಬಿಡುವುದಿಲ್ಲ ಎನ್ನುವ ಅತಿಯಾದ ವಿಶ್ವಾಸವೇ ರಾಹುಲ್ ಗಾಂಧಿ ಸೋಲಿಗೆ ಕಾರಣವಾಯಿತೇ? ಬಿಜೆಪಿಯ ಅಭ್ಯರ್ಥಿ ಸ್ಮೃತಿ ಇರಾನಿ, 2014ರ ಚುನಾವಣೆಯಲ್ಲಿ ರಾಹುಲ್ ಎದುರು ಸೋತ ಕೂಡಲೇ, ಮುಂದಿನ ಚುನಾವಣೆಯನ್ನು ಗೆಲ್ಲಲೇಬೇಕೆಂದು ಅಂದಿನಿಂದಲೇ ಕ್ಷೇತ್ರದ ಮತದಾರರಿಗೆ ಹತ್ತಿರವಾದದ್ದು ರಾಹುಲ್ ಸೋಲಿಗೆ ಕಾರಣವಾಯಿತೇ?

ಅಮೇಥಿ ಸೋಲಿನ ಶಾಕ್ ನಿಂದ ರಾಹುಲ್ ಇನ್ನೂ ಹೊರಬಂದಿಲ್ಲ
ರಾಜಕೀಯದಲ್ಲಿ ಏರಿಳಿತ ಸಾಮಾನ್ಯ, ಆದರೆ ಸ್ಮೃತಿ ಇರಾನಿ ಎದುರು ಅಮೇಥಿ ಸೋಲಿನ ಶಾಕ್ ನಿಂದ ರಾಹುಲ್ ಇನ್ನೂ ಹೊರಬಂದಂತಿಲ್ಲ. ತನ್ನ ರಾಜೀನಾಮೆಯ ನಿರ್ಧಾರದಿಂದ ರಾಹುಲ್ ಹಿಂದಕ್ಕೆ ಸರಿಯುತ್ತಿಲ್ಲ. ನೆಹರೂ - ಗಾಂಧಿ ಕುಟುಂಬದ ಹೊರತಾಗಿ ಕಾಂಗ್ರೆಸ್ ಅಧ್ಯಕ್ಷಗಾದಿಗೆ ಯಾರು ಸೂಕ್ತ ಎನ್ನುವ ಮಾತು ಅಲ್ಲಲ್ಲಿ ಚರ್ಚೆಯ ವಿಷಯವಾಗಿದೆ.

ಕಾಂಗ್ರೆಸ್ ಮುಖಂಡರು ಕನಸು ಮನಸಿನಲ್ಲೂ ನೆನೆಸಿರಕ್ಕಿಲ್ಲ
ಈ ರೀತಿಯ ಪರಿಸ್ಥಿತಿಯನ್ನು ಎಐಸಿಸಿ ಅಧ್ಯಕ್ಷರೇ ಎದುರಿಸಬೇಕಾಗಿ ಬರಬಹುದು ಎಂದು ಕಾಂಗ್ರೆಸ್ ಮುಖಂಡರು ಕನಸು ಮನಸಿನಲ್ಲೂ ನೆನೆಸಿರಲಿಕ್ಕಿಲ್ಲ. ನೆಹರೂ - ಗಾಂಧಿ ಕುಟುಂಬದವರೇ ಅಧ್ಯಕ್ಷಗಾದಿಯಲ್ಲಿ ಬಹುತೇಕ ಇದ್ದಿದ್ದರಿಂದ, ರಾಹುಲ್ , ಸೋನಿಯಾ, ಪ್ರಿಯಾಂಕ ಹೊರತಾಗಿ ಯಾರನ್ನೂ ಕಾಂಗ್ರೆಸ್ ಮುಖಂಡರು ಊಹಿಸುತ್ತಲೂ ಇಲ್ಲ. ಹಾಗಾಗಿಯೇ, ರಾಹುಲ್ ಸೋಲು, ಅವರಂತೆ, ಅವರ ಪಕ್ಷದವರಿಗೂ ತೀವ್ರವಾಗಿ ಕಾಡುತ್ತಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications