Rahul Gandhi: ರಾಹುಲ್ ಗಾಂಧಿ ಯಾವಾಗಲೂ ವೈಟ್ ಟೀ ಶರ್ಟ್ ಧರಿಸೋದು ಯಾಕೆ?
ನವದೆಹಲಿ, ಮೇ. 07 : ಕಳೆದ ವರ್ಷ ಕನ್ಯಾಕುಮಾರಿಯಿಂದ ಕಾರ್ಶಮಿರದವರೆಗೆ ನಡೆದ ಭಾರತ್ ಜೋಡೋ ಯಾತ್ರೆಯಲ್ಲಿ ಹೆಚ್ಚು ಜನರನ್ನು ಆಕರ್ಷಿಸಿದ್ದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಟೀ ಶರ್ಟ್. ಹೌದು.. ಇಡೀ ಯಾತ್ರೆಯುದ್ದಕ್ಕೂ ಅವರು ಧರಿಸಿದ್ದು ಒಂದೇ ತರದ ಟೀ ಶರ್ಟ್ ಅದು ಬಿಳಿ ಬಣ್ಣದ್ದು.
ಯಾತ್ರೆಯ ವಿಷಯದ ಜೊತೆಗೆ ಜೊತೆಗೆ ಹೆಚ್ಚು ಜನರನ್ನು ಕಾಡಿದ ಪ್ರಶ್ನೆ ರಾಹುಲ್ ಗಾಂಧಿ ಏಕೆ ಯಾವಾಗಲೂ ಬಿಳಿ ಬಣ್ಣದ ಟೀ ಶರ್ಟ್ ಧರಿಸುತ್ತಾರೆ ಎಂಬುದು. ಭಾರತ್ ಜೋಡೋ ಯಾತ್ರೆ ಮುಗಿದರೂ ಕೂಡ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವೈಟ್ ಟೀ ಶರ್ಟ್ ಧರಿಸುವುದನ್ನು ಮುಂದುವರೆಸಿದ್ದಾರೆ. ಲೋಕಸಭಾ ಚುನಾವಣೆಯ ಪ್ರಚಾರದಲ್ಲಿಯೂ ಅವರು ಈ ಟೀ ಶರ್ಟ್ ಧರಿಸಿಯೇ ಕಾಣಿಸಿಕೊಂಡಿದ್ದಾರೆ. ಸದ್ಯ ವರ್ಷದ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಹೌದು... ರಾಹುಲ್ ಗಾಂಧಿ ಯಾಕೆ ವೈಟ್ ಟೀ ಶರ್ಟ್ ಧರಿಸುತ್ತಾರೆ ಗೊತ್ತಾ? ಇಲ್ಲಿದೆ ನೋಡಿ ಉತ್ತರ.

ಬಟ್ಟೆ ಬಗ್ಗೆ ಹೆಚ್ಚು ಯೋಚಿಸುವುದಿಲ್ಲ ಅಂತೆ ರಾಹುಲ್ ಗಾಂಧಿ!
ತಾವು ಯಾಕೆ ಯಾವಾಗಲೂ ಬಿಳಿ ಟೀ ಶರ್ಟ್ ಧರಿಸುತ್ತಾರೆ ಎಂಬ ಬಗ್ಗೆ ಅವರೆ ಮಾಹಿತಿ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಈ ಬಿಳಿ ಬಣ್ಣದ ಬಟ್ಟೆ 'ಪಾರದರ್ಶಕತೆ' ಮತ್ತು 'ಸರಳತೆ' ಯನ್ನು ಸೂಚಿಸುತ್ತದೆ ಎಂದಿದ್ದಾರೆ. ಜೊತೆಗೆ ತಾವು ಬಟ್ಟೆಗಳ ಬಗ್ಗೆ ಹೆಚ್ಚು ಯೋಚಿಸುವುದಿಲ್ಲ. ನಾನು ಸರಳವಾಗಿರಲು ಬಯಸುತ್ತೇನೆ ಎಂದು ತಿಳಿಸಿದ್ದಾರೆ. ಕಾಂಗ್ರೆಸ್ ಈ ವಿಡಿಯೋಗಳನ್ನು ತನ್ನ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿದೆ.
ಕನ್ಯಾಕುಮಾರಿ ಟು ಕಾಶ್ಮೀರ ನಡೆದ ಭಾರತ್ ಜೋಡೋ ಯಾತ್ರೆಯಿಂದ ರಾಹುಲ್ ಬಿಳಿ ಟೀ ಶರ್ಟ್ ಧರಿಸಿಸಲು ಆರಂಭಿಸಿದ್ದಾರೆ. ರಾಹುಲ್ ಗಾಂಧಿ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನಕ್ಕೆ ಸಿದ್ಧವಾಗುತ್ತಿದ್ದ ಕರ್ನಾಟಕಕ್ಕೆ ಬಂದಿದ್ದ ವೇಳೆ ಈ ವಿಡಿಯೋ ಶೂಟ್ ಮಾಡಲಾಗಿದೆ. 'ಕರ್ನಾಟಕದಲ್ಲಿ ಒಂದು ದಿನದ ಪ್ರಚಾರ' ಎಂಬ ಶೀರ್ಷಿಕೆಯ ವಿಡಿಯೋ ಇದಾಗಿದೆ.

ಕೆಲವು ರ್ಯಾಪಿಡ್ ಫೈರ್ ಪ್ರಶ್ನೆಗಳಿಗೆ ರಾಹುಲ್ ಗಾಂಧಿ ಉತ್ತರಿಸಿದ್ದಾರೆ. ಜೊತೆಗೆ ಪ್ರಶ್ನೆಗಳನ್ನು ಕೇಳಿದ್ದಾರೆ. ಈ ವೇಳೆ ಅವರ ಜೊತೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಇದ್ದಾರೆ. ಪ್ರಚಾರದ ಅತ್ಯುತ್ತಮ ಭಾಗ ಯಾವುದು ಎಂಬ ಬಗ್ಗೆ ಕೇಳಿದಾಗ, ' ಯಾವಾಗ ಕೊನೆಗೊಳ್ಳುತ್ತದೆಯೋ ಅದು' ಎಂದು ಫಟ್ ಎಂದು ಉತ್ತರಿಸುತ್ತಾರೆ.
Conversation with Shri Mallikarjun @kharge & Shri @RahulGandhi on the go! pic.twitter.com/tH5wWo8WMc
— Siddaramaiah (@siddaramaiah) May 5, 2024
"ನನ್ನ ದೃಷ್ಟಿಯಲ್ಲಿ, ಸಿದ್ಧಾಂತದ ಸ್ಪಷ್ಟ ತಿಳುವಳಿಕೆಯಿಲ್ಲದೆ ನೀವು ಅಧಿಕಾರದ ಕಡೆಗೆ ದೊಡ್ಡ ಸಂಘಟನೆಯಾಗಿ ಹೋಗಲು ಸಾಧ್ಯವಿಲ್ಲ. ಬಡವರ ಪರ, ಮಹಿಳಾ ಪರ ಎಲ್ಲರನ್ನೂ ಸಮಾನವಾಗಿ ಪರಿಗಣಿಸುವ ನಮ್ಮ ಸಿದ್ಧಾಂತವನ್ನು ನಾವು ಜನರಿಗೆ ಮನವರಿಕೆ ಮಾಡಬೇಕು. ಆದ್ದರಿಂದ ಸಾಂಸ್ಥಿಕ ಮಟ್ಟದಲ್ಲಿ, ರಾಷ್ಟ್ರೀಯ ಮಟ್ಟದಲ್ಲಿ ಹೋರಾಟವು ಯಾವಾಗಲೂ ಸಿದ್ಧಾಂತದ ಬಗ್ಗೆ ಇರುತ್ತದೆ" ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ವಿಡಿಯೋದಲ್ಲಿ ಅವರು ತಮ್ಮ ಭಾರತ್ ಜೋಡೋ ಯಾತ್ರೆಯ ಬಗ್ಗೆಯೂ ಮಾತನಾಡಿದ್ದಾರೆ. ಇದು ಪ್ರಚಾರವಲ್ಲ ಆದರೆ, ಇನ್ನೂ ಹೆಚ್ಚಿನ ಕಠಿಣ ಕೆಲಸದಲ್ಲಿ ತೊಡಗಿಸಿಕೊಂಡಿದ್ದೇವೆ ಎಂದು ಹೇಳಿದ್ದಾರೆ. ಇದೇ ವೇಳೇ ಪ್ರಚಾರದಲ್ಲಿ ಯಾವುದು ಇಷ್ಟ ಅಥವಾ ಇಷ್ಟವಿಲ್ಲ ಎಂದು ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಉತ್ತರವಾಗಿ, "ಕೆಟ್ಟದ್ದೇನೂ ಇಲ್ಲ. ದೇಶಕ್ಕಾಗಿ ನಾವು ಇದನ್ನು ಮಾಡುವುದರಿಂದ ಒಳ್ಳೆಯದು. ದೇಶವನ್ನು ಹಾಳು ಮಾಡುವವರನ್ನು ತಡೆಯುವ ಕೆಲಸ ಮಾಡುವಾಗ, ನಾವು ದೇಶಕ್ಕಾಗಿ ಏನಾದರೂ ಮಾಡುತ್ತಿದ್ದೇವೆ ಎಂದು ನಾವು ಭಾವಿಸುತ್ತೇವೆ" ಎಂದಿದ್ದಾರೆ.
-
ಮೂರು ವರ್ಷ ಮುಗಿದಿದೆ, ಸಚಿವ ಸಂಪುಟ ಬದಲಿಸಿ: ಹೈಕಮಾಂಡ್ಗೆ ಮನವಿ ಸಲ್ಲಿಸಲು ಟಿ.ಬಿ.ಜಯಚಂದ್ರ ಸಜ್ಜು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ












Click it and Unblock the Notifications