ಕೊರೊನಾ 2ನೇ ಅಲೆಯಲ್ಲಿ ಪಾಸಿಟಿವಿಟಿ ದರ ಹೆಚ್ಚಲು ಕಾರಣವೇನು?
ನವದೆಹಲಿ, ಏಪ್ರಿಲ್ 18: ದೇಶದಲ್ಲಿ ಕೊರೊನಾ ಎರಡನೇ ಅಲೆಯು ಜನರನ್ನು ನಿದ್ದೆಗೆಡಿಸಿದೆ, ಎರಡನೇ ಅಲೆಯ ಪ್ರಮುಖ ಅಂಶವೆಂದರೆ ಈ ಬಾರಿ ಕೊರೊನಾವೈರಸ್ ಪಾಸಿಟಿವಿಟಿ ದರ ಪ್ರಮಾಣ ಹೆಚ್ಚಿದೆ.
ಕೊರೊನಾ ಸೋಂಕಿನ ಪರೀಕ್ಷೆಗೆ ಒಳಗಾಗುತ್ತಿರುವ ಮಂದಿಯನ್ನು ಗಮನಿಸಿದರೆ ಹಿಂದೆಂದಿಗಿಂತಲೂ ಪ್ರಮಾಣ ಹೆಚ್ಚಾಗಿದೆ.ಕಳೆದ ವರ್ಷ ಅತಿ ಹೆಚ್ಚು ಮಂದಿಗೆ ಕೊರೊನಾ ಪರೀಕ್ಷೆ ಮಾಡಲಾಗುತ್ತಿತ್ತು, ಅದರಲ್ಲಿ ಕೆಲವೇ ಕೆಲವು ಮಂದಿಗೆ ಮಾತ್ರ ಕೊರೊನಾ ಸೋಂಕು ದೃಢಪಡುತ್ತಿತ್ತು. ಆದರೆ ಈ ಬಾರಿ ಕೊರೊನಾ ಪರೀಕ್ಷೆ ಮಾಡಿಸಿದ ಬಹುತೇಕರಿಗೆ ಸೋಂಕು ಇರುವುದು ಖಚಿತವಾಗುತ್ತಿದೆ.
ಅತಿ ವೇಗವಾಗಿ ಕೊರೊನಾ ಸೋಂಕು ಹರಡುತ್ತಿರುವುದು ಪಾಸಿಟಿವಿಟಿ ದರ ಏರಿಕೆಗೆ ಕಾರಣವಾಗಿದೆ. ಕಳೆದ ಒಂದು ವಾರದಲ್ಲಿ ಶೇ.13.5ಕ್ಕಿಂತ ಹೆಚ್ಚು ಪರೀಕ್ಷೆಗಳು ನಡೆದಿವೆ, ಪರೀಕ್ಷೆಗಳನ್ನು ಹೆಚ್ಚಿಸಿಲ್ಲ, ಪಾಸಿಟಿವಿಟಿ ದರ ಹೆಚ್ಚಾಗಿದೆ, ಪಾಸಿಟಿವಿಟಿ ದರವು ಸಮುದಾಯದಲ್ಲಿ ರೋಗ ಹರಡುವಿಕೆಯ ಅಳತೆ ಎಂದೇ ಹೇಳಬಹುದು.

ಅತಿ ಹೆಚ್ಚು ಪಾಸಿಟಿವಿಟಿ ದರವು ಕಳೆದ ಎರಡು ತಿಂಗಳುಗಳಲ್ಲಿ ವೈರಸ್ ಹೆಚ್ಚು ವೇಗವಾಗಿ ಹರಡುತ್ತಿದೆ ಎಂಬುದನ್ನು ಸಾಬೀತುಪಡಿಸುತ್ತದೆ, ಕಳೆದ ಬಾರಿಗೆ ಹೋಲಿಸಿದರೆ ಕೊರೊನಾ ಸೋಂಕಿತರ ಪ್ರಮಾಣ ಹೆಚ್ಚಾಗಿದೆ.
ಮೊದಲ ಕೊರೊನಾ ಅಲೆಯ ಸಂದರ್ಭದಲ್ಲಿ ಕಳೆದ ವರ್ಷ ಜುಲೈ ಕೊನೆಯ ವಾರದಲ್ಲಿ ಪಾಸಿಟಿವಿಟಿ ಪ್ರಮಾಣವು ಉತ್ತುಂಗಕ್ಕೇರಿತ್ತು. ಹಾಗೆಯೇ ಆಗಸ್ಟ್, ಸೆಪ್ಟೆಂಬರ್ನಲ್ಲಿ ಪಾಸಿಟಿವಿಟಿ ಪ್ರಮಾಣ ಹೆಚ್ಚುತ್ತಲೇ ಇದ್ದರೂ ಕೊರೊನಾ ಸೋಂಕಿತರ ಪ್ರಮಾಣ ಕ್ರಮೇಣವಾಗಿ ಕುಸಿದಿತ್ತು.
ಕಳೆದ ಜುಲೈನಲ್ಲಿ ಭಾರತವು ನಿತ್ಯ 5 ಲಕ್ಷಕ್ಕೂ ಹೆಚ್ಚು ಪರೀಕ್ಷೆಗಳನ್ನು ನಡೆಸುತ್ತಿತ್ತು, ತಿಂಗಳ ಅಂತ್ಯದ ವೇಳೆಗೆ ಪರೀಕ್ಷೆಗಳ ಸಂಖ್ಯೆ ಕ್ರಮೇಣವಾಗಿ ಏರಿಕೆಯಾಗತೊಡಗಿತು. ಆಗಸ್ಟ್ ಮೂರನೇ ವಾರದ ವೇಳೆಗೆ 10 ಲಕ್ಷವನ್ನು ತಲುಪಿತ್ತು.
ಸೆಪ್ಟೆಂಬರ್ನಲ್ಲಿ ಕಂಡುಬಂದಿದ್ದ ಕೊರೊನಾ ಪ್ರಕರಣಗಳಿಗಿಂತ ಈಗಿನ ಪ್ರಕರಣಗಳು ಸುಮಾರು 2.5 ಪಟ್ಟು ಹೆಚ್ಚಿವೆ. ಹಾಗೆಂದ ಮಾತ್ರ ಕೊರೊನಾ ಪರೀಕ್ಷೆಯನ್ನು ಹೆಚ್ಚಿಸಿಲ್ಲ ಅದು ಸ್ಥಿರವಾಗಿಯೇ ಇದೆ ಆದರೆ ಕೊರೊನಾ ಸೋಂಕಿತರ ಪ್ರಮಾಣದಲ್ಲಿ ಹೆಚ್ಚಳ ಕಂಡುಬಂದಿದೆ.
ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಪಾಸಿಟಿವ್ ದರವಿದೆ, ಶೇ.15ಕ್ಕಿಂತಲೂ ಹೆಚ್ಚಿದೆ, ನಿತ್ಯ 14 ರಿಂದ 15 ಲಕ್ಷ ಮಂದಿಗೆ ಕೊರೊನಾ ಪರೀಕ್ಷೆ ಮಾಡಲಾಗುತ್ತಿದೆ. ದೆಹಲಿಯಲ್ಲಿ ನಿತ್ಯ 1 ಲಕ್ಷ ಪರೀಕ್ಷೆಗಳನ್ನು ಮಾಡಲಾಗುತ್ತಿದೆ.
-
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ: 13,712 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ ಎಸ್ಐಟಿ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ












Click it and Unblock the Notifications