ತಲ್ವಾರ್ ದಂಪತಿ ಖುಲಾಸೆಗೊಳ್ಳಲು ಕಾರಣವಾದ ಅಂಶಗಳೇನು?
ನವದೆಹಲಿ, ಅಕ್ಟೋಬರ್ 12: ವಿದ್ಯಾರ್ಥಿನಿ ಆರುಷಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರುಷಿ ಅಪ್ಪ-ಅಮ್ಮ ಸಲ್ಲಿಸಿದ್ದ ಮೇಲ್ಮನವಿಯನ್ನು ಪುರಸ್ಕರಿಸಿದ ಅಲಹಾಬಾದ್ ಹೈಕೋರ್ಟ್ ಗುರುವಾರದಂದು ಆರುಷಿ ತಂದೆ ತಾಯಿಯನ್ನು ಕೇಸಿನಿಂದ ಖುಲಾಸೆಗೊಳಿಸಿದೆ.
ಆರುಷಿ ಹಾಗೂ ಹೇಮರಾಜ್ ಕೊಲೆ ಮಾಡಿದ ಆರೋಪದಡಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಆರುಷಿ ತಂದೆ ರಾಜೇಶ್ ತಲ್ವಾರ್ ಹಾಗೂ ತಾಯಿ ನೂಪುರ್ ತಲ್ವಾರ್ ಅವರನ್ನು ದೋಷಮುಕ್ತಗೊಳಿಸಿ ಹೈಕೋರ್ಟ್ ಆದೇಶಿಸಿದೆ.
ಸಿಬಿಐ ರಾಜೇಶ್ ಮತ್ತು ನೂಪುರ್ ದಂಪತಿಯೇ ತಮ್ಮ ಮಗಳನ್ನು ಕೊಲೆ ಮಾಡಿದ್ದಾರೆ ಎಂಬುದನ್ನು ಸಾಬೀತುಪಡಿಸಲು ಸಿಬಿಐ ವಿಫಲವಾಗಿದೆ ಎಂದು ಹೈಕೋರ್ಟ್ ಹೇಳಿದೆ. ಈ ಮೂಲಕ ಅಲಹಾಬಾದ್ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳಾದ ಬಿ.ಕೆ. ನಾರಾಯಣ್ ಹಾಗೂ ಎ.ಕೆ. ಮಿಶ್ರಾ ನೇತೃತ್ವದ ಪೀಠ ಸಿಬಿಐ ಕೋರ್ಟ್ ನೀಡಿದ್ದ ತೀರ್ಪನ್ನು ರದ್ದುಗೊಳಿಸಿದೆ.
ಮೇ 16, 2008ರಂದು ಜಲವಾಯು ವಿಹಾರದಲ್ಲಿರೋ ಆರುಷಿಗಳ ನಿವಾಸದಲ್ಲಿ ಮೇಲ್ಮಹಡಿಯಲ್ಲಿ ಆರುಷಿ ಶವವಾಗಿ ಪತ್ತೆಯಾಗಿದ್ದಳು. ಆರಂಭದಲ್ಲಿ ಮನೆಗೆಲಸದಾಳು ಹೇಮರಾಜ್ ಮೇಲೆ ಸಂಶಯ ಮೂಡಿತ್ತು.
ಆರುಷಿ ಕೊಲೆಯಾದ ಮರುದಿನವೇ ಹೇಮರಾಜ್ ಶವವೂ ಮನೆಯ ತಾರಸಿಯಲ್ಲಿ ಪತ್ತೆಯಾಗಿತ್ತು. 2013ರಲ್ಲಿ ಸಿಬಿಐ ವಿಶೇಷ ನ್ಯಾಯಾಲಯ ರಾಜೇಶ್ ತಲ್ವಾರ್ ದಂಪತಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು.

ಅವಳಿ ಕೊಲೆ ಪ್ರಕರಣದಲ್ಲಿ ಸಾಕ್ಷ್ಯ ಇಲ್ಲ
ಅವಳಿ ಕೊಲೆ ಪ್ರಕರಣದಲ್ಲಿ 'ನಮ್ಮ ಕಕ್ಷಿದಾರರ ವಿರುದ್ಧ ಯಾವುದೇ ವೈಜ್ಞಾನಿಕ ಸಾಕ್ಷ್ಯಗಳು ಇಲ್ಲದ ಕಾರಣ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಬಾರದು.ಈ ತೀರ್ಪಿನ ವಿರುದ್ಧ ಹೈಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಲಾಗುವುದು ಎಂದು ನೂಪುರ್ ಪರ ವಕೀಲರು ಮಾಡಿದ ವಾದವನ್ನು ಅಲಹಾಬಾದ್ ಹೈಕೋರ್ಟ್ ಪುರಸ್ಕರ್ಇಸಿತು.

ಸಿಬಿಐ ವಾದಕ್ಕೆ ಯಾವುದೇ ಸಾಕ್ಷಿ ಸಿಗಲಿಲ್ಲ
2008ರಲ್ಲಿ ಮೇ 15ರಂದು ರಾತ್ರಿ 14 ವರ್ಷದ ಮಗಳಾದ ಆರುಷಿ ಹಾಗೂ ಮನೆಗೆಲಸ ಹುಡುಗ ಹೇಮರಾಜ್ ಇಬ್ಬರನ್ನು ಮೆಡಿಕಲ್ ಪರಿಕರ ಬಳಸಿ ವೈದ್ಯ ರಾಜೇಶ್ ತಲ್ವಾರ್ ಹಾಗೂ ನೂಪುರ್ ದಂಪತಿ ಕೊಲೆಗೈದಿದ್ದಾರೆ ಎಂಬ ವಾದಕ್ಕೆ ಯಾವುದೇ ಸಾಕ್ಷಿ ಸಿಗಲಿಲ್ಲ. ಸಾಂದರ್ಭಿಕ ಸಾಕ್ಷಿಗಳ ಮೇಲೆ ಆರೋಪ ಸಾಬೀತು ಪಡಿಸಲು ಸಾಧ್ಯವಿಲ್ಲ ಎಂದು ಪರಿಗಣಿಸಲಾಗಿದೆ.

ಅಪರೂಪದಲ್ಲಿ ಅಪರೂಪದ ಪ್ರಕರಣ
ಇದು ಅಪರೂಪದಲ್ಲಿ ಅಪರೂಪದ ಪ್ರಕರಣ ಎಂಬ ಲೇಬಲ್ ಕಳಚುವಂತೆ ನೋಡಿಕೊಳ್ಳುವುದು ವಕೀಲರ ಸವಾಲಾಗಿತ್ತು.ಇದು ಪೂರ್ವನಿಯೋಜಿತ ಕೊಲೆಯಲ್ಲ, ಇದು ಅಮಾನುಷ ಹತ್ಯೆ ಅಲ್ಲ ಎಂದು ಸಿಬಿಐ ತಂಡವೇ ಹೇಳಿಕೆ ನೀಡಿತ್ತು.

ಸಂಶಯದ ಲಾಭ ತಲ್ವಾರ್ ದಂಪತಿಗೆ ಸಿಕ್ಕಿದೆ
ಘಟನೆ ನಡೆದ ದಿನದಂದು ರಾಜೇಶ್ ಇದ್ದ ಪರಿಸ್ಥಿತಿ ಕುಡಿದಿದ್ದರೆ ಇಲ್ಲವೇ ಎಂಬುದರ ಬಗ್ಗೆ ಸಾಕ್ಷಿ ಸಿಕ್ಕಿಲ್ಲ. ತಪ್ಪಿತಸ್ಥರಿಗೆ ಗಲ್ಲುಶಿಕ್ಷೆ ವಿಧಿಸಿ ಎಂದು ಮನವಿ ಸಲ್ಲಿಸಿರುವ ಸಿಬಿಐ ತನ್ನ ವಾದ ಪುಷ್ಟಿಕರಿಸಲು ಸೂಕ್ತ ಸಾಕ್ಷಿ ಒದಗಿಸುವಲ್ಲಿ ವಿಫಲವಾಗಿತ್ತು. ಸಂಶಯದ ಲಾಭ ತಲ್ವಾರ್ ದಂಪತಿಗೆ ಸಿಕ್ಕಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications