ಗಂಡ ಅದಕ್ಕೆ ಅಸಮರ್ಥ ಎಂದು ಮದುವೆಯಾದ 3ದಿನದಲ್ಲಿ ಡಿವೋರ್ಸ್ ಕೇಳಿದ ಪತ್ನಿ!
ದೇಶದಲ್ಲಿ ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ ಡಿವೋರ್ಸ್ ಪ್ರಕರಣಗಳು ಹೆಚ್ಚಾಗುತ್ತಿವೆ. ಆದರೆ ಮದುವೆಯಾಗಿ ಮೊದಲ ರಾತ್ರಿಯಲ್ಲೇ ವಿಚಿತ್ರವಾದ ಘಟನೆಯೊಂದು ಸಂಭವಿಸಿದ್ದು. ಮದುವೆಯಾದ ಮೂರೇ ದಿನಕ್ಕೆ ಪತಿಯಿಂದ ಡಿವೋರ್ಸ್ ಕೇಳಿದ್ದಾರೆ. ಗಂಡನ ಆ ಲೋಪವೇ ಇದಕ್ಕೆ ಕಾರಣ ಎಂದು ನವವಿವಾಹಿತ ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಹೌದು ಇಲ್ಲಿನ ಗೋರಖ್ಪುರದ ನವವಿವಾಹಿತ ಮಹಿಳೆಯೊಬ್ಬರು ಮದುವೆಯಾದ ಕೇವಲ ಮೂರು ದಿನಗಳಲ್ಲೇ ವಿಚ್ಛೇದನ ಕೊಡುವಂತೆ ಕೇಳಿದ್ದಾರೆ. ಮದುವೆಯಾದ ಮೊದಲ ರಾತ್ರಿಯಲ್ಲೇ ಅವರ ಪತಿ ದೈಹಿಕವಾಗಿ ದುರ್ಬಲವಾಗಿದ್ದು, ಲೈಂಗಿಕ ಸಂಬಂಧ ಹೊಂದಲು ಅಸಮರ್ಥನಾಗಿದ್ದೇನೆ ಎಂದು ಹೇಳಿದ್ದಾರೆ ಎಂದು ಒಪ್ಪಿಕೊಂಡಿರುವುದಾಗಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಹೆಣ್ಣಿನ ಕಡೆಯವರು ಆ ವ್ಯಕ್ತಿ (ನವ ವಿವಾಹಿತ) ತಂದೆಯಾಗಲು ಸಾಧ್ಯವಿಲ್ಲ ಎಂದು ಮೆಡಿಕಲ್ ರಿಪೋರ್ಟ್ ಸಹ ಸಲ್ಲಿಸಿದ್ದಾರೆ. ಅಲ್ಲದೇ ತಂದೆಯಾಗಲು ಸಾಧ್ಯವಾಗದೆ ಇರುವುದಕ್ಕೆ ಹಾಗೂ ಲೈಂಗಿಕ ಸಾಮರ್ಥ್ಯ ಇಲ್ಲ ಎನ್ನುವ ಕಾರಣಕ್ಕೆ ಡಿವೋರ್ಸ್ ತೆಗೆದುಕೊಳ್ಳುವುದಕ್ಕೆ ನಿರ್ಧರಿಸಲಾಗಿದೆ.

ಇದರೊಂದಿಗೆ ಮದುವೆ ಸಂದರ್ಭದಲ್ಲಿ ನೀಡಲಾಗಿದ್ದ ಉಡುಗೊರೆಗಳು ಹಾಗೂ ಮದುವೆಗೆ ಖರ್ಚು ಮಾಡಿರುವ ಹಣವನ್ನು ಹಿಂದಿರುಗಿಸುವಂತೆಯೂ ಹೇಳಲಾಗಿದೆ. ಮಹಿಳೆ ಕಳುಹಿಸಿದ ಲೀಗಲ್ ನೋಟಿಸ್ನಲ್ಲಿ, ನಾನು ದೈಹಿಕವಾಗಿ ಅಸಮರ್ಥನಾಗಿರುವ ವ್ಯಕ್ತಿಯೊಂದಿಗೆ ನನ್ನ ಜೀವನ ನಡೆಸಲು ಸಾಧ್ಯವಿಲ್ಲ. ಮದುವೆಯಾದ ಮೇಲೆ ಮೊದಲ ರಾತ್ರಿಯೇ ಅವರು ನನಗೆ ವಿಷಯ ಹೇಳಿದಾಗ ನನಗೆ ತೀವ್ರ ಆಘಾತವಾಯಿತು ಎಂದು ಬರೆದುಕೊಂಡಿದ್ದಾರೆ. 25 ವರ್ಷದ ವರ ಗೋರಖ್ಪುರ ಕೈಗಾರಿಕಾ ಅಭಿವೃದ್ಧಿ ಪ್ರಾಧಿಕಾರದ ಕೈಗಾರಿಕಾ ಘಟಕದಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಾರೆ ಎನ್ನಲಾಗಿದೆ.
ದಂಪತಿಗಳು ನವೆಂಬರ್ 28 ರಂದು ವಿವಾಹವಾಗಿದ್ದಾರೆ. ಡಿಸೆಂಬರ್ 1 ರಂದು ವಧುವಿನ ತಂದೆ ಅತ್ತೆಯ ಮನೆಗೆ ಸಾಂಪ್ರದಾಯಿಕ ಆಚರಣೆ(ಮೊದಲ ರಾತ್ರಿ)ಗಾಗಿ ಬಂದಾಗ ಈ ವಿಷಯ ಬೆಳಕಿಗೆ ಬಂದಿದೆ. ಲೈಂಗಿಕ ಸಂತೋಷ ನೀಡುವುದಕ್ಕೆ ನಾನು ಅಸಮರ್ಥ ಅಥವಾ ಅರ್ಹನಾಗಿಲ್ಲ ಎನ್ನುವುದನ್ನು ಗಂಡು ಒಪ್ಪಿಕೊಂಡಿರುವುದಾಗಿ ಹೇಳಿದ್ದಾರೆ. ಡಿಸೆಂಬರ್ 3 ರಂದು ಬೆಲಿಯಾಪರ್ನಲ್ಲಿರುವ ಸಂಬಂಧಿಕರ ಮನೆಯಲ್ಲಿ ಎರಡೂ ಕುಟುಂಬಗಳು ಸೇರಿ ಈ ವಿಚಾರದ ಬಗ್ಗೆ ಚರ್ಚೆ ಮಾಡಿವೆ. ಮದುವೆಗೂ ಮುಂಚೆ ಗಂಡಿನ ಲೋಪಗಳನ್ನು / ವೈದ್ಯಕೀಯ ಸಮಸ್ಯೆಯನ್ನು ಉದ್ದೇಶ ಪೂರ್ವಕವಾಗಿ ಮರೆ ಮಾಚಲಾಗಿದೆ ಎಂದು ಹುಡುಗಿಯ ಕಡೆಯವರು ಆರೋಪ ಮಾಡಿದ್ದಾರೆ.
ಇದು ಎರಡನೇ ವಿವಾಹ: ಅಲ್ಲದೇ ಇದು ಆ ಹುಡುಗನಿಗೆ ಎರಡನೇ ಮದುವೆಯಾಗಿದೆ. ಮೊದಲನೇ ಬಾರಿ ಮದುವೆಯಾದಾಗ ಹುಡುಗಿ, ಹುಡುಗ ಲೈಂಗಿಕ ಪ್ರಕ್ರಿಯೆ ನಡೆಸುವುದಕ್ಕೆ ಅರ್ಹನಲ್ಲ ಎನ್ನುವುದು ತಿಳಿಯುತ್ತಿದ್ದಂತೆಯೇ ಒಂದು ತಿಂಗಳ ಅವಧಿಯಲ್ಲೇ ಗಂಡನನ್ನು ಬಿಟ್ಟು ಹೋಗಿದ್ದರು ಎಂದು ಹೇಳಲಾಗಿದೆ.
-
ಯುಗಾದಿ ಹಬ್ಬ - ಶಿವರಾತ್ರಿಯಂದು ನಾನು ಮಾಂಸ ತಿಂತಿನಿ, ಅದು ನನ್ನಿಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Foundation of IT ಆಯ್ಕೆ ವೈರಲ್: ಭಾಷಾ ಸಮಾನತೆಗೆ ದಕ್ಷಿಣ ಭಾರತೀಯರ ಪ್ರಶ್ನೆ, ನಾರ್ಥಿ ಮಾರ್ಕ್ಸ್ ಕಾರ್ಡ್ Viral Post -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ












Click it and Unblock the Notifications