ಊಟ ಬಡಿಸಲು ತಡಮಾಡಿದ ಪತ್ನಿಯನ್ನು ಗುಂಡಿಕ್ಕಿ ಕೊಂದ ಬಹದ್ದೂರ್ ಗಂಡ
ಗಾಜಿಯಾಬಾದ್ (ಉತ್ತರಪ್ರದೇಶ), ಜುಲೈ 10 : ಊಟ ಬಡಿಸಲು ತಡಮಾಡಿದ ಪತ್ನಿಯ ಮೇಲೆ ಪತಿ ಮಹಾಶಯನೊಬ್ಬ ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಗಾಜಿಯಾಬಾದ್ ನಲ್ಲಿ ಶನಿವಾರ ರಾತ್ರಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
55 ವರ್ಷದ ಸುನೈನಾ ಎನ್ನುವರನ್ನು ಗುಂಡಿಕ್ಕಿ ಕೊಂದ ಪತಿ ಅಶೋಕ್ ಕುಮಾರ್ ನನ್ನು (60) ಪೊಲೀಸರು ಬಂಧಿಸಿದ್ದಾರೆ. ಟ್ರಕ್ ಚಾಲಕನಾಗಿರುವ ಅಶೋಕ್ ಶನಿವಾರ ರಾತ್ರಿ ಮನೆಗೆ ಬಂದ ಬಳಿಕ ಮದ್ಯಪಾನ ಮಾಡಿ ರಾತ್ರಿ 11 ಗಂಟೆ ಸುಮಾರಿಗೆ ಊಟ ಬಡಿಸುವಂತೆ ಪತ್ನಿಯನ್ನು ಕೇಳಿದ್ದಾನೆ. ಈ ವೇಳೆ ಊಟ ಬಡಿಸಲು ತಡ ಮಾಡಿದ ಕಾರಣಕ್ಕೆ ಪತ್ನಿಯೊಂದಿಗೆ ಆತ ಜಗಳ ತೆಗೆದಿದು ಬಳಿಕ ತನ್ನ ಬಳಿಯಿದ್ದ ಪಿಸ್ತೂಲ್ ನಿಂದ ಸುನೈನಾ ಅವರ ತಲೆಗೆ ಗುಂಡು ಹಾರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ತಲೆಗೆ ಗುಂಡು ಹೊಕ್ಕ ಸುನೈನಾ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ, ಅವರು ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಈ ಘಟನೆ ನಡೆದ ವೇಳೆ ಮನೆಯಲ್ಲಿ ಅಶೋಕ್ ಪುತ್ರ ರಿಂಕು, ರಿಂಕು ಪತ್ನಿ ಮತ್ತು ಮಕ್ಕಳು ಮನೆಯಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
'ಅಪ್ಪ-ಅಮ್ಮ ಜಗಳವಾಡುತ್ತಿದ್ದ ವೇಳೆ ನನ್ನ ಮಕ್ಕಳು ಮತ್ತೊಂದು ಕೋಣೆಯಲ್ಲಿ ಮಲಗಿದ್ದರು. ಕೈಯಲ್ಲಿ ಪಿಸ್ತೂಲ್ ಹಿಡಿದು ಅಮ್ಮನನ್ನು ಬೆದರಿಸುತ್ತಿದ್ದ ಅಪ್ಪನನ್ನು ಸಮಾಧಾನ ಮಾಡಲು ಪ್ರಯತ್ನಿಸಿದೆವು. ಆದರೆ, ನೋಡನೋಡುತ್ತಿದ್ದಂತೆ ಅಪ್ಪ ಅಮ್ಮನ ತಲೆಗೆ ಗುಂಡು ಹಾರಿಸಿದ' ಎಂದು ರಿಂಕು ಪೊಲೀಸರಿಗೆ ತಿಳಿಸಿದ್ದಾರೆ.
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications