ಮಹಿಳೆ ಕೆಲಸಕ್ಕೆ ಹೋಗಲು ಬಯಸುವುದು ಕ್ರೌರ್ಯವಲ್ಲ: ಪತಿಯ ವಿಚ್ಛೇದನ ಅರ್ಜಿ ವಜಾ
ಮುಂಬೈ, ಅಕ್ಟೋಬರ್ 6: ಸಂವಿಧಾನದ ಪ್ರಕಾರ ಮಹಿಳೆಗೆ ಬಲವಂತವಾಗಿ ಮಗುವಿಗೆ ಜನ್ಮ ನೀಡುವಂತಿಲ್ಲ ಎಂದು ಬಾಂಬೆ ಹೈಕೋರ್ಟ್ ಹೇಳಿದೆ. ವಿವಾಹಿತ ಮಹಿಳೆಯು ಗರ್ಭಧಾರಣೆಯನ್ನು ಮುಂದುವರಿಸಬೇಕೆ ಅಥವಾ ಬೇಡವೇ ಎಂಬ ನಿರ್ಧಾರವು ಮಹಿಳೆಯ ಸಂಪೂರ್ಣ ಹಕ್ಕಾಗಿರುತ್ತದೆ ಹಾಗೂ ಪತ್ನಿಯು ತಾನು ಕೆಲಸಕ್ಕೆ ಹೋಗುವ ಇಚ್ಛೆಯನ್ನು ವ್ಯಕ್ತಪಡಿಸಿದರೆ ಅದು ಹಿಂದೂ ವಿವಾಹ ಕಾಯ್ದೆಯ ನಿಯಮಗಳಿಗೆ ಒಳಪಟ್ಟಿರುತ್ತದೆ ಎಂದು ಬಾಂಬೆ ಹೈಕೋರ್ಟ್ನ ನಾಗ್ಪುರ ಪೀಠವು ಮಹತ್ವದ ತೀರ್ಪಿನಲ್ಲಿ ಹೇಳಿದೆ.
ಮಹಿಳೆಯ ಪತಿ ತನ್ನ ಪತ್ನಿಯಿಂದ ವಿಚ್ಛೇದನಕ್ಕಾಗಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡಿಸಿದ ಬಾಂಬೆ ಹೈಕೋರ್ಟ್ ಕಲಂ 13ರ ಅಡಿಯಲ್ಲಿ ಮಹಿಳೆ ಮದುವೆಯ ಕೆಲಸಕ್ಕೆ ಹೋಗುವುದು ಕ್ರೌರ್ಯ ಎಂದು ಹೇಳಲಾಗುವುದಿಲ್ಲ ಎಂದು ಅಭಿಪ್ರಾಯಪಟ್ಟಿತು.
ವಿಚ್ಛೇದನ ಕೋರಿ ಪತಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಅತುಲ್ ಚಂದೂರ್ಕರ್ ಮತ್ತು ಊರ್ಮಿಳಾ ಜೋಶಿ-ಫಾಲ್ಕೆ ಅವರ ಪೀಠ ವಿಚಾರಣೆ ನಡೆಸಿತು. ಪತ್ನಿ ಕೆಲಸಕ್ಕೆ ಹೋಗುವುದಾಗಿ ಪತಿ ಜೊತೆ ಆಗಾಗ್ಗೆ ಜಗಳವಾಡುತ್ತಿದ್ದಳು ಮತ್ತು ಕೆಲಸ ಸಿಗುವವರೆಗೂ ಮಗುವನ್ನು ಹೆರುವುದಿಲ್ಲ ಎಂದು ಬೆದರಿಕೆ ಹಾಕುತ್ತಿದ್ದಳು ಎಂದು ಅರ್ಜಿದಾರರು ಆರೋಪಿಸಿದ್ದರು.

ಪತ್ನಿಯ ಅಧಿಕಾರ
ಆದರೆ, ಮಂಗಳವಾರ ಬಾಂಬೆ ಹೈಕೋರ್ಟ್ ನೀಡಿದ ಆದೇಶದಲ್ಲಿ "ಪ್ರಸ್ತುತ ಈ ಪ್ರಕರಣದಲ್ಲಿ ಅರ್ಹತೆ ಹೊಂದಿರುವ ಹೆಂಡತಿಯ ಬಯಕೆಯನ್ನು ಕ್ರೌರ್ಯ ಎಂದು ಕರೆಯಲಾಗುವುದಿಲ್ಲ, ಪತಿ ಸಮಯ ಮತ್ತು ವಿಧಾನದ ಬಗ್ಗೆ ಪುರಾವೆಗಳನ್ನು ಸಹ ತೋರಿಸಲಿಲ್ಲ. ಪತಿ ಕ್ರೌರ್ಯವೆಸಗಿದ್ದಕ್ಕೆ ಇನ್ನೊಂದು ಕಾರಣವೆಂದರೆ ಆತನ ಪತ್ನಿಯು ತನ್ನ ಒಪ್ಪಿಗೆಯಿಲ್ಲದೆ ಗರ್ಭಪಾತ ಮಾಡಿಸಿಕೊಂಡಿರುವುದು ಎಂದು ಪೀಠವು ಗಮನಿಸಿದೆ."
ಗರ್ಭಾವಸ್ಥೆಯ ಕಾರಣದಿಂದಲೇ ಪತ್ನಿ ಟ್ಯೂಷನ್ ತರಗತಿಗಳನ್ನು ನಿರಾಕರಿಸಿದ್ದಾರೆ ಎಂದು ನ್ಯಾಯಾಲಯವು ಕಂಡುಹಿಡಿದಿದೆ. ಹೀಗಾಗಿ ಆಕೆ ತನ್ನ ಮಗುವಿನ ಜವಾಬ್ದಾರಿಯನ್ನು ಹೊರಲು ಸಿದ್ಧ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಗರ್ಭಧಾರಣೆಯನ್ನು ಮುಂದುವರಿಸಬೇಕೆ ಅಥವಾ ಬೇಡವೇ ಎಂಬುದು ಪತ್ನಿಯ ಅಧಿಕಾರವಾಗಿದೆ. ಭಾರತದ ಸಂವಿಧಾನದ ಪ್ರಕಾರ ಮಹಿಳೆಗೆ ಬಲವಂತವಾಗಿ ಮಗುವಿಗೆ ಜನ್ಮ ನೀಡುವಂತಿಲ್ಲ. ಜತೆಗೆ ವಿಚ್ಛೇದನಕ್ಕೆ ಎರಡನೇ ಕಾರಣವಾಗಿ ಪತ್ನಿ ತನ್ನನ್ನು ಬಿಟ್ಟು ಹೋಗಿದ್ದಾಳೆ ಎಂದು ಪತಿ ಹೇಳಿಕೆ ನೀಡಿದ್ದರು. ಮದುವೆಯಾದ ನಾಲ್ಕೇ ವರ್ಷದಲ್ಲಿ ಪತ್ನಿ ಮನೆ ಬಿಟ್ಟು ಹೋಗಿದ್ದಾಳೆ ಎಂದು ಹೇಳಿಕೊಂಡಿದ್ದಾನೆ.

ಆದರೆ, ಆಕೆಯನ್ನು ಅತ್ತೆಯ ಮನೆಗೆ ಕರೆತರಲು ಪತಿಯಿಂದ ಹೆಚ್ಚಿನ ಪ್ರಯತ್ನ ನಡೆದಿಲ್ಲ ಎಂದು ನ್ಯಾಯಾಲಯ ಗಮನಿಸಿದ್ದು, ಹೆಂಡತಿಯು ಸಂಬಂಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಬಯಸಿದ್ದಾಳೆಂದು ತೋರಿಸಲು ಯಾವುದೇ ಪುರಾವೆಗಳಿಲ್ಲ. ಇದರೊಂದಿಗೆ ವಿಚ್ಛೇದನ ಕೋರಿ ಪತಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಪೀಠ ವಜಾಗೊಳಿಸಿದೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications