ತ್ರಿವಳಿ ತಲಾಖ್ ನೀಡಿದರೆ ಸಾಮಾಜಿಕ ಬಹಿಷ್ಕಾರ: ಮುಸ್ಲಿಂ ಕಾನೂನು ಮಂಡಳಿ
ತ್ರಿವಳಿ ತಲಾಖ್ ವಿಚಾರಣೆ ವೇಳೆ ಸುಪ್ರೀಂ ಕೋರ್ಟಿನಲ್ಲಿ ಸೋಮವಾರ ಹೊಸ ಅಫಿಡವಿಟ್ ಸಲ್ಲಿಸಿರುವ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ತ್ರಿಪಲ್ ತಲಾಖ್ ನೀಡುವವರಿಗೆ ಸಮಾಜದಿಂದ ಬಹಿಷ್ಕಾರ ಹಾಕುವುದಾಗಿ ತಿಳಿಸಿದೆ.
ನವದೆಹಲಿ, ಮೇ 22: ತ್ರಿವಳಿ ತಲಾಖ್ ವಿಚಾರಣೆ ವೇಳೆ ಸುಪ್ರೀಂ ಕೋರ್ಟಿನಲ್ಲಿ ಸೋಮವಾರ ಹೊಸ ಅಫಿಡವಿಟ್ ಸಲ್ಲಿಸಿರುವ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ತ್ರಿಪಲ್ ತಲಾಖ್ ನೀಡುವವರಿಗೆ ಸಮಾಜದಿಂದ ಬಹಿಷ್ಕಾರ ಹಾಕುವುದಾಗಿ ತಿಳಿಸಿದೆ.
ಇನ್ನು ಮದುಮಗನಿಗೆ ತ್ರಿವಳಿ ತಲಾಖ್ ನೀಡದಂತೆ ಸೂಚಿಸಲು ಖ್ವಾಜಿಗಳಿಗೆ ಸಲಹೆ ನೀಡುತ್ತೇವೆ. ಇದಲ್ಲದೆ ತ್ರಿವಳಿ ತಲಾಖ್ ಬಗ್ಗೆ ಜಾಗೃತಿ ಮೂಡಿಸಲಾಗುವುದು. ಇದಕ್ಕಾಗಿ ವೆಬ್ಸೈಟ್ ಹಾಗೂ ಇತರೆ ಸಾಮಾಜಿಕ ಮಾಧ್ಯಮಗಳನ್ನು ಬಳಸಿಕೊಳ್ಳಲಾಗುವುದು ಎಂದೂ ಹೇಳಿದೆ.

ಒಂದೊಮ್ಮೆ ದಾಂಪತ್ಯದಲ್ಲಿ ಬಿರುಕು ಬಿಟ್ಟಾಗ ಮೂರು ಬಾರಿ ತಲಾಕ್ ಹೇಳದಂತೆ ಮದುವೆ ಸಂದರ್ಭದಲ್ಲೇ ವರನಿಗೆ ಬುದ್ದಿ ಹೇಳಲಾಗುವುದು ಎಂದು ಹೇಳಿರುವ ಕಾನೂನು ಮಂಡಳಿ ಇದು ಶರಿಯತ್ ವಿರುದ್ಧವಾಗಿದೆ ಎಂದೂ ಅಫಿಡವಿಟ್ ನಲ್ಲಿ ತಿಳಿಸಿದೆ.
ಆದರೆ ಇದೊಂದು 'ಕಣ್ಣೊರೆಸುವ ತಂತ್ರ' ಎಂದು ಮುಸ್ಲಿಂ ಮಹಿಳಾ ಸಂಘಟನೆಗಳು ಹೇಳಿವೆ. ಮಾತ್ರವಲ್ಲ ಇದೊಂದು 'ವ್ಯರ್ಥ ಪ್ರಯತ್ನ' ಎಂದೂ ಅವು ಹೇಳಿವೆ.
ಸುಪ್ರೀಂ ಕೋರ್ಟಿನ ಪಂಚ ಸದಸ್ಯರ ಪೀಠ ವಾದ ವಿವಾದಗಳನ್ನು ಆಲಿಸಿದ್ದು ತ್ರಿವಳಿ ತಲಾಖ್ ವಿಚಾರವಾಗಿ ತನ್ನ ತೀರ್ಪನ್ನು ಇನ್ನೂ ಕಾಯ್ದಿರಿಸಿದೆ. ಕೇಂದ್ರ ಸರಕಾರ ತ್ರಿವಳಿ ತಲಾಖ್ ವಿರೋಧಿಸಿರುವುದರಿಂದ ಸುಪ್ರೀಂ ಕೋರ್ಟ್ ನೀಡುವ ತೀರ್ಮಾನವನ್ನು ಎಲ್ಲರೂ ಎದುರು ನೋಡುತ್ತಿದ್ದಾರೆ.
ಇನ್ನು ಭಾನುವಾರವಷ್ಟೇ ಕೇಂದ್ರ ಸರಕಾರ ಅಗತ್ಯಬಿದ್ದರೆ ತ್ರಿವಳಿ ತಲಾಕ್ ನಿಷೇಧಕ್ಕೆ ಕಾನೂನು ತಿದ್ದುಪಡಿ ತರಲಾಗುವುದು ಎಂದು ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications