ಅಖಿಲೇಶ್ ಮುಂದಿರುವ ಮಾರ್ಗೋಪಾಯಗಳೇನು?
ಲಕ್ನೋ, ಡಿಸೆಂಬರ್ 31: ಸಮಾಜವಾದಿ ಪಕ್ಷದಿಂದ ಉಚ್ಚಾಟನೆ ಹೊಂದಿದ ಮೇಲೆ ಅಖಿಲೇಶ್ ಯಾದವ್ ಮನೆಯಲ್ಲಿ ಮಹತ್ವದ ಸಭೆ ನಡೆಯುತ್ತಿದ್ದು ನಂತರ ರಾಜ್ಯಪಾಲರನ್ನು ಭೇಟಿ ಮಾಡಿ ಅಸೆಂಬ್ಲಿಯನ್ನು ವಿಸರ್ಜನೆ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಪಕ್ಷದ ಒಳಿತಿಗಾಗಿ ನಾನು ಅಖಿಲೇಶ್ ಯಾದವ್ ನನ್ನು ಹೊರಹಾಕಲಿದ್ದೇನೆ ಎಂದು ಮುಲಾಯಂ ಸಿಂಗ್ ಯಾದವ್ ಶುಕ್ರವಾರ ತಿಳಿಸಿದ್ದರು. ಈ ಸಂಬಂಧ ರಾಜ್ಯಪಾಲರು, ಇದ್ದು ಅಪ್ಪ ಮಕ್ಕಳು ಮತ್ತು ಪಕ್ಷದ ಆಂತರಿಕ ಸಮಸ್ಯೆ ಎನೇನಾಗುವುದೋ ನೋಡಬೇಕು ಎಂದು ತಿಳಿಸಿದ್ದರು.[ಅಖಿಲೇಶ್ ಉಚ್ಚಾಟನೆಯ ಹಿಂದೆ ಮುಲಾಯಂ ಎರಡನೇ ಕುಟುಂಬದ ಕೈವಾಡ?]

ಅಖಿಲೇಶ್ ಮತ್ತು ಮುಲಾಯಂ ರಾಜ್ಯಪಾಲರನ್ನು ಬೇಟಿಯಾಗುವ ಸಾಧ್ಯತೆಯಿದ್ದು, ಪ್ರಸ್ತುತ ಸಭೆಯಲ್ಲಿ ಯಾವ ಎಂಎಲ್ ಎಗಳು ಯಾರ ಹಿಂದೆ ಹೊಗುತ್ತಾರೆ ಎಂಬುದೇ ತಿಳಿಯದಾಗಿದೆ. ಕೆಲವರು ಅಪ್ಪ- ಮಕ್ಕಳು ಒಂದಾಗಲೆಂದು ಬಯಸಿದರೆ ಮತ್ತೆ ಕೆಲವರು ಪಕ್ಷವನ್ನು ಒಡೆದು ಹಾಳುಮಾಡುತ್ತಿದ್ದಾರಲ್ಲ ಎಂದು ಕೊಳ್ಳುತ್ತಿದ್ದಾರೆ.
ಅಖೇಲೇಶ್ ಮುಂದಿರುವ ಆಯ್ಕೆಗಳು
ಇರುವ ಮೊದಲ ಆಯ್ಕೆಯೆಂದರೆ ವಿಧಾನ ಸಭೆಯನ್ನು ವಿಸರ್ಜನೆ ಮಾಡಿ, ಅಭ್ಯರ್ಥಿಗಳು ಮತ್ತು ಕ್ಷೇತ್ರಗಳ ಪಟ್ಟಿ ಮಾಡಿ ಅಭ್ಯರ್ಥಿಗಳನ್ನು ಸ್ಪರ್ಧಿಸಲು ಅವಕಾಶ ಮಾಡುವುದು.
ಮತ್ತೊಂದು ಆಯ್ಕೆಯಲ್ಲಿ ಪಕ್ಷವನ್ನು ತ್ಯಜಿಸಿ ಏಕಾಂಗಿಯಾಗಿ ಅಖಿಲೇಶ್ ಹೋರಾಟ ಮಾಡುವುದು, ಇದು ಸಾಧ್ಯವೇ? ಏಕೆಂದರೆ ಅವರಿಗೆ ತಂದೆಯ ಸಾಮರ್ಥ್ಯ ಮತ್ತು ಶಕ್ತಿ ಗೊತ್ತಿದೆ. ಅದರೆ ಪಕ್ಷದಲ್ಲಿ ಅಖಿಲೇಶ್ ರಂತೆ ಯುವ ಕಟ್ಟಾಳುಗಳ ಬಲ ಕುಸಿಯುವ ಸಾಧ್ಯತೆಯಿದೆ.
ಅಖಿಲೇಶ್ ಅವರು ಕಾಂಗ್ರೆಸ್ ಸೇರ ಬಯಸುತ್ತಾರೆಯೇ? ಕಾಂಗ್ರೆಸ್ ಲೀಡರ್ ರಶೀದ್ ಅಲ್ವಿ ಅಖೀಲೇಶ್ ಕಡೆಗಿದ್ದಾರೆ. ಇನ್ನು ಕಾಂಗ್ರೆಸ್ಸಿನಿಂದ ರಾಹುಲ್ ಗಾಂಧಿಯವರಿಗೆ ಉತ್ತರ ಪ್ರದೇಶದಲ್ಲಿ ಕಡಕ್ ಆದ ಅಭ್ಯರ್ಥಿಯು ಅಖಿಲೇಶ್ ಆದರೆ ಅದಕ್ಕಿಂತ ಬೇರೆ ಸಂಭ್ರಮದ ವಿಷಯವಿಲ್ಲ ಎಂದು ರಾಜಕೀಯ ವಿಮರ್ಶಕರು ಆಲೋಚನೆ ಮಾಡುತ್ತಿದ್ದಾರೆ.
ಭಾನುವಾರ ಅಖಿಲೇಶ್ ಯಾದವ್ ಸೇರಿದಂತೆ ಪಕ್ಷ ಬೆಂಬಲಿಗರ ಮಹತ್ವದ ಸಮಾವೇಶ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications