ರಾಹುಲ್ ಪ್ರಧಾನಿಯಾಗುವುದು ಮೈತ್ರಿಕೂಟದ 'ಕೈ'ಯಲ್ಲಿದೆ!
ನವದೆಹಲಿ, ಅಕ್ಟೋಬರ್ 05: ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆಯಲ್ಲಿ ಮುಂದಿನ ಮಾತನಾಡುತ್ತಾ, ಪ್ರಧಾನಿಯಾಗುವ ಅವಕಾಶ ಸಿಕ್ಕರೆ, ಯಾಕೆ ತಪ್ಪಿಸಿಕೊಳ್ಳಲಿ ಎಂಬರ್ಥದಲ್ಲಿ ಹೇಳಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಈಗ ಬೇರೆಯದ್ದೇ ರಾಗ ಹಾಡುತ್ತಿದ್ದಾರೆ. ನಾನು ಪ್ರಧಾನಿಯಾಗುವುದು ಬಿಡುವುದು ಮೈತ್ರಿಕೂಟದ ಕೈಲಿದೆ. ಮಿತ್ರಪಕ್ಷಗಳು ಬಯಸಿದರೆ ನಾನೇ ಪ್ರಧಾನಿ ಅಭ್ಯರ್ಥಿ ಎಂದಿದ್ದಾರೆ.
ಎನ್ಡಿಎಯ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ವಿರುದ್ಧ ಯಾರು ಪ್ರತಿಸ್ಪರ್ಧಿಯಾಗಲಿದ್ದಾರೆ ಎಂಬ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ. ಕಾಂಗ್ರೆಸ್ಸಿನಿಂದ ರಾಹುಲ್ ಗಾಂಧಿ, ಬಿಎಸ್ಪಿಯ ಮಾಯಾವತಿ, ಎಸ್ಪಿಯ ಮುಲಾಯಂ, ತೃಣಮೂಲದ ಮಮತಾ ಹೀಗೆ ಎಲ್ಲರೂ ಸಿದ್ಧರಾಗುತ್ತಿದ್ದಾರೆ.
ಆದರೆ, ಲೋಕಸಭೆ ಚುನಾವಣೆ 2019ರಲ್ಲಿ ಬಿಜೆಪಿ ನೇತೃತ್ವ ಕೂಟವನ್ನು ಸೋಲಿಸುವುದು ನಮ್ಮ ಗುರಿ ಎಂದು ರಾಹುಲ್ ಗಾಂಧಿ ಅವರು 16ನೇ ಹಿಂದೂಸ್ತಾನ್ ಟೈಮ್ಸ್ ಲೀಡರ್ ಶಿಪ್ ಸಮೀಟ್ ನಲ್ಲಿ ಮಾತನಾಡುತ್ತಾ ಹೇಳಿದರು.

ಪ್ರಧಾನಿ ಯಾರಾಗಬೇಕು ಎಂಬುದನ್ನು ಎನ್ಡಿಎ ಸೋಲಿನ ಬಳಿಕ ನಿರ್ಧರಿಸಲಾಗುತ್ತದೆ. ಮಿತ್ರಪಕ್ಷಗಳು ಬಯಸಿದರೆ ನಾನೇ ಪ್ರಧಾನಿ ಅಭ್ಯರ್ಥಿಯಾಗುವೆ ಎಂದರು.
ವಿಪಕ್ಷಗಳ ಮಹಾಮೈತ್ರಿಯಾಗಿ ಆದಷ್ಟು ಬೇಗ ಯುಪಿಎ 3 ರೂಪುಗೊಳ್ಳುವುದು ಮುಖ್ಯವಾಗಿದೆ. ರಾಜ್ಯಗಳ ವಿಧಾನಸಭೆ ಚುನಾವಣೆಗೂ ಲೋಕಸಭೆ ಚುನಾವಣೆಯ ಸಂದರ್ಭದ ಮೈತ್ರಿಗೂ ವ್ಯತ್ಯಾಸವಿದೆ. ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ ಗಢ ಹಾಗೂ ತೆಲಂಗಾಣ ವಿಧಾನಸಭೆಯಲ್ಲಿ ಕಾಂಗ್ರೆಸ್ ಉತ್ತಮ ಫಲಿತಾಂಶ ನೀಡುವ ವಿಶ್ವಾಸವಿದೆ ಎಂದು ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
2014ರ ಸಾರ್ವತ್ರಿಕ ಚುನಾವಣೆ ಫಲಿತಾಂಶ ಹಾಗೂ ನಂತರ ಬೆಳವಣಿಗೆಗಳನ್ನು ಗಮನಿಸಿದರೆ, ಕಾಂಗ್ರೆಸ್ಸಿಗೆ ಮಿತ್ರಪಕ್ಷಗಳ ಜತೆ ಹೊಂದಾಣಿಕೆ ಅನಿವಾರ್ಯವಾಗಿದೆ. ಇದೇ ರೀತಿ ಬಿಜೆಪಿ ಕೂಡಾ ಕೆಲ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳ ಬೇಡಿಕೆಗಳಿಗೆ ಮಣಿಯಲೇ ಬೇಕಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications