ಮುಖ ಮುರಿದುಹಾಕುತ್ತೇನೆ: ಸಚಿವರಿಂದ ಬಿಜೆಪಿ ನಾಯಕನಿಗೆ ಧಮ್ಕಿ!
ಕೋಲ್ಕತ್ತಾ, ಮಾರ್ಚ್ 27: ರಾಜಕಾರಣಿಗಳ ಹೊಡಿಬಡಿ ಹೇಳಿಕೆಗೆ ಪಶ್ಚಿಮ ಬಂಗಾಳ ಸಾಕ್ಷಿಯಾಗಿದೆ. ಬಿಜೆಪಿ ಮುಖಂಡ ದಿಲಿಪ್ ಘೋಷ್ ಅವರ ಮೂಗು, ಕಣ್ಣು, ಮುಖ ಮುರಿದುಹಾಕುತ್ತೇನೆ ಎಂದು ತಮ್ಮೊಂದಿಗೆ ಕುಸ್ತಿಗೆ ಆಹ್ವಾನಿಸಿದ್ದಾರೆ ಪಶ್ಚಿಮ ಬಂಗಾಳದ ಮಂತ್ರಿ ರಬೀದ್ರನಾಥ್ ಘೋಷ್!
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇತ್ತೀಚೆಗೆ ನಡೆದ ರಾಮನವಮಿ ಉತ್ಸವದಂದು ನಡೆದ ಯಾತ್ರೆಯಲ್ಲಿ ಬಿಜೆಪಿ ಮುಖಂಡ ದಿಲಿಪ್ ಘೋಷ್ ಖಡ್ಗವೊಂದನ್ನು ಹಿಡಿದಿದ್ದರು. ಆದರೆ ಪಶ್ಚಿಮಬಂಗಾಳದಲ್ಲಿ ಸಾರ್ವಜನಿಕ ಪ್ರದೇಶಗಳಲ್ಲಿ ಖಡ್ಗ, ಕತ್ತಿಯಂಥ ಮಾರಕಾಸ್ತ್ರಗಳನ್ನು ಬಳಸುವುದನ್ನು ವಿಷೇಧಿಸಿರುವ ಹಿನ್ನೆಲೆಯಲ್ಲಿ ದಿಲಿಪ್ ಅವರ ನಡೆ ವಿವಾದಾಸ್ಪದವೆನ್ನಿಸಿತ್ತು.
ಆದರೆ ಇದಕ್ಕೆ ಸಮಜಾಯಿಷಿ ನೀಡಿದ್ದ ದಿಲಿಪ್ ಘೋಷ್, 'ಹಿಂದು ಸಂಪ್ರದಾಯದಲ್ಲಿ ಆಯುದ್ಹಗಳನ್ನು ಪೂಜಿಸುವ ಪರಿಪಾಠವಿದೆ. ಅದಕ್ಕೆಂದೇ ನಾನು ಆಯುಧವನ್ನು ಹಿಡಿದಿದ್ದೆ. ಇದನ್ನು ನಿಷೇಧಿಸಿರುವ ಕುರಿತು ನನಗೆ ಮಾಹಿತಿ ಇಲ್ಲ. ಅಂಥ ಪ್ರಕಟಣೆಗಳು ಎಲ್ಲಿವೆ ತೋರಿಸಿ' ಕೇಳಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ರಬೀಂದ್ರನಾಥ್ ಘೋಷ್, ಅವರಿಗೆ ಕುಸ್ತಿ ಆಹ್ವಾನ ನೀಡಿದ್ದಾರೆ. ನನ್ನೊಂದಿಗೆ ಹೊಡೆದಾಟಕ್ಕೆ ಸಿದ್ಧರಾಗಿ. ನಿಮಗೆ ಆಯುಧದಲ್ಲಿ ಹೊಡೆದಾಡುವುದಕ್ಕೆ ಬಾರದಿದ್ದರೆ, ಕುಸ್ತಿಗೆ ಬನ್ನಿ. ನಿಮ್ಮ ಮುಖ, ಮೂಗು, ಕಣ್ಣನ್ನು ಮುರಿದು ಹಾಕಲು ನನಗೆ ಮೂರೇ ಮೂರು ನಿಮಿಷ ಸಾಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ರಾಮನವಮಿ ಹಬ್ಬದ ಮೆರವಣಿಗೆ ಮೇಲೆ ಕಿಡಿಗೇಡಿಗಳು ದಾಳಿ ನಡೆಸಿದ್ದರಿಂದ ಪಶ್ಚಿಮ ಬಂಗಾಳದಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿತ್ತು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications